AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ಫ್ಯೂ ನಿಯಮ ಉಲ್ಲಂಘಿಸಿ ತೆರಳುತ್ತಿದ್ದ ನಟ ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್

ಬೈಲುಕುಪ್ಪೆಯಲ್ಲಿ ತಪಾಸಣೆ ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ ಪೊಲೀಸ್ ಸಿಬ್ಬಂದಿ ವಾರಾಂತ್ಯದ ಕರ್ಫ್ಯೂ ಇರುವ ಕಾರಣ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಟ ಮಂಡ್ಯ ರಮೇಶ್‌ ಅದೇ ದಾರಿಯಲ್ಲಿ ಕಾರಿನಲ್ಲಿ ಬರುತ್ತಿದ್ದರು.

ಕರ್ಫ್ಯೂ ನಿಯಮ ಉಲ್ಲಂಘಿಸಿ ತೆರಳುತ್ತಿದ್ದ ನಟ ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್
ಮಂಡ್ಯ ರಮೇಶ್​ರನ್ನು ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ
guruganesh bhat
|

Updated on: Apr 24, 2021 | 7:10 PM

Share

ಮೈಸೂರು: ವಾರಾಂತ್ಯದ ಕರ್ಫ್ಯೂ ನಿಯಮ ಉಲ್ಲಂಘಿಸಿ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ ಬಳಿ ಕಾರಿನಲ್ಲಿ ತೆರಳುತ್ತಿದ್ದ ಪ್ರಸಿದ್ಧ ನಟ ಮಂಡ್ಯ ರಮೇಶ್​ಗೆ ಎಸ್​ಐ ಪುಟ್ಟರಾಜು ಕರ್ಫ್ಯೂ ನಿಯಮ ಉಲ್ಲಂಘಿಸದಂತೆ ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಮೈಸೂರಿನ ಗ್ರಾಮೀಣ ಪ್ರದೇಶಗಳಲ್ಲೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ಜನರಿಗೆ ಪೊಲೀಸರು ತಡೆ ಒಡ್ಡಿದ್ದಾರೆ. ಕುಂಟು ನೆಪ ಹೇಳಿ ತಿರುಗಾಡುವವರನ್ನು ಖಾಕಿ ಸಿಬ್ಬಂದಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ  ಸಬ್ ಇನ್ಸಪೆಕ್ಟರ್ ಪುಟ್ಟರಾಜು ಮತ್ತು ಇತರ ಪೊಲೀಸ್ ಸಿಬ್ಬಂದಿ ವಾರಾಂತ್ಯದ ಕರ್ಫ್ಯೂ ಇರುವ ಕಾರಣ ವಾಹನ ಸವಾರರ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ನಟ ಮಂಡ್ಯ ರಮೇಶ್‌ ಅದೇ ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರನ್ನು ಎಸ್​ಐ ಪುಟ್ಟರಾಜು ನಿಲ್ಲಿಸಿ ವಾರಾಂತ್ಯದ ಕರ್ಫ್ಯೂ ಇದ್ದರೂ ಪ್ರಯಾಣಿಸುತ್ತಿರುವ ಕಾರಣ ಕೇಳಿದರು. ನಟ ಮಂಡ್ಯ ರಮೇಶ್ ಮದುವೆಗೆ ಹೋಗಿ ಬರುತ್ತಿರುವುದಾಗಿ ಹೇಳಿದರು. ಜತೆಗೆ ಮದುವೆಯ ಲಗ್ನಪತ್ರಿಕೆಯನ್ನೂ ತೋರಿಸಿದರು.  ಅದಕ್ಕೆ ಉತ್ತರಿಸಿದ ಎಸ್​ಐ ಪುಟ್ಟರಾಜು ಮದುವೆ ವಿಚಾರವಾಗಿ ಕಲ್ಯಾಣಮಂಟಪದಲ್ಲೇ ಇರುವವರಿಗೆ ಅನುಮತಿ ಕೊಟ್ಟಿದ್ದಾರೆ. ನೀವು ಕಾರಿನಲ್ಲಿ ಹೋಗುವುದಕ್ಕೆ ಅನುಮತಿ ಪಡೆಯಬೇಕು. ವಾರಾಂತ್ಯದ ಕರ್ಫ್ಯೂ ಇದ್ದಾಗ ಮದುವೆಗೆ ತೆರಳಲು ಪಾಸ್ ಕೊಡುತ್ತಾರೆ. ಅದನ್ನು ತೆಗೆದುಕೊಂಡು ಪ್ರಯಾಣ ಮಾಡಬೇಕು ಎಂದು ಬುದ್ಧಿವಾದ ಹೇಳಿದರು.

ನಿನ್ನೆ ಸಂಜೆಯಿಂದ (ಏಪ್ರಿಲ್ 23) ವಾರಾಂತ್ಯದ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ (ಏಪ್ರಿಲ್ 26) ಬೆಳಗ್ಗೆಯ ತನಕವೂ ಜಾರಿಯಲ್ಲಿ ಇರಲಿದೆ.  ಈ ವೇಳೆ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ದಿನನಿತ್ಯದ ಬಳಕೆಯ ಸಾಮಾಗ್ರಿಗಳನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಅನಗತ್ಯ ಓಡಾಟ ನಡೆಸದಂತೆ ಪೊಲೀಸರು ಜನರಿಗೆ ಖಡಕ್ ಎಚ್ಚರಿಕೆ ನೀಡುತ್ತಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Actor Mandya Ramesh violates Weekend curfew and police question him in Mysore)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!