AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಫ್ಯೂ ನಿಯಮ ಉಲ್ಲಂಘಿಸಿ ತೆರಳುತ್ತಿದ್ದ ನಟ ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್

ಬೈಲುಕುಪ್ಪೆಯಲ್ಲಿ ತಪಾಸಣೆ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ ಪೊಲೀಸ್ ಸಿಬ್ಬಂದಿ ವಾರಾಂತ್ಯದ ಕರ್ಫ್ಯೂ ಇರುವ ಕಾರಣ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಟ ಮಂಡ್ಯ ರಮೇಶ್‌ ಅದೇ ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದರು.

ಕರ್ಫ್ಯೂ ನಿಯಮ ಉಲ್ಲಂಘಿಸಿ ತೆರಳುತ್ತಿದ್ದ ನಟ ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್
ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ
guruganesh bhat
|

Updated on: Apr 24, 2021 | 7:10 PM

Share

ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ  ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ ಪೊಲೀಸ್ ಸಿಬ್ಬಂದಿ ವಾರಾಂತ್ಯದ ಕರ್ಫ್ಯೂ ಇರುವ ಕಾರಣ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಟ ಮಂಡ್ಯ ರಮೇಶ್‌ ಅದೇ ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರನ್ನು ಎಸ್​ಐ ಪುಟ್ಟರಾಜು ನಿಲ್ಲಿಸಿ ವಾರಾಂತ್ಯದ ಕರ್ಫ್ಯೂ ಇದ್ದರೂ ಪ್ರಯಾಣಿಸುತ್ತಿರುವ ಕಾರಣ ಕೇಳಿದರು. ನಟ ಮಂಡ್ಯ ರಮೇಶ್ ಮದುವೆಗೆ ಹೋಗಿ ಬರುತ್ತಿರುವುದಾಗಿ ಹೇಳಿದರು. ಜತೆಗೆ ಮದುವೆಯ ಲಗ್ನಪತ್ರಿಕೆಯನ್ನೂ ತೋರಿಸಿದರು.  ಅದಕ್ಕೆ ಉತ್ತರಿಸಿದ ಎಸ್​ಐ ಪುಟ್ಟರಾಜು ಮದುವೆ ವಿಚಾರವಾಗಿ ಕಲ್ಯಾಣಮಂಟಪದಲ್ಲೇ ಇರುವವರಿಗೆ ಅನುಮತಿ ಕೊಟ್ಟಿದ್ದಾರೆ. ನೀವು ಕಾರಿನಲ್ಲಿ ಹೋಗುವುದಕ್ಕೆ ಅನುಮತಿ ಪಡೆಯಬೇಕು. ವಾರಾಂತ್ಯದ ಕರ್ಫ್ಯೂ ಇದ್ದಾಗ ಮದುವೆಗೆ ತೆರಳಲು ಪಾಸ್ ಕೊಡುತ್ತಾರೆ. ಅದನ್ನು ತೆಗೆದುಕೊಂಡು ಪ್ರಯಾಣ ಮಾಡಬೇಕು ಎಂದು ಬುದ್ಧಿವಾದ ಹೇಳಿದರು.

ನಿನ್ನೆ ಸಂಜೆಯಿಂದ (ಏಪ್ರಿಲ್ 23) ವಾರಾಂತ್ಯದ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ (ಏಪ್ರಿಲ್ 26) ಬೆಳಗ್ಗೆಯ ತನಕವೂ ಜಾರಿಯಲ್ಲಿ ಇರಲಿದೆ.  ಈ ವೇಳೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ದಿನನಿತ್ಯದ ಬಳಕೆಯ ಸಾಮಾಗ್ರಿಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಅನಗತ್ಯ ಓಡಾಟ ನಡೆಸದಂತೆ ಪೊಲೀಸರು ಜನರಿಗೆ ಖಡಕ್ ಎಚ್ಚರಿಕೆ ನೀಡುತ್ತಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Actor Mandya Ramesh violates Weekend curfew and police question him in Mysore)

Follow Us
guruganesh bhat
guruganesh bhat
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ