AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು. ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ […]

ಶ್ರೀರಾಮನ ಪರವಾಗಿ ವಾದಿಸಿದ್ದ ಕೆ.ಎನ್. ಭಟ್​ಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ
ಸಾಧು ಶ್ರೀನಾಥ್​
| Edited By: |

Updated on:Oct 28, 2020 | 4:04 PM

Share

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿರುವ ಹಲವಾರು ಸಾಧಕರ ಮಧ್ಯೆ ಇರುವ ಒಬ್ಬ ವಿಜೇತರ ಸಾಧನೆ ವಿಶಿಷ್ಟ ಮತ್ತು ಅಪರೂಪದ್ದಾಗಿದೆ. ಅವರೇ ವಕೀಲ ಕೆ.ಎನ್. ಭಟ್. ಅವರದ್ದು ವಿಶಿಷ್ಟ ಸೇವಾನುಭವ. ನ್ಯಾಯಾಲಯದಲ್ಲಿ ಸಾವಿರಾರು ಕಕ್ಷಿದಾರರ ಪರವಾಗಿ ವಾದಿಸಿ ಯಶಸ್ವಿ ವಕೀಲರಾಗಿ ಮತ್ತು ಕಾನೂನು ಪಂಡಿತರೆಂದು ಹೆಸರುವಾಸಿಯಾದವರು. ಸದ್ಯ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಭಟ್ ಅವರ ಕಕ್ಷಿದಾರರ ಪಟ್ಟಿಯಲ್ಲಿ ಅಯೋಧ್ಯೆಯ ಶ್ರೀರಾಮನೂ ಬರುತ್ತಾನೆ! ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು.

ಅದು ಹೇಗೆ? ರಾಮ ಜನ್ಮಭೂಮಿ ಕೇಸ್ ಅಲಹಾಬಾದ್ ಹೈ ಕೋರ್ಟನಲ್ಲಿ ನಡೆಯುತ್ತಿದ್ದಾಗ, ಕೋರ್ಟೇ ಖುದ್ದಾಗಿ ಭಟ್ ಅವರನ್ನು ಶ್ರೀರಾಮನ ಪರವಾಗಿ ವಾದಿಸಲು ಕೇಳಿತ್ತು. ಈ ಸಂಬಂಧ ಕೆಲಸ ಪ್ರಾರಂಭಿಸಿದ ಭಟ್ ಅವರು ಬೇರೆ ಬೇರೆ ಜನರನ್ನು ಭೇಟಿ ಮಾಡಿ ಅಪರೂಪದ ದಾಖಲೆಗಳನ್ನು ಕಲೆ ಹಾಕಿ ಕೋರ್ಟಿಗೆ ಸಲ್ಲಿಸಿದ್ದಷ್ಟೇ ಅಲ್ಲ, ಮೂರು ವರ್ಷ ತಮ್ಮ ವಾದವನ್ನು ಯಶಸ್ವಿಯಾಗಿ ಮಂಡಿಸಿದರು.

ಅಲಹಾಬಾದ್ ಹೈಕೋರ್ಟ ತೀರ್ಪು 2010 ರಲ್ಲಿ ಹೊರಬಿದ್ದಿತ್ತು. ಅದಾದ ನಂತರ ಬಂದ ಸುಪ್ರೀಂ ಕೋರ್ಟ ತೀರ್ಪಿನಲ್ಲಿ, ಶ್ರೀರಾಮ ಅಯೋಧ್ಯೆಯಲ್ಲಿ ಹುಟ್ಟಿದ್ದ ಬಗ್ಗೆ ಸಾಕ್ಷ್ಯಾಧಾರ ಇದೆ ಎಂದು ಹೇಳಿದ್ದು ಭಟ್ ಅವರ ವೃತ್ತಿಪರತೆ ಮತ್ತು ಕೌಶಲ್ಯವನ್ನು ಎತ್ತಿ ಹಿಡಿದಿತ್ತು.

1940 ರಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಹುಟ್ಟಿದ ಭಟ್ ಅವರು 1962 ದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. 1986 ರಲ್ಲಿ ಸುಪ್ರೀಂ ಕೋರ್ಟ್​ ಅವರನ್ನು ಹಿರಿಯ ನ್ಯಾಯವಾದಿಯಾಗಿ ಗೌರವಿಸಿದೆ. 1996 ರಲ್ಲಿ ಅವರನ್ನು ಕೇಂದ್ರ ಸರಕಾರ ಅಡಿಶನಲ್ ಸಾಲಿಸಿಟರ್ ಜನರಲ್ ಆಗಿ ನೇಮಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಈ ಬಾರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ, ಪುರಸ್ಕೃತರ ಪಟ್ಟಿ ಇಲ್ಲಿದೆ

Published On - 1:46 pm, Wed, 28 October 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​