ಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜಕುಮಾರ್ ಸೋತ ಬೆನ್ನಲ್ಲೇ ನಟ ಶಿವರಾಜ ಕುಮಾರ್​ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ.

ಕುಮಾರ್​ ಬಂಗಾರಪ್ಪ ಮನೆಗೆ ನಟ ಶಿವರಾಜಕುಮಾರ್​ ಬೆಂಬಲಿಗರಿಂದ ಮುತ್ತಿಗೆ
ಕುಮಾರ್ ಬಂಗಾರಪ್ಪ, ಶಿವರಾಜ್​ ಕುಮಾರ್​
Follow us
|

Updated on:Jun 08, 2024 | 2:42 PM

ಬೆಂಗಳೂರು, ಜೂನ್​ 08: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga Lok Sabha Constituency) ಗೀತಾ ಶಿವರಾಜಕುಮಾರ್ (Geeta Shivarajkumar) ಸೋತ ಬೆನ್ನಲ್ಲೇ ನಟ ಶಿವರಾಜಕುಮಾರ್ (Shivarajkumar)​ ಅವರ ಬಗ್ಗೆ ವ್ಯಂಗ್ಯವಾಗಿ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ (Kumar Bangarppa) ಅವರ ಸದಾಶಿವನಗರ ಮನೆಗೆ ಶಿವಣ್ಣ ಬೆಂಬಲಿಗರು ಮುತ್ತಿಗೆ ಹಾಕಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರೀಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿಯಿಂದ ಸಂಸದ ಬಿವೈ ರಾಘವೇಂದ್ರ, ಕಾಂಗ್ರೆಸ್​ನಿಂದ ನಟ ಶಿವರಾಜಕುಮಾರ್​ ಪತ್ನಿ ಗೀತಾ ಶಿವರಾಜಕುಮಾರ್​ ಮತ್ತು ಬಂಡಾಯ ಅಭ್ಯರ್ಥಿ, ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಅವರು ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಗೆಲುವಿನ ಬಳಿಕ, ಬಿಜೆಪಿ ನಾಯಕ ಕುಮಾರ್​ ಬಂಗಾರಪ್ಪ ನಟ ಶಿವರಾಜಕುಮಾರ್​ ಅವರ ಬಗ್ಗೆ ಲಘುವಾಗಿ ಬರೆದು ಫೇಸ್​ಬುಕ್​​ನಲ್ಲಿ ಪೋಸ್ಟ್​​ ಹಾಕಿದ್ದು, ಶಿವಣ್ಣ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.08) ನಟ ಶಿವರಾಜಕುಮಾರ್ ಬೆಂಬಲಿಗರು ಬೆಂಗಳೂರಿನ ಸದಾಶಿವನಗರದಲ್ಲಿರುವ ಕುಮಾರ್​ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಲೋಕಸಭಾ ಚುನಾವಣೆ 2024 ಫಲಿತಾಂಶ: ಬಿವೈ ರಾಘವೇಂದ್ರ ಗೆಲುವು, ಗೀತಾಗೆ ಸೋಲು

ಕುಮಾರ್​ ಬಂಗಾರಪ್ಪ ಫೋಸ್ಟ್​ನಲ್ಲಿ ಏನಿದೆ?

ಕುಮಾರ್ ಬಂಗಾರಪ್ಪ ಫೇಸ್​ಬುಕ್​ನಲ್ಲಿ ಪೋಸ್ಟ್, ತಮ್ಮ ಸಹೋದರ ಮಧು ಬಂಗಾರಪ್ಪ, ಸಹೋದರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಟೀಕಿಸಿರುವ ಜೊತೆಗೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವರಾಜ್ ಕುಮಾರ್ ಅವರ ಬಗ್ಗೆ ಲಘುವಾಗಿ ಬರೆದಿದ್ದರು. “ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು” ಎಂದಿದ್ದರು.

ಅಷ್ಟಕ್ಕೆ ಸುಮ್ಮನಾಗದೆ, “ನನ್ನ ತಂಗಿ (ಗೀತಾ ಶಿವರಾಜ್ ಕುಮಾರ್) ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು” ಎಂದು ಎಚ್ಚರಿಕೆಯನ್ನು ಸಹ ಕೊಟ್ಟಿದ್ದರು.

ಕುಮಾರ್​ ಬಂಗಾರಪ್ಪ ಅವರ ಈ ಫೋಸ್ಟ್​​ನಿಂದ ಆಕ್ರೋಶಗೊಂಡಿರುವ ಶಿವಣ್ಣ ಅಭಿಮಾನಿಗಳು, ಕುಮಾರ ಬಂಗಾರಪ್ಪ ಅವರ ನಿವಾಸದ ಗೇಟ್ ಒಳಗೆ ನುಗ್ಗಿ ದಿಕ್ಕಾರ ಕೂಗಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯಿಂದ ಹೊರಗೆ ಹೋಗುವಂತೆ ಮನವಿ ಮಾಡಿದರು. ಈ ವೇಳೆ ಅಭಿಮಾನಿಗಳು ಮತ್ತು ಪೊಲೀಸರ ಮಾತಿನ ಚಕಮಕಿ ಏರ್ಪಟ್ಟಿತು.

“ಶಿವರಾಜಕುಮಾರ್ ಅವರ ಬಗ್ಗೆ ರಾಜಕುಮಾರ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಇದು ನಮಗೆ ನೋವಾಗಿದೆ. ಅವರನ್ನ ಹೊರಗೆ ಕರೆಸಿ ಕ್ಷಮೆ ಕೇಳುವಂತೆ ಹೇಳಿ” ಎಂದು ಅಭಿಮಾಬಿಗಳು ಒತ್ತಾಯಿಸಿದರು. ಪೊಲೀಸರು ಅಭಿಮಾನಿಗಳನ್ನು ವಶಕ್ಕೆ ಪಡೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:13 pm, Sat, 8 June 24

ತಾಜಾ ಸುದ್ದಿ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ