AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ

Shanaya Katwe: ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ.

ಬಾಯ್​ಫ್ರೆಂಡ್​ಗಾಗಿ ಅಣ್ಣನ ಕೊಲೆಯಲ್ಲಿ ಭಾಗಿಯಾದ ಶಂಕೆ; ಹುಬ್ಬಳ್ಳಿ ಮೂಲದ ನಟಿ ಬಂಧನ
ಸಾಂದರ್ಭಿಕ ಚಿತ್ರ
ಮದನ್​ ಕುಮಾರ್​
| Edited By: |

Updated on:Apr 23, 2021 | 11:25 AM

Share

ಹುಬ್ಬಳ್ಳಿ: ಪ್ರೀತಿಗೆ ಅಡ್ಡ ಬಂದ ಯುವತಿಯ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆಗೆ ಹೊಸ ಟ್ವಿಸ್ಟ್​ ಸಿಗುತ್ತಿದೆ. ಏ.12ರಂದು ಹುಬ್ಬಳ್ಳಿಯಲ್ಲಿ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೊಲೆಯಾದ ವ್ಯಕ್ತಿಯ ಸಹೋದರಿಯೇ ಈಗ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆ ಮೂಲಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಕೊಲೆ ಹಿಂದಿನ ರಹಸ್ಯಗಳೆಲ್ಲ ಹೊರಬರುತ್ತಿವೆ.

ಮಾಡೆಲ್​ ಆಗಿ ಗುರುತಿಸಿಕೊಂಡಿರುವುದೂ ಅಲ್ಲದೆ, ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಶನಾಯ ಕಾಟವೆ ಈಗ ಪೊಲೀಸರ ಅತಿಥಿ ಆಗಿರುವ ಯುವತಿ. ಶನಾಯ ಮತ್ತು ನಿಯಾಜ್​ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಶನಾಯ ಸಹೋದರ ರಾಕೇಶ್​ ಅಡ್ಡಿಪಡಿಸಿದ್ದ. ಹಾಗಾಗಿ ನಿಯಾಜ್​ ತನ್ನ ಸಹಚರರೊಂದಿಗೆ ಸೇರಿ ರಾಕೇಶ್​ನನ್ನು ಹತ್ಯೆ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಶನಾಯ ಕೂಡ ಭಾಗಿ ಆಗಿರುವ ಬಗ್ಗೆ ಶಂಕೆ ವ್ಯಕ್ತಿವಾಗಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರಿಂದ ಶನಾಯ ಬಂಧನವಾಗಿದೆ. ರಾಕೇಶ್​​ ಕೊಲೆಯಲ್ಲಿ ಶನಾಯ ಕೈವಾಡ ಕೂಡ ಇದೆ ಎನ್ನಲಾಗುತ್ತಿದೆ. ನಿಯಾಜ್​, ಶನಾಯ ಸೇರಿ ಒಟ್ಟು ಐವರನ್ನು ಬಂಧಿಸಲಾಗಿದೆ. ಯಾವುದೇ ಸುಳಿವು ನೀಡಬಾರದು ಎಂಬ ಕಾರಣಕ್ಕೆ ರಾಕೇಶ್​ ಮೃತದೇಹದ ರುಂಡ-ಮುಂಡ ಕತ್ತರಿಸಲಾಗಿತ್ತು. ಕೊಲೆ ನಂತರ ಶನಾಯ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಳು. ಆದರೆ ಈಗ ಈ ನಟಿ ಕಮ್​ ಮಾಡೆಲ್​ ಖಾಕಿ ಬೆಲೆಗೆ ಬಿದ್ದಿದ್ದಾಳೆ.

ಭೀಕರವಾಗಿ ನಡೆದ ಈ ಕೊಲೆಯ ಹಿಂದಿನ ರಹಸ್ಯವನ್ನು ಭೇದಿಸಲು 5 ತಂಡಗಳನ್ನು ಪೊಲೀಸರು ರಚಿಸಿದ್ದರು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಈ ವಿವರಗಳು ಸಿಕ್ಕಿವೆ. ಕೇಸ್​ಗೆ ಸಂಬಂಧಿಸಿದಂತೆ ನಿಯಾಜ್​, ಶನಾಯ, ಮಲ್ಲಿಕ್, ಫಿರೋಜ್, ಸೈಫುದ್ದೀನ್ ಬಂಧನಕ್ಕೆ ಒಳಗಾಗಿದ್ದಾರೆ. ಪೊಲೀಸ್​ ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ರುಂಡ, ಮುಂಡ ಬೇರ್ಪಡಿಸಿ ಯುವಕನ ಕೊಲೆ ಪ್ರಕರಣ; ನಾಲ್ವರ ಬಂಧನ

(Actress Shanaya Katwe arrested in brother murder case in Hubballi)

Published On - 10:30 am, Fri, 23 April 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್