AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಮಂದಿ ಸಚಿವರು ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆಂದು ನನಗೆ ಗೊತ್ತಿಲ್ಲ: ದಿನೇಶ್ ಕಲ್ಲಹಳ್ಳಿ

ನಾನು ಅಕ್ರಮಕ್ಕೆ ಸಂಬಂಧಪಟ್ಟ ಮಾಹಿತಿ ಇದೆ ಅಂತಾ ಹೇಳಿದ್ದೆ. ಆದರೆ, ಇವರು ಯಾವ ಹಂತದಲ್ಲಿ ಯಾವ ವಿಚಾರಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ತಿಳಿದಿಲ್ಲ.

6 ಮಂದಿ ಸಚಿವರು ಯಾಕೆ ಕೋರ್ಟ್ ಮೊರೆ ಹೋಗಿದ್ದಾರೆಂದು ನನಗೆ ಗೊತ್ತಿಲ್ಲ: ದಿನೇಶ್ ಕಲ್ಲಹಳ್ಳಿ
ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ
Follow us
TV9 Web
| Updated By: ganapathi bhat

Updated on:Apr 06, 2022 | 7:24 PM

ರಾಮನಗರ: ರಾಜ್ಯದ 6 ಮಂದಿ ಸಚಿವರು ಯಾವ ವಿಚಾರವಾಗಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಇಂದು (ಮಾರ್ಚ್ 6) ತಿಳಿಸಿದ್ದಾರೆ. ನಾನು ಅಕ್ರಮಕ್ಕೆ ಸಂಬಂಧಪಟ್ಟ ಮಾಹಿತಿ ಇದೆ ಅಂತಾ ಹೇಳಿದ್ದೆ. ಆದರೆ, ಇವರು ಯಾವ ಹಂತದಲ್ಲಿ ಯಾವ ವಿಚಾರಕ್ಕೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಸಿಡಿ ಪ್ರಕರಣದ ಮೂಲಕ ಸುದ್ದಿಯಲ್ಲಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇಂದು ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ಸಂದರ್ಶನ ನೀಡಿದ್ದಾರೆ. ಆ ವೇಳೆ ಹೀಗೆ ಮಾತನಾಡಿದ್ದಾರೆ. ನಾನು ಸಿಡಿ ವಿಚಾರವಾಗಿ ಸುಪ್ರೀಂ ಕೋರ್ಟ್ ವಕೀಲರ ಜತೆಗೆ ಚರ್ಚೆ ಮಾಡುತ್ತಿದ್ದೇನೆ. ನಮ್ಮ ವಕೀಲರು ಏನು ಸಲಹೆ ಕೊಡುತ್ತಾರೆ ಎಂದು ಕಾಯುತ್ತಿದ್ದೇನೆ. ನಂತರ ನಿಮಗೆ ತಿಳಿಸುತ್ತೇನೆ ಎಂದು ಕಲ್ಲಹಳ್ಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನನ್ನ ವಿರುದ್ಧ ಪ್ರತಿಭಟನೆ ಮಾಡುವವರು ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ನನ್ನ ತಕರಾರು ಏನು ಇಲ್ಲ. ತನಿಖೆ ಯಾವ ರೀತಿ ಆಗುತ್ತದೊ ಅದರ ಮೇಲೆ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ನಿಗದಿಯಾಗುತ್ತದೆ ಎಂದು ದಿನೇಶ್ ಕಲ್ಲಹಳ್ಳಿ ತಮ್ಮ ವಿರುದ್ಧದ ಅಭಿಪ್ರಾಯಗಳಿಗೆ ಉತ್ತರಿಸಿದ್ದಾರೆ. ತನಿಖೆ ಇನ್ನೂ ಪೂರ್ಣವಾಗಿಲ್ಲ. ಮೊದಲು ತನಿಖೆಯಾಗಲಿ. ಅಕ್ರಮದ ಬಗ್ಗೆ ಮಾಹಿತಿಯನ್ನು ನನ್ನ ವಕೀಲರ ಜತೆಗೆ ಚರ್ಚೆಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.

ದಿನೇಶ್ ಕಲ್ಲಹಳ್ಳಿ ಮನೆಯ ಬಳಿ, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಸರದಿ ಪ್ರಕಾರ ಪಾಯಿಂಟ್ ಕರ್ತವ್ಯಕ್ಕೆಂದು ಸಿಬ್ಬಂದಿ ನೇಮಿಸಿರುತ್ತಾರೆ ಹಾಗೂ ದಿನೇಶ್ ಕಲ್ಲಹಳ್ಳಿ ಅವರ ಭದ್ರತೆಗೆಂದು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಒಬ್ಬರು ಎ.ಎಸ್.ಐ. ಮತ್ತು ಒಬ್ಬರು ಗನ್ ಮ್ಯಾನ್ ವ್ಯವಸ್ಥೆ ಮಾಡಿರುತ್ತಾರೆಂದು ತಿಳಿದುಬಂದಿದೆ.

ವಿಡಿಯೋದಲ್ಲಿ ಇರುವ ಮಹಿಳೆ ನನಗೆ ಪರಿಚಯವಿಲ್ಲ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 4 ಗಂಟೆಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿ ಹೊರಗೆ ಬಂದಿರುವ ದಿನೇಶ್​ ಕಲ್ಲಹಳ್ಳಿ, ಪೊಲೀಸರಿಗೆ ಸಂಪೂರ್ಣ ಮಾಹಿತಿ ಕೊಟ್ಟಿದ್ದೇನೆ. ತನಿಖೆಗೆ ಪೂರಕವಾಗಿ ಮಾಹಿತಿ ಕೊಟ್ಟಿದ್ದೀನಿ. ತನಿಖೆ ನಡೆಯುತ್ತಿರುವುದರಿಂದ ನಾನು ಏನನ್ನೂ ಹೇಳಲು ಬರುವುದಿಲ್ಲ. ಮುಚ್ಚಿದ ಲಕೋಟೆಯಲ್ಲಿ ನನಗೆ ಕೊಟ್ಟ ಸಿಡಿಯನ್ನೇ ಪೊಲೀಸರಿಗೆ ಕೊಟ್ಟಿದ್ದೇನೆ. ಅವತ್ತು ಕೊಟ್ಟ ದೂರಿಗೆ ನಾನು ಬದ್ಧನಾಗಿದ್ದೇನೆ. ನನ್ನ ದೂರಿನಲ್ಲಿ ಮೊದಲ ದಿನವೇ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದೇನೆ. ಈ ಸಿಡಿಯ ಸತ್ಯಾಸತ್ಯತೆ ಬಯಲಿಗೆಳೆಯಿರಿ ಅಂತ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದರು.

ಆ ವಿಡಿಯೋದಲ್ಲಿ ಇರುವ ಮಹಿಳೆ ನನಗೆ ಪರಿಚಯವಿಲ್ಲ. ಆಕೆಯ ಕುಟುಂಬಸ್ಥರು ನನ್ನನ್ನು ಭೇಟಿ ಮಾಡಿದ್ದರು. ನನಗೆ ಯಾರು ಪರಿಚಯ ಅಂತ ಬಹಿರಂಗಪಡಿಸಲು ಆಗಲ್ಲ. ಎಫ್​ಐಆರ್ ಮಾಡ್ತಾರಾ ಇಲ್ವಾ ಅಂತ ಗೊತ್ತಿಲ್ಲ. ಪೊಲೀಸರು ತನಿಖೆ ಮಾಡ್ತೀವಿ ಅಂತ ಹೇಳಿದ್ದಾರೆ. ಕೆಲವು ವಿಷಯಗಳನ್ನು ಮಾಧ್ಯಮಗಳ ಮೂಲಕ ಹೇಳಲು ಆಗುವುದಿಲ್ಲ. ನನಗೆ ಗೊತ್ತಿರುವುದನ್ನು ಪೊಲೀಸರಿಗೆ ಹೇಳಿದ್ದೇನೆ ಎಂದು ಕಬ್ಬನ್​ ಪಾರ್ಕ್​ ಠಾಣೆ ಪೊಲೀಸರಿಂದ ಸುದೀರ್ಘ ವಿಚಾರಣೆಯ ನಂತರ ಮಾಧ್ಯಮಗಳಿಗೆ ದಿನೇಶ್ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ಸಹಮತವಿದೆ. ಬ್ಲಾಕ್​ಮೇಲ್ ಆಗಿದೆ ಆಂದ್ರೆ ತನಿಖೆ ಆಗಲಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಕೇಸ್: ಕಬ್ಬನ್​ ಪಾರ್ಕ್ ಪೊಲೀಸರಿಗೆ ದಿನೇಶ್​ ಕಲ್ಲಹಳ್ಳಿ ಕೊಟ್ಟ ಹೇಳಿಕೆಯಲ್ಲಿ ಜೊಳ್ಳೇ ಜಾಸ್ತಿ

ಗಂಟೆಗಟ್ಟಲೆ ಹಾಕಿ ಪಂಚ್ ಮಾಡ್ತೀರಿ.. ನಿಮ್ಮ ಭಯಕ್ಕಾಗಿ ಕೋರ್ಟ್​​ಗೆ ಹೋಗುವಂತಾಯ್ತು: ಸಚಿವ ಶಿವರಾಂ ಹೆಬ್ಬಾರ್

Published On - 8:43 pm, Sat, 6 March 21

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ