ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಎಡಿಜಿಪಿ ಚಂದ್ರಶೇಖರ್​

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಮತ್ತು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಸ್‌ಐಟಿ) ಎಂ.ಚಂದ್ರಶೇಖರ್ ನಡುವಿನ ಜಂಗೀ ಕುಸ್ತಿ ಮತ್ತೊಂದು ಹಂತಕ್ಕೆ ಹೋಗಿದೆ. ಇಷ್ಟು ದಿನ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದರು. ಆದ್ರೆ, ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ವಿರುದ್ಧ ಪೊಲೀಸರಿಗೆ ದೂರು ದಾಖಲಸಿದ್ದಾರೆ.

ಬೆದರಿಕೆ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ  ಎಡಿಜಿಪಿ ಚಂದ್ರಶೇಖರ್​
ಎಂ.ಚಂದ್ರಶೇಖರ್- ಕುಮಾರಸ್ವಾಮಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 11, 2024 | 8:40 PM

ಬೆಂಗಳೂರು, (ಅಕ್ಟೋಬರ್ 11): ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ ಸುಳ್ಳು ದಾಖಲೆ ಪಡೆದು ಕರ್ನಾಟಕ ಕೆಡರ್​ನಲ್ಲಿದ್ದೇನೆಂದು ಸುಳ್ಳು ಆರೋಪ ಮಾಡಿದ್ದಾರೆ. ಹಾಗೇ ಲಂಚ ಪಡೆದಿದ್ದಾಗಿ ನನ್ಮೇಲೆ ಸುಳ್ಳು ಆರೋಪಿಸಿದ್ದಾರೆ. ಇನ್ನು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಕ್ರಮಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಜೊತೆಗೆ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ. ನಿಖಿಲ್ ಕುಮಾರಸ್ವಾಮಿ ಸಹ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು ನೀಡಿದ್ದು ಹೀಗೆ

ಕ್ರಿಮಿನಲ್​ ಮೊಕದ್ದಮೆ ಸಂಖ್ಯೆ 16/2024ರಲ್ಲಿ ಆರೋಪಿಯಾಗಿರುವರು ತನಿಖೆಗೆ ಅಡ್ಡಿಪರಿಸುವ ಉದ್ದೇಶದಿಂದ ಎಸ್​ಐಟಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಲೋಕಾಯುಕ್ತ ಎಸ್​​ಐಟಿ ಕಳುಹಿಸಲಾದ ಈ ದಾಖಲೆಗಳು ಅದೇ ಪ್ರಕರಣದಲ್ಲಿ ಆರೋಪಿಯಾಗಿರುವ ಕುಮಾರಸ್ವಾಮಿಯವರ ಕೈಗೆ ಸಿಕ್ಕಿದ್ದಾದರೂ ಹೇಗೆ? ಅವರು ತಮ್ಮ ಕೇಂದ್ರ ಮಂತ್ರಿ ಪದವಿಯ ಅಧಿಕಾರಿವನ್ನು ದುರುಪಯೋಗಪಡಿಸಿಕೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಚಂದ್ರಶೇಖರ್ ಅವರು ತಮ್ಮ ದೂರಿನಲ್ಲಿ ಅನುಮಾನ ವ್ಯಕ್ತಡಿಸಿದ್ದಾರೆ.

ಅತ್ಯಂತ ಕೀಳುಮಟ್ಟದ ಕ್ರಿಮಿನಲ್​ಗಳು ಕೂಡ ಕುಟುಂಬ ಮತ್ತು ಮಕ್ಕಗಳನ್ನು ತಮ್ಮ ದ್ವೇಷ ವ್ಯವಹಾರದಿಂದ ದೂರವಿಡುತ್ತಾರೆ. ಆದ್ರೆ, ಕುಮಾರಸ್ವಾಮಿಯವರು ನನ್ನ ಕುಟುಂಬದ ಮೇಲೆಯೂ ಸುಳ್ಳು ಆರೋಪ ಹೊರಿಸಿ ಬೆದರಿಯೊಡ್ಡಿದ್ದಾರೆ ಎಂದು ಎಡಿಜಿಪಿ ಆರೋಪಿಸಿದ್ದಾರೆ.

ಕುಮಾರಸ್ವಾಮಿಯವರ ಮಗ ನಿಖಿಲ್ ಕುಮಾರಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳನ್ನು ಮಾಡಿದ್ದಾರೆ. ಕುಮಾರಸ್ವಾಮಿಯವರ ಆಪ್ತ ಸುರೇಶ್ ಬಾಬಯ ಕೂಡ ನನ್ನ ವಿರುದ್ಧ ಕ್ರಮಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಲೋಕಾಯುಕ್ತ ವಿಶೇಷ ತನಿಖಾ ತಂಡದ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯ್​ ನಗರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸದ್ಯ ಪೊಲೀಸರು ಎನ್​ಸಿಆರ್​ ದಾಖಲಿಸಿಕೊಂಡಿದ್ದು, ಮುಂದೆ ಏನೆಲ್ಲಾ ಕ್ರಮಕೈಗೊಳ್ಳುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 7:43 pm, Fri, 11 October 24

ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಮುಡಾ ಹಗರಣ ಸಿದ್ದರಾಮಯ್ಯರನ್ನು ಹೆಚ್ಚು ಆಸ್ತಿಕರನ್ನಾಗಿ ಮಾಡಿರುವಂತಿದೆ!
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ಗೃಹಲಕ್ಷ್ಮಿ ಹಣದ ಉಪಯೋಗ ಹೇಗೆ? ಇಲ್ಲಿದೆ ಬಾಗವ್ವ ಸಣ್ಣಕ್ಕಿಯ ಉದಾಹರಣೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ನವರಾತ್ರಿ ಪೂಜಾವಿಧಿಗಳ 9 ನೇ ದಿನ ಜನಿಸಿದ ಮಗು ಶುಭದಾಯಯಕ: ಡಾ ಶೆಲ್ವಪಿಳ್ಳೆ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಅಭಿಮಾನಿಗಳಿಂದ ಧ್ರುವ ಸರ್ಜಾಗೆ ಹೂಮಳೆ, ಸ್ಟೆಪ್ ಹಾಕಿದ ಧ್ರುವ
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಬಾಗಲಕೋಟೆ: ಮೊಸಳೆ ಬಾಯಿಯಿಂದ ಮಾಲೀಕನನ್ನು ಕಾಪಾಡಿದ ಎತ್ತು
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್
ಲೋಕಸಭಾ ಚುನಾವಣೆ ಡಿಬ್ಯಾಕಲ್ ನಂತರ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಸುರೇಶ್