AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಸ ನಾಯಕ, ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ಬಳಿ ಇದೆ 17 ಕೋಟಿಗೂ ಹೆಚ್ಚು ಆಸ್ತಿ, ಐಷಾರಾಮಿ ಕಾರು ಬಂಗಲೆ

ಜಗ್ಗೇಶ್ ಬಳಿ ಒಟ್ಟು 17,64,23,378 ರೂ ಆಸ್ತಿ ಇದೆ. ಸ್ಥಿರಾಸ್ತಿ: 13,25,00,000 ರೂ. ಮತ್ತು ಚರಾಸ್ತಿ- 4,39,23,378 ರೂ ಹೊಂದಿದ್ದಾರೆ. ಕೈಯಲ್ಲಿರುವ ಹಣ: 2,00,000 ರೂ. ಪತ್ನಿ ಬಳಿ ಇರುವ ಹಣ: 1,60,000 ರೂ. ಜಗ್ಗೇಶ್ ಬಳಿ 500 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ಇದೆ.

ನವರಸ ನಾಯಕ, ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ಬಳಿ ಇದೆ 17 ಕೋಟಿಗೂ ಹೆಚ್ಚು ಆಸ್ತಿ, ಐಷಾರಾಮಿ ಕಾರು ಬಂಗಲೆ
ನಟ ಜಗ್ಗೇಶ್
TV9 Web
| Updated By: ಆಯೇಷಾ ಬಾನು|

Updated on: May 31, 2022 | 11:24 PM

Share

ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್‌ಗಾಗಿ ಅನೇಕರು ಸರತಿ ಸಾಲಲ್ಲಿ ನಿಂತಿದ್ದರು. ಆದ್ರೆ ನವರಸ ನಾಯಕ ಜಗ್ಗೇಶ್ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆಗೊಳಿಸಿದೆ. ಕರ್ನಾಟಕವೂ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಸದ್ಯ ರಾಜ್ಯಸಭೆ ಬಿಜೆಪಿ ಅಭ್ಯರ್ಥಿ ಜಗ್ಗೇಶ್ ತಮ್ಮ ಆಸ್ತಿವಿವರ ಘೋಷಿಸಿಕೊಂಡಿದ್ದಾರೆ.

ಜಗ್ಗೇಶ್ ಬಳಿ ಒಟ್ಟು 17,64,23,378 ರೂ ಆಸ್ತಿ ಇದೆ. ಸ್ಥಿರಾಸ್ತಿ: 13,25,00,000 ರೂ. ಮತ್ತು ಚರಾಸ್ತಿ- 4,39,23,378 ರೂ ಹೊಂದಿದ್ದಾರೆ. ಕೈಯಲ್ಲಿರುವ ಹಣ: 2,00,000 ರೂ. ಪತ್ನಿ ಬಳಿ ಇರುವ ಹಣ: 1,60,000 ರೂ. ಜಗ್ಗೇಶ್ ಬಳಿ 500 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ಇದೆ. ಹಾಗೂ ಅವರ ಪತ್ನಿ ಬಳಿ 500 ಗ್ರಾಂ. ಚಿನ್ನ, 3 ಕೆಜಿ ಬೆಳ್ಳಿ ಇದೆ. ಕೃಷಿ ಭೂಮಿ- 6,75,00,000 ರೂ. ಮನೆ -6,50,00,000 ರೂ. ಪತ್ನಿ ಹೆಸರಲ್ಲಿರುವ ಮನೆ- 4,50,00,000 ರೂ. 2 ಬಿಎಂಡಬ್ಲ್ಯು, 1 ಇನ್ನೋವಾ, ರಾಯಲ್ ಎನ್‌ಫೀಲ್ಡ್ ಬೈಕ್, ಎಕ್ಸೆಸ್ ಯು.ಝಡ್ ಸ್ಕೂಟಿ ಇಟ್ಟುಕೊಂಡಿದ್ದಾರೆ. ಜಗ್ಗೇಶ್ ಹೆಸರಲ್ಲಿ 2,91,24,140 ರೂ ಸಾಲ ಇದ್ದು ಅವರ ಪತ್ನಿ ಹೆಸರಲ್ಲಿ 4,00,000 ರೂ ಸಾಲ ಇದೆ. ಇದನ್ನೂ ಓದಿ: ದೇಶದ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಕೈಯಲ್ಲಿದೆ 17,200 ರೂ ಹಣ, ಒಟ್ಟು ಆಸ್ತಿ ಮೌಲ್ಯ ಎರಡೂವರೆ ಕೋಟಿ ರೂ ಅಷ್ಟೇಯಾ!

ಜಗ್ಗೇಶ್‌ಗೆ ಟಿಕೆಟ್! ಬಿಜೆಪಿಯಲ್ಲೇ ಅಸಮಾಧಾನದ ಹೊಗೆ! ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್‌ಗಾಗಿ ಅನೇಕರು ಸರತಿ ಸಾಲಲ್ಲಿ ನಿಂತಿದ್ದರು. ಆದ್ರೆ, ನಟ ಜಗ್ಗೇಶ್‌ಗೆ ದೆಹಲಿಗೆ ವಿಮಾನವೇರುವ ಅವಕಾಶ ಸಿಕ್ಕಿದೆ. ಜಗ್ಗೇಶ್‌ಗೆ ಟಿಕೆಟ್ ನೀಡೋದ್ರಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಪ್ರಾತನಿಧ್ಯದ ಲೆಕ್ಕಾಚಾರವಿದೆ ಅನ್ನೋದು ಬಿಜೆಪಿ ಮೂಲಗಳ ಮಾತು. ಆದ್ರೆ, ಜಗ್ಗೇಶ್ ಇತ್ತೀಚಿನ ದಿನಗಳಲ್ಲಿ ಪಕ್ಷದ ಪರವಾಗಿ ಹೆಚ್ಚಾಗಿ ಗುರುತಿಸಿಕೊಳ್ಳಲಿಲ್ಲ. ಎಲ್ಲೂ ಗದ್ದಲ ಎಬ್ಬಿಸಲಿಲ್ಲ. ಎಲ್ಲೂ ಪಕ್ಷದ ನಿಲುವುಗಳನ್ನೂ ಸಮರ್ಥಿಸಿಕೊಳ್ಳಲಿಲ್ಲ. ತಮ್ಮ ಪಾಡಿಗೆ ತಾವು ಸೈಲೆಂಟ್ ಆಗಿದ್ರು. ಇಷ್ಟಾದ್ರೂ ಜಗ್ಗೇಶ್‌ಗೆ ಟಿಕೆಟ್‌ ಯಾಕೆ ಅನ್ನೋ ಅಪಸ್ವರ ಮೂಡಿದೆ.

ಪ್ರಮುಖ ಸುದ್ದಿ ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಂದು ವೇಳೆ ಒಕ್ಕಲಿಗರ ಕೋಟಾದಲ್ಲೇ ಟಿಕೆಟ್ ನೀಡಿರೋದೇ ಆದ್ರೂ, ಒಕ್ಕಲಿಗರ ಕೋಟಾದಡಿ ಬೇರೆ ನಾಯಕರು ಇರಲಿಲ್ವಾ ಅನ್ನೋ ಮಾತುಗಳು ಬಿಜೆಪಿಯಲ್ಲೇ ಚರ್ಚೆಯಾಗುತ್ತಿದೆ. ಪಕ್ಷಕ್ಕಾಗಿ ದುಡಿದ ಒಕ್ಕಲಿಗರು ಸಾಕಷ್ಟು ಜನ ಇದ್ದಾರೆ ಎಂದು, ಒಕ್ಕಲಿಗ ಪದಾಧಿಕಾರಿಗಳೇ ಅಸಮಾಧಾನ ಹೊರಹಾಕಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ