AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ

ಕರ್ನಾಟಕ ಸರ್ಕಾರವು ಡಾ. ಎಂ.ಎ. ಸಲೀಂ ಅವರನ್ನು ಪ್ರಭಾರ ಪೊಲೀಸ್ ಮಹಾನಿರ್ದೇಶಕರಾಗಿ ನೇಮಿಸಿದ್ದು, ಈ ನೇಮಕಾತಿಯನ್ನು ವಕೀಲೆ ಸುಧಾ ಕಟ್ವಾ ಅವರು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ, ನೇಮಕಾತಿಯನ್ನು ರದ್ದುಗೊಳಿಸುವಂತೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಏಳು ದಿನಗಳಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಅವರು ಪಿಐಎಲ್ ಸಲ್ಲಿಸುವುದಾಗಿ ಎಚ್ಚರಿಸಿದ್ದಾರೆ.

ಡಿಜಿ-ಐಜಿಪಿ ಎಂ ಎ ಸಲೀಂ ಆಯ್ಕೆ ಪ್ರಶ್ನಿಸಿ ಪತ್ರ: ಕೋರ್ಟ್​ಗೆ ಹೋಗುವ ಎಚ್ಚರಿಕೆ ನೀಡಿದ ವಕೀಲೆ
ಎಂ ಎ ಸಲೀಂ
Shivaprasad B
| Edited By: |

Updated on:May 26, 2025 | 6:55 PM

Share

ಬೆಂಗಳೂರು, ಮೇ 26: ಕರ್ನಾಟಕದ ಪ್ರಭಾರಿ ಡಿಜಿ-ಐಜಿಪಿಯಾಗಿ ನೇಮಕವಾಗಿರುವ ಎಂ.ಎ.ಸಲೀಂ (MA Salim) ಅವರಿಗೆ ಸಂಕಷ್ಟ ಎದುರಾಗಿದೆ. ಕನ್ನಡಿಗ, ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ.ಎ ಸಲೀಂ ಅವರನ್ನು ರಾಜ್ಯದ ಪೊಲೀಸ್​ ಮಹಾನಿರ್ದೇಶಕರನ್ನಾಗಿ (ಪ್ರಭಾರ) ನೇಮಕ ಮಾಡಿ ರಾಜ್ಯ ಸರ್ಕಾರ (Karnataka Government) ಕಳೆದ ಬುಧವಾರ (ಮೇ.21) ಆದೇಶ ಹೊರಡಿಸಿತ್ತು. ಈ ಆದೇಶ ಹಿಂಪಡೆಯುವಂತೆ ವಕೀಲೆ ಸುಧಾ ಕಟ್ವಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್​ನ ಆದೇಶದಂತೆ ಪ್ರಭಾರ ಡಿಜಿ-ಐಜಿಪಿ ನೇಮಿಸುವಂತಿಲ್ಲ. ಯಾವುದೇ ವಿಶೇಷ ಕಾರಣ ನೀಡದೆ, ಅವಧಿ ಉಲ್ಲೇಖಿಸದೆ ಡಿಜಿ-ಐಜಿಪಿ ನೇಮಕ‌ ಮಾಡಲಾಗಿದೆ. ಈ ಮೂಲಕ ಸಂವಿಧಾನ ಮತ್ತು ಕಾನೂನು ಉಲ್ಲಂಘಿಸಲಾಗಿದೆ. ಹೀಗಾಗಿ. ಡಾ. ಎಂ.ಎ.ಸಲೀಂ ಅವರ ನೇಮಕಾತಿ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ಮಾರ್ಗಸೂಚಿಯಂತೆ ನೇಮಕ ಮಾಡಲಿ. ಏಳು ದಿನಗಳಲ್ಲಿ ನಿಯಮ ಪಾಲಿಸದಿದ್ದರೆ ಪಿಐಎಲ್​ ಸಲ್ಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂ.ಎ ಸಲೀಂ ನೇಮಕ

ಬುಧವಾರ (ಮೇ.21) ಹಿರಿಯ ಐಪಿಎಸ್​ ಅಧಿಕಾರಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ರಾಜ್ಯ ಪೊಲೀಸ್​ ಮಹಾನಿರ್ದೇಶಕರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಡಿಜಿ-ಐಜಿಪಿ ಡಾ. ಅಲೋಕ್​ ಮೋಹನ್​ ಅವರ ಸೇವಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಡಾ. ಎಂ. ಎ ಸಲೀಂ ಅವರನ್ನು ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕ ಮಾಡಿದೆ. ಈ ನೇಮಕವನ್ನು ಪ್ರಶ್ನಿಸಿ ವಕೀಲೆಯೊಬ್ಬರು ಸರ್ಕಾರದ ಸಿಎಸ್​​​ಗೆ ಪತ್ರ ಬರೆದಿದ್ದಾರೆ.

ಡಾ. ಎಂ. ಎ ಸಲೀಂ ಅವರು 1966ರ ಜೂನ್​ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್​ ಮ್ಯಾನೇಜ್ಮೆಂಟ್​ ವಿಷಯದಲ್ಲಿ ಡಾಕ್ಟರೇಟ್​ ಪದವಿಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Mon, 26 May 25

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್