AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ: ಹೆಚ್​​​ಡಿ ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟುಹೋಗದಂತೆ ಆಗ್ರಹ

ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್​ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್​​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು‌ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ: ಹೆಚ್​​​ಡಿ ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟುಹೋಗದಂತೆ ಆಗ್ರಹ
ನಿಖಿಲ್​ಗೆ ಕಾರ್ಯಕರ್ತರ ಮುತ್ತಿಗೆ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on:Mar 22, 2024 | 7:44 PM

Share

ರಾಮನಗರ, ಮಾರ್ಚ್​ 22: ಮಂಡ್ಯ ಕ್ಷೇತ್ರದಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಸ್ಪರ್ಧೆ ಸಾಧ್ಯತೆ ವಿಚಾರವಾಗಿ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಯನ್ನು ಮುಖಂಡರು, ಕಾರ್ಯಕರ್ತರಿಂದ ಮುತ್ತಿಗೆ ಹಾಕಿದ್ದಾರೆ. ಚನ್ನಪಟ್ಟಣದ ರೆಸಾರ್ಟ್​​ನಲ್ಲಿ ನಡೆಯುತ್ತಿದ್ದ ಜೆಡಿಎಸ್​ ಕಾರ್ಯಕರ್ತರ ಸಭೆಯ ಮಧ್ಯೆ ನಿಖಿಲ್​ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗಬಾರದೆಂದು ಆಗ್ರಹಿಸಿದ್ದಾರೆ. ಜೊತೆಗೆ ಮಂಡ್ಯ ಕ್ಷೇತ್ರದಲ್ಲಿ ನೀವೇ ಸ್ಪರ್ಧಿಸಿ, ನಾವು ಬಂದು ಪ್ರಚಾರ ಮಾಡುತ್ತೇವೆ. ಆದರೆ ಮಂಡ್ಯ ಕ್ಷೇತ್ರದಿಂದ ಹೆಚ್​​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲು‌ ಬಿಡುವುದಿಲ್ಲ ಎಂದು ಹೇಳಿದ್ದಾರೆ. JDS ಕಾರ್ಯಕರ್ತರ ಮಾತಿಗೆ ನಿಖಿಲ್ ಕುಮಾರಸ್ವಾಮಿ ತಲೆದೂಗಿದ್ದಾರೆ.

ಡಾ.ಮಂಜುನಾಥ್ ಅವರ ಗೆಲುವು ನಿಶ್ಚಿತ ಎಂದ ನಿಖಿಲ್ ಕುಮಾರಸ್ವಾಮಿ

ಬಳಿಕ ಮಾತನಾಡಿ ನಿಖಿಲ್ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಹಾಗಾಗಿ ಇಂದು ಕುಣಿಗಲ್​​ನಲ್ಲಿ ಸಭೆ ಮಾಡಿ ಈಗ ಚನ್ನಪಟ್ಟಣ ಕಾರ್ಯಕರ್ತರ ಸಭೆ ಮಾಡ್ತಿದ್ದೇನೆ. ಕಾರ್ಯಕರ್ತರನ್ನ ಸಜ್ಜುಗೊಳಿಸಿ ಮೈತ್ರಿ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡ್ತಿದ್ದೇವೆ. ಡಾ.ಮಂಜುನಾಥ್ ಸರಳ, ಸಜ್ಜನಿಕೆಯ ವ್ಯಕ್ತಿ. ಸುಮಾರು 8 ಲಕ್ಷ ಜನಕ್ಕೆ ಹೃದಯ ಆಪರೇಷನ್ ಮಾಡಿದ್ದಾರೆ. ಅವರ ಸೇವೆ ಬಗ್ಗೆ ಜನ ಮಾತನಾಡುತ್ತಿದ್ದಾರೆ. ಅವರು ಗೆಲುವು ನಿಶ್ಚಿತ ಎಂದಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಗೇಮ್​ ಚೇಂಜ್​, ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್!

ಮುಂದಿನ ತಿಂಗಳು ದಿನಾಂಕ 1ರ ಒಳಗೆ ಚುನಾವಣಾ ಕಾರ್ಯಕ್ರಮಗಳಲ್ಲಿ ಕುಮಾರಣ್ಣ ಭಾಗಿಯಾಗುತ್ತಾರೆ. ಡಾ.ಮಂಜುನಾಥ್ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ ವಿಚಾರ ಭಾನುವಾರ ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಾರೆ. ಬಳಿಕ ಈ ಬಗ್ಗೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಪುಟ್ಟರಾಜು ಮನಸ್ಸಿನ ಭಾವನೆ ಹೇಳಿದ್ದಾರೆ

ಮಂಡ್ಯದಿಂದ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ನಿನ್ನೆ ಸಿ.ಎಸ್.ಪುಟ್ಟರಾಜು ಹೇಳಿದ್ದನ್ನು ಗಮನಿಸಿದ್ದೇನೆ. ಅವರು ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಹೆಚ್​ಡಿ ದೇವೇಗೌಡ ಮತ್ತು ಪಕ್ಷದ ನಾಯಕರು ತೀರ್ಮಾನಿಸಿಲ್ಲ. ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಪಡೆಯಬೇಕು. ಎಲ್ಲರ ಜೊತೆಗೂ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಷಯವೊಂದರ ಮೇಲೆ ಒಂದೇ ವೇದಿಕೆಯಿಂದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬೇರೆ ಬೇರೆ ಹೇಳಿಕೆ ನೀಡುತ್ತಾರೆ: ನಿಖಿಲ್ ಕುಮಾರಸ್ವಾಮಿ

ಯಾರೇ ನಿಂತ್ರೂ ಕುಮಾರಣ್ಣನೇ ಅಭ್ಯರ್ಥಿ ಅನ್ನೋದು ನಮ್ಮ ಭಾವನೆ. ಅವರ ಮೇಲೆ ಮಂಡ್ಯ ಜಿಲ್ಲೆ ಜನತೆ ಪ್ರೀತಿ, ಭರವಸೆ ಇಟ್ಟಿದ್ದಾರೆ. ಚನ್ನಪಟ್ಟಣ, ರಾಮನಗರ ಜನರ ಅಭಿಪ್ರಾಯ ಪಡೆದು ತೀರ್ಮಾನ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:11 pm, Fri, 22 March 24

Follow Us
Syed Nizamuddin
Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?