AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆಗೆ ಸಾಸಿವೆ, ಜೀರಿಗೆ ಬಳಸುವ ಮುನ್ನ ಎಚ್ಚರ: ಅದರಲ್ಲೂ ಕಲಬೆರಿಕೆ, ಬಣ್ಣ ಮಿಕ್ಸ್?

ಅಡುಗೆಗೆ ಮಸಾಲೆ ಪದಾರ್ಥಗಳು ತುಂಬಾನೆ ಮುಖ್ಯ. ಕೆಲವರು ಅಡುಗೆಗೆ ಮಸಾಲ ಪದಾರ್ಥಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಹೀಗಿರುವಾಗ, ಅನೇಕ ಮಸಾಲೆ ಪದಾರ್ಥಗಳಲ್ಲೂ ಕಲಬೆರೆಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ. ನಿರಂತರ ಆಹಾರ ಕಲಬೆರೆಕೆ ಹಿನ್ನೆಲೆಯಲ್ಲ ಸಿಟಿ ಜನರು ಕೂಡ ಬೇಸತ್ತು ಹೋಗಿದ್ದಾರೆ.

ಅಡುಗೆಗೆ ಸಾಸಿವೆ, ಜೀರಿಗೆ ಬಳಸುವ ಮುನ್ನ ಎಚ್ಚರ: ಅದರಲ್ಲೂ ಕಲಬೆರಿಕೆ, ಬಣ್ಣ ಮಿಕ್ಸ್?
ಸಾಸಿವೆ, ಜೀರಿಗೆ
Follow us
Vinay Kashappanavar
| Updated By: ವಿವೇಕ ಬಿರಾದಾರ

Updated on:Apr 23, 2025 | 6:43 PM

ಬೆಂಗಳೂರು, ಏಪ್ರಿಲ್​ 23: ಆಹಾರ ಇಲಾಖೆ (Food Department) ಈಗಾಗಲೇ ಜನಸಾಮಾನ್ಯರು ಸೇವಿಸುವ ಆಹಾರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅನೇಕ ಆಹಾರ ಪದಾರ್ಥಗಳ (Food items) ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ನಡೆಸುತ್ತಿದೆ. ಪರೀಕ್ಷಾ ವರದಿ ಆಧರಿಸಿ ಕಳಪೆ ಅಥವಾ ಕಲಬೆರಕೆ ಮಾಡುವವರ ವಿರುದ್ಧ ಕ್ರಮವನ್ನ ಕೈಗೊಳ್ಳುತ್ತಿದೆ. ಇಡ್ಲಿ, ಬಟಾಣಿ ಸೇರಿದಂತೆ ಅನೇಕ ತಿನಿಸುಗಳ ಬಳಿಕ, ಇದೀಗ ಮಸಾಲೆ ಪದಾರ್ಥಗಳ ಮೇಲೆ ಗಮನಹರಿಸಿದೆ.

ಜೀರಿಗೆಯಲ್ಲಿ ಕಲಬೆರೆಕೆ ಜೊತೆಗೆ ಬಣ್ಣ ಕೂಡ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದೆ. ಜೀರಿಗೆಗೆ ಬಣ್ಣದ ಕೋಟಿಂಗ್, ಅಥವಾ ಲೆಡ್ ಕ್ರೋಮೆಟ್ ಕೆಮಿಕಲ್ ಮಿಕ್ಸ್ ಮಾಡುವ ಸಾಧ್ಯತೆ ಇರುತ್ತೆ. ಇದರ ಜೊತೆಗೆ ಇದರ ವಾಲ್ಯೂಮ್ ಹೆಚ್ಚಳ ಮಾಡಲು, ಮರದ ಡಸ್ಟ್ ಹಾಗೂ ಕಸ ಮಣ್ಣು ಸೇರಿಸಲಾಗುತ್ತಿದೆ.

ಈ ಹಿನ್ನೆಲೆ ನಗರದಲ್ಲಿ‌ ಕಳಪೆ ಗುಣಮಟ್ಟದ ಜೀರಿಗೆ ಮಾರಾಟವಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಇನ್ನು ಆಹಾರ ಪದಾರ್ಥಗಳಲ್ಲಿನ ಕಲಬೆರಕೆಯಿಂದ ಆರೋಗ್ಯದ ಮೇಲೆ ಗಂಭಿರ ಪರಿಣಾಮ ಬೀರುತತ್ತದೆ. ಹೀಗಾಗಿ, ಎಚ್ಚರವಹಿಸುವಂತೆ ಆಹಾರ ತಜ್ಞರು ಎಚ್ಚರಿಸಿದ್ದಾರೆ.

ಇದನ್ನೂ ಓದಿ
Image
ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ
Image
ಲ್ಯಾಬ್ ವರದಿಯಲ್ಲಿ ಸ್ಫೋಟಕ ಅಂಶ ಪತ್ತೆ: ಬಟಾಣಿ ಬ್ಯಾನ್​ ಆಗುತ್ತಾ?
Image
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!

ಇನ್ನು, ಈಗಾಗಲೇ ಬೆಂಗಳೂರಿನ ಅನೇಕ ಭಾಗಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಕಡೆಗಳಿಂದ ಜೀರಿಗೆಯ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಈ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಇದ್ರ ವರದಿ ಕೆಲವೇ ದಿನಗಳಲ್ಲಿ ಬರಲಿದೆ. ಇದರಲ್ಲಿ ಏನೆಲ್ಲ ಅಂಶಗಳು ಸೇರಿದೆ ಎನ್ನುವುದನ್ನ ತಿಳಿದ ಬಳಿಕ ಕಲಬೆರೆಕೆ ಅಥವಾ ಬಣ್ಣದ ಕೋಟಿಂಗ್ ಮಾಡಲಾಗುತ್ತಿದಿಯಾ ಅನ್ನೋದ್ರ ಕುರಿತು ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಪ್ಲಾನ್ ಮಾಡುತ್ತಿದೆ. ಇನ್ನು ರೆ.ನಿರಂತರ ಆಹಾರ ಕಲಬೆರೆಕೆ ಹಿನ್ನೆಲೆಯಲ್ಲ ಸಿಟಿ ಜನರು ಕೂಡ ಬೇಸತ್ತು ಹೋಗಿದ್ದಾ

ಇದನ್ನೂ ಓದಿ: ಪನ್ನೀರ್ ಪ್ರಿಯರಿಗೆ ಶಾಕಿಂಗ್ ಸುದ್ದಿ: ಆಹಾರ ಇಲಾಖೆ ಪರೀಕ್ಷೆ ವೇಳೆ ಬ್ಯಾಕ್ಟೀರಿಯಾ ಅಂಶ ಪತ್ತೆ

ಒಟ್ಟಿನಲ್ಲಿ ಜನರ ಆರೋಗ್ಯಕ್ಕೆ ಅನೇಕ ತಿನಿಸುಗಳ ಕೆಟ್ಟ ಪರಿಣಾಮ ಬೀರುತ್ತಿದ್ವು. ಇದೀಗ ಮಸಾಲೆ ಪದಾರ್ಥಗಳು ಕೂಡಾ ಇದೇ ಸಾಲಿಗೆ ಸೇರುತ್ತಾ ಇಲ್ವಾ ಅನ್ನೋದನ ವರದಿ ಬಂದ ಬಳಿಕ ತಿಳಿಯಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:37 pm, Wed, 23 April 25

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ