AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ನೇಹಾ ಮನೆಗೆ ಭೇಟಿ ನೀಡಿದ್ದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: May 19, 2024 | 6:34 PM

Share

ಹುಬ್ಬಳ್ಳಿ, ಮೇ 19: ನೇಹಾ (Neha) ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಇಡೀ ರಾಜ್ಯವಲ್ಲದೇ ರಾಷ್ಟ್ರಮಟ್ಟದಲ್ಲಿ ಕೂಡ ಸಾಕಷ್ಟು ಸುದ್ದಿಯಾಗಿದೆ. ಒಂದರ ಹಿಂದೆ ಒಂದರಂತೆ ನಗರದಲ್ಲಿ ಕೊಲೆ ಹಿನ್ನಲೆ ಇಡೀ ಹುಬ್ಬಳ್ಳಿ (Hubballi) ಜನರು ಬೆಚ್ಚಿಬಿದ್ದಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಮಾತನಾಡಿದ್ದರು. ಇದೆಲ್ಲದರ ನಡುವೆ ಇಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ  ನೇಹಾ ಮನೆಗೆ ಭೇಟಿ ಮಾಡಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು ತರಾಟೆ ತೆಗೆದುಕೊಂಡಿದ್ದಾರೆ.

ಅಧಿಕಾರಿಗಳಿಗೆ ಕ್ಲಾಸ್​

ಹು-ಧಾ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಕೇಳಿದ್ದಾರೆ. ಅವಳಿ ನಗರದ ಕ್ರೈಂ ಮಾಹಿತಿ ಪಡೆದಿದ್ದಾರೆ. ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಯಾವ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಆಗಿದೆ ಅನ್ನುವ ಮಾಹಿತಿ ಪಡೆದಿದ್ದು, ಅಪರಾಧ ಪ್ರಕರಣಗಳು ಹೆಚ್ಚಾಗಲು ಏನು ಕಾರಣ? ಏನೆಲ್ಲ ದಿಟ್ಟ ಕ್ರಮ ಕೈಗೊಂಡಿದ್ದೀರಿ?, ಅಪರಾಧಿಗಳ ಮೇಲೆ ನಿಗಾ ಇಟ್ಟಿದ್ದೀರಾ? ರೌಡಿಶೀಟರ್‌ಗಳ ವಿರುದ್ಧ ಕಾಲಕಾಲಕ್ಕೆ ಕ್ರಮ ಆಗಿದೆಯಾ? ಹು-ಧಾ ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗಲು ಏನು ಕಾರಣ? ಠಾಣೆಗೆ ಬರುವ ಜನರ ದೂರು ಆಲಿಸುವಲ್ಲಿ ಸಿಬ್ಬಂದಿ ವರ್ತನೆ ಹೇಗಿದೆ ಎಂದು ಸಭೆಯಲ್ಲಿ ಹೀಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ

ಸಭೆ ಬಳಿಕ ಆರ್‌.ಹಿತೇಂದ್ರ ಮಾತನಾಡಿದ್ದು, ಎಲೆಕ್ಷನ್ ಸಹ ಇತ್ತು, ಇದೇ ವೇಳೆ ಇಬ್ಬರು ಯುವತಿಯರ ಹತ್ಯೆಯಾಗಿದೆ. ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳು ಬಂದಿದ್ದವು. ಹೀಗಾಗಿ ನಾನೇ ಬಂದು ಸಭೆ ಮಾಡಿದ್ದೇನೆ, ಸಮಗ್ರ ಮಾಹಿತಿ ಪಡೆದಿದ್ದೇನೆ. ಆದರೆ ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದರೆ ಕ್ರೈಂ ಅಂಕಿ-ಅಂಶಗಳ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಅಪರಾಧಗಳ ಅಂಕಿ-ಅಂಶ ನೋಡಿದ್ರೆ ಹಿಂದಿಗಿಂತ ಈ ಸಲ ಕಡಿಮೆ ಇದೆ. ಆದರೆ ಹು-ಧಾ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿದೆ. ಹೀಗಾಗಿ ಸಭೆಯಲ್ಲಿ ಪೊಲೀಸ್‌ ಅಧಿಕಾರಿಗಳಿಗೆ ಕೆಲ ಸೂಚನೆ ಕೊಟ್ಟಿದ್ದೇನೆ. ಇದರಂತೆ ಅಪರಾಧ ಪ್ರಕರಣ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸುವ ಕೆಲಸ ಪೊಲೀಸರು ಮಾಡಲಿದ್ದಾರೆ.

ಇದನ್ನೂ ಓದಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರಗಳ ಬಗ್ಗೆ ನಾನು ಬಹಿರಂಗವಾಗಿ ಹೇಳುವುದಿಲ್ಲ. ಪೊಲೀಸರ ವಿರುದ್ಧ ಸಾರ್ವಜನಿಕರಿಂದ ಕೆಲ ದೂರುಗಳು ಬಂದಿದ್ದವು. ದೂರು ಬಂದಾಗ ಕೆಲ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಂಜಲಿ ಅಜ್ಜಿ ಮೊದಲೇ ದೂರು ಕೊಡಲು ಬಂದಿದ್ದಳೆಂಬ ವಿಚಾರ ಬಂದಿತ್ತು. ಹೀಗಾಗಿ ಸಂಬಂಧಿಸಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹು-ಧಾ ಅವಳಿ ನಗರದಲ್ಲಿ ಪೊಲೀಸ್ ಠಾಣೆಗಳ ಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳಲಿದ್ದು, ಸಭೆಯ ಸಮಗ್ರವಾದ ವರದಿ ಗೃಹ ಸಚಿವರಿಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?