AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು. ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ […]

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ
ಸಾಧು ಶ್ರೀನಾಥ್​
| Edited By: |

Updated on:Oct 28, 2020 | 4:04 PM

Share

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು.

ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ ಕೋರ್ಟನಲ್ಲಿ ನಡೆಯುತ್ತಿದ್ದಾಗ, ಕೋರ್ಟೇ ಖುದ್ದಾಗಿ ಭಟ್ ಅವರನ್ನು ಶ್ರೀರಾಮನ ಪರವಾಗಿ ವಾದಿಸಲು ಕೇಳಿತ್ತು. ಈ ಸಂಬಂಧ ಕೆಲಸ ಪ್ರಾರಂಭಿಸಿದ ಭಟ್ ಅವರು ಬೇರೆ ಬೇರೆ ಜನರನ್ನು ಭೇಟಿ ಮಾಡಿ ಅಪರೂಪದ ದಾಖಲೆಗಳನ್ನು ಕಲೆ ಹಾಕಿ ಕೋರ್ಟಿಗೆ ಸಲ್ಲಿಸಿದ್ದಷ್ಟೇ ಅಲ್ಲ, ಮೂರು ವರ್ಷ ತಮ್ಮ ವಾದವನ್ನು ಯಶಸ್ವಿಯಾಗಿ ಮಂಡಿಸಿದರು.

ಅಲಹಾಬಾದ್ ಹೈಕೋರ್ಟ ತೀರ್ಪು 2010 ರಲ್ಲಿ ಹೊರಬಿದ್ದಿತ್ತು. ಅದಾದ ನಂತರ ಬಂದ ಸುಪ್ರೀಂ ಕೋರ್ಟ ತೀರ್ಪಿನಲ್ಲಿ, ಶ್ರೀರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ ಬಗ್ಗೆ ಸಾಕ್ಷ್ಯಾಧಾರ ಇದೆ ಎಂದು ಹೇಳಿದ್ದು ಭಟ್ ಅವರ ವೃತ್ತಿಪರತೆ ಮತ್ತು ಕೌಶಲ್ಯವನ್ನು ಎತ್ತಿ ಹಿಡಿದಿತ್ತು.

1940 ರಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಹುಟ್ಟಿದ ಭಟ್ ಅವರು 1962 ದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. 1986 ರಲ್ಲಿ ಸುಪ್ರೀಂ ಕೋರ್ಟ್​ ಅವರನ್ನು ಹಿರಿಯ ನ್ಯಾಯವಾದಿಯಾಗಿ ಗೌರವಿಸಿದೆ. 1996 ರಲ್ಲಿ ಅವರನ್ನು ಕೇಂದ್ರ ಸರಕಾರ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ನೇಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ

Published On - 1:46 pm, Wed, 28 October 20

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ