Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ

Shanaya Katwe: ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ
ಸಾಂದರ್ಭಿಕ ಚಿತ್ರ
Follow us
ಮದನ್​ ಕುಮಾರ್​
| Updated By: Digi Tech Desk

Updated on:Apr 23, 2021 | 11:25 AM

ಹುಬ್ಬಳ್ಳಿ: ಪ್ರೀತಿಗೆ ಅಡ್ಡ ಬಂದ ಯುವತಿಯ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆಗೆ ಹೊಸ ಟ್ವಿಸ್ಟ್​ ಸಿಗುತ್ತಿದೆ. ಏ.12ರಂದು ಹುಬ್ಬಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯಾದ ವ್ಯಕ್ತಿಯ ಸಹೋದರಿಯೇ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆ ಮೂಲಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕೊಲೆ ಹಿಂದಿನ ರಹಸ್ಯಗಳೆಲ್ಲ ಹೊರಬರುತ್ತಿವೆ.

ಮಾಡೆಲ್​ ಆಗಿ ಗುರುತಿಸಿಕೊಂಡಿರುವುದೂ ಅಲ್ಲದೆ, ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಶನಾಯ ಕಾಟವೆ ಈಗ ಪೊಲೀಸರ ಅತಿಥಿ ಆಗಿರುವ ಯುವತಿ. ಶನಾಯ ಮತ್ತು ನಿಯಾಜ್​ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಶನಾಯ ಸಹೋದರ ರಾಕೇಶ್​ ಅಡ್ಡಿಪಡಿಸಿದ್ದ. ಹಾಗಾಗಿ ನಿಯಾಜ್​ ತನ್ನ ಸಹಚರರೊಂದಿಗೆ ಸೇರಿ ರಾಕೇಶ್​ನನ್ನು ಹತ್ಯೆ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಶನಾಯ ಕೂಡ ಭಾಗಿ ಆಗಿರುವ ಬಗ್ಗೆ ಶಂಕೆ ವ್ಯಕ್ತಿವಾಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ. ಯಾವುದೇ ಸುಳಿವು ನೀಡಬಾರದು ಎಂಬ ಕಾರಣಕ್ಕೆ ರಾಕೇಶ್​ ಮೃತದೇಹದ ರುಂಡ-ಮುಂಡ ಕತ್ತರಿಸಲಾಗಿತ್ತು. ಕೊಲೆ ನಂತರ ಶನಾಯ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಆದರೆ ಈಗ ಈ ನಟಿ ಕಮ್​ ಮಾಡೆಲ್​ ಖಾಕಿ ಬೆಲೆಗೆ ಬಿದ್ದಿದ್ದಾಳೆ.

ಭೀಕರವಾಗಿ ನಡೆದ ಈ ಕೊಲೆಯ ಹಿಂದಿನ ರಹಸ್ಯವನ್ನು ಭೇದಿಸಲು 5 ತಂಡಗಳನ್ನು ಪೊಲೀಸರು ರಚಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಈ ವಿವರಗಳು ಸಿಕ್ಕಿವೆ. ಕೇಸ್​ಗೆ ಸಂಬಂಧಿಸಿದಂತೆ ನಿಯಾಜ್​, ಶನಾಯ, ಮಲ್ಲಿಕ್, ಫಿರೋಜ್, ಸೈಫುದ್ದೀನ್ ಬಂಧನಕ್ಕೆ ಒಳಗಾಗಿದ್ದಾರೆ. ಪೊಲೀಸ್​ ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ

(Actress Shanaya Katwe arrested in brother murder case in Hubballi)

Published On - 10:30 am, Fri, 23 April 21

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ