AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆಗೆ ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಬಳಿಕ ನೇಹಾ ಮನೆಗೆ ಭೇಟಿ ನೀಡಿದ್ದು ತಂದೆ-ತಾಯಿಗೆ ಸಾಂತ್ವನ ಹೇಳಿದ್ದಾರೆ.

ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನೇಹಾ, ಅಂಜಲಿ ಕೇಸ್​​ ಬಗ್ಗೆ ಪಿನ್‌ ಟು ಪಿನ್‌ ಮಾಹಿತಿ ಪಡೆದ ಎಡಿಜಿಪಿ ಆರ್.ಹಿತೇಂದ್ರ: ಹೇಳಿದ್ದಿಷ್ಟು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಗಂಗಾಧರ​ ಬ. ಸಾಬೋಜಿ|

Updated on: May 19, 2024 | 6:34 PM

Share

ಹುಬ್ಬಳ್ಳಿ, ಮೇ 19: ನೇಹಾ (Neha) ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಇಡೀ ರಾಜ್ಯವಲ್ಲದೇ ರಾಷ್ಟ್ರಮಟ್ಟದಲ್ಲಿ ಕೂಡ ಸಾಕಷ್ಟು ಸುದ್ದಿಯಾಗಿದೆ. ಒಂದರ ಹಿಂದೆ ಒಂದರಂತೆ ನಗರದಲ್ಲಿ ಕೊಲೆ ಹಿನ್ನಲೆ ಇಡೀ ಹುಬ್ಬಳ್ಳಿ (Hubballi) ಜನರು ಬೆಚ್ಚಿಬಿದ್ದಿದ್ದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಬಗ್ಗೆ ಮಾತನಾಡಿದ್ದರು. ಇದೆಲ್ಲದರ ನಡುವೆ ಇಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ  ನೇಹಾ ಮನೆಗೆ ಭೇಟಿ ಮಾಡಿದ್ದಾರೆ. ಬಳಿಕ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು ತರಾಟೆ ತೆಗೆದುಕೊಂಡಿದ್ದಾರೆ.

ಅಧಿಕಾರಿಗಳಿಗೆ ಕ್ಲಾಸ್​

ಹು-ಧಾ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ಮಾಡಿರುವ ಎಡಿಜಿಪಿ ಆರ್‌.ಹಿತೇಂದ್ರ ನೇಹಾ, ಅಂಜಲಿ ಕೇಸ್‌ನ ಪಿನ್‌ ಟು ಪಿನ್‌ ಮಾಹಿತಿ ಕೇಳಿದ್ದಾರೆ. ಅವಳಿ ನಗರದ ಕ್ರೈಂ ಮಾಹಿತಿ ಪಡೆದಿದ್ದಾರೆ. ಅವಳಿ ನಗರದಲ್ಲಿ ಇಲಾಖೆ ಕೈಗೊಂಡ ಕ್ರಮಗಳ ಸಂಬಂಧ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಯಾವ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಆಗಿದೆ ಅನ್ನುವ ಮಾಹಿತಿ ಪಡೆದಿದ್ದು, ಅಪರಾಧ ಪ್ರಕರಣಗಳು ಹೆಚ್ಚಾಗಲು ಏನು ಕಾರಣ? ಏನೆಲ್ಲ ದಿಟ್ಟ ಕ್ರಮ ಕೈಗೊಂಡಿದ್ದೀರಿ?, ಅಪರಾಧಿಗಳ ಮೇಲೆ ನಿಗಾ ಇಟ್ಟಿದ್ದೀರಾ? ರೌಡಿಶೀಟರ್‌ಗಳ ವಿರುದ್ಧ ಕಾಲಕಾಲಕ್ಕೆ ಕ್ರಮ ಆಗಿದೆಯಾ? ಹು-ಧಾ ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗಲು ಏನು ಕಾರಣ? ಠಾಣೆಗೆ ಬರುವ ಜನರ ದೂರು ಆಲಿಸುವಲ್ಲಿ ಸಿಬ್ಬಂದಿ ವರ್ತನೆ ಹೇಗಿದೆ ಎಂದು ಸಭೆಯಲ್ಲಿ ಹೀಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ.

ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ

ಸಭೆ ಬಳಿಕ ಆರ್‌.ಹಿತೇಂದ್ರ ಮಾತನಾಡಿದ್ದು, ಎಲೆಕ್ಷನ್ ಸಹ ಇತ್ತು, ಇದೇ ವೇಳೆ ಇಬ್ಬರು ಯುವತಿಯರ ಹತ್ಯೆಯಾಗಿದೆ. ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳು ಬಂದಿದ್ದವು. ಹೀಗಾಗಿ ನಾನೇ ಬಂದು ಸಭೆ ಮಾಡಿದ್ದೇನೆ, ಸಮಗ್ರ ಮಾಹಿತಿ ಪಡೆದಿದ್ದೇನೆ. ಆದರೆ ಇಲಾಖೆಯ ಆಂತರಿಕ ವಿಚಾರ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಆದರೆ ಕ್ರೈಂ ಅಂಕಿ-ಅಂಶಗಳ ಬಗ್ಗೆ ನಾವು ಪರಿಶೀಲನೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಅಪರಾಧಗಳ ಅಂಕಿ-ಅಂಶ ನೋಡಿದ್ರೆ ಹಿಂದಿಗಿಂತ ಈ ಸಲ ಕಡಿಮೆ ಇದೆ. ಆದರೆ ಹು-ಧಾ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿದೆ. ಹೀಗಾಗಿ ಸಭೆಯಲ್ಲಿ ಪೊಲೀಸ್‌ ಅಧಿಕಾರಿಗಳಿಗೆ ಕೆಲ ಸೂಚನೆ ಕೊಟ್ಟಿದ್ದೇನೆ. ಇದರಂತೆ ಅಪರಾಧ ಪ್ರಕರಣ ಕಡಿಮೆ ಮಾಡಲು ಕ್ರಮ ತೆಗೆದುಕೊಳ್ಳುತ್ತಾರೆ. ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸುವ ಕೆಲಸ ಪೊಲೀಸರು ಮಾಡಲಿದ್ದಾರೆ.

ಇದನ್ನೂ ಓದಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತು ವಿಚಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರಗಳ ಬಗ್ಗೆ ನಾನು ಬಹಿರಂಗವಾಗಿ ಹೇಳುವುದಿಲ್ಲ. ಪೊಲೀಸರ ವಿರುದ್ಧ ಸಾರ್ವಜನಿಕರಿಂದ ಕೆಲ ದೂರುಗಳು ಬಂದಿದ್ದವು. ದೂರು ಬಂದಾಗ ಕೆಲ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಂಜಲಿ ಅಜ್ಜಿ ಮೊದಲೇ ದೂರು ಕೊಡಲು ಬಂದಿದ್ದಳೆಂಬ ವಿಚಾರ ಬಂದಿತ್ತು. ಹೀಗಾಗಿ ಸಂಬಂಧಿಸಿದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹು-ಧಾ ಅವಳಿ ನಗರದಲ್ಲಿ ಪೊಲೀಸ್ ಠಾಣೆಗಳ ಸಂಖ್ಯೆ ಹೆಚ್ಚಿಸಲು ಕ್ರಮಕೈಗೊಳ್ಳಲಿದ್ದು, ಸಭೆಯ ಸಮಗ್ರವಾದ ವರದಿ ಗೃಹ ಸಚಿವರಿಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ