ಎಡಿಜಿಪಿ ವಾಹನ ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಚಿತ್ರದುರ್ಗ: ಕೊಳಾಳ್ ಬಳಿ ADGP ರಾಮಚಂದ್ರರಾವ್ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಬೆಂಗಳೂರಿನಿಂದ ದಾವಣಗೆರೆಗೆ ಎಡಿಜಿಪಿ ರಾಮಚಂದ್ರರಾವ್ ತೆರಳುತ್ತಿದ್ದರು. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೈವೇನಲ್ಲಿ ಹಂಪ್ಸ್‌ ಇದ್ದ ಕಾರಣ ಎಡಿಜಿಪಿ ವಾಹನವನ್ನು ಸ್ವಲ್ಪ ಸ್ಲೋ ಮಾಡಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಡಿಜಿಪಿ ವಾಹನಕ್ಕೆ ಲಾರಿ ಡಿಕ್ಕಿಯೊಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸುರಕ್ಷಿತವಾಗಿ ಎಡಿಜಿಪಿ ರಾಮಚಂದ್ರರಾವ್‌ ದಾವಣಗೆರೆ ತಲುಪಿದ್ದಾರೆ.

ಎಡಿಜಿಪಿ ವಾಹನ ಅಪಘಾತ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಸಾಧು ಶ್ರೀನಾಥ್​

Updated on: Nov 19, 2019 | 11:08 PM

ಚಿತ್ರದುರ್ಗ: ಕೊಳಾಳ್ ಬಳಿ ADGP ರಾಮಚಂದ್ರರಾವ್ ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿಯೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ.

ಬೆಂಗಳೂರಿನಿಂದ ದಾವಣಗೆರೆಗೆ ಎಡಿಜಿಪಿ ರಾಮಚಂದ್ರರಾವ್ ತೆರಳುತ್ತಿದ್ದರು. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೈವೇನಲ್ಲಿ ಹಂಪ್ಸ್‌ ಇದ್ದ ಕಾರಣ ಎಡಿಜಿಪಿ ವಾಹನವನ್ನು ಸ್ವಲ್ಪ ಸ್ಲೋ ಮಾಡಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಎಡಿಜಿಪಿ ವಾಹನಕ್ಕೆ ಲಾರಿ ಡಿಕ್ಕಿಯೊಡೆದಿದೆ.

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸುರಕ್ಷಿತವಾಗಿ ಎಡಿಜಿಪಿ ರಾಮಚಂದ್ರರಾವ್‌ ದಾವಣಗೆರೆ ತಲುಪಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us