AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜ್ಯುವೆಲ್ಲರಿಗೆ ಕನ್ನ ಹಾಕಿದ್ದು ಕೇರಳ, ಅಫ್ಘಾನ್ ದರೋಡೆಕೋರರು!

ಮಂಗಳೂರು: ಮಂಗಳೂರಿನ ಭವಂತಿ ಬೀದಿಯಲ್ಲಿರುವ ಅರುಣ್ ಜುವೆಲ್ಲರಿಯಲ್ಲಾದ ದರೋಡೆ ಪ್ರಕರಣಕ್ಕೆ ಈಗ ಮಹತ್ವದ ಸುಳಿವು ಸಿಕ್ಕಿದೆ. ಕಳೆದ 22 ದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಂದು ಕೋಟಿ ಮೌಲ್ಯದ ಮೂರು ಕೆಜಿ ಚಿನ್ನ ಹಾಗೂ 20 ಕೆ.ಜಿ ಬೆಳ್ಳಿ ದರೋಡೆಯಾಗಿತ್ತು.  ಈಗ ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಜ್ಯುವೆಲ್ಲರಿ ದರೋಡೆಗೆ ಅಫ್ಘಾನಿಸ್ತಾನದ ಲಿಂಕ್: ಒಂದು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದಿಯಲು ದರೋಡೆ ಕೋರರು ದೊಡ್ಡ ಪ್ಲಾನೇ ಮಾಡಿದ್ದರು. ನಟೋರಿಯಸ್ ಕ್ರಿಮಿನಲ್ ಟೀಂನಿಂದ […]

ಮಂಗಳೂರು ಜ್ಯುವೆಲ್ಲರಿಗೆ ಕನ್ನ ಹಾಕಿದ್ದು ಕೇರಳ, ಅಫ್ಘಾನ್ ದರೋಡೆಕೋರರು!
ಸಾಧು ಶ್ರೀನಾಥ್​
|

Updated on:Sep 26, 2019 | 4:31 PM

Share

ಮಂಗಳೂರು: ಮಂಗಳೂರಿನ ಭವಂತಿ ಬೀದಿಯಲ್ಲಿರುವ ಅರುಣ್ ಜುವೆಲ್ಲರಿಯಲ್ಲಾದ ದರೋಡೆ ಪ್ರಕರಣಕ್ಕೆ ಈಗ ಮಹತ್ವದ ಸುಳಿವು ಸಿಕ್ಕಿದೆ. ಕಳೆದ 22 ದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಂದು ಕೋಟಿ ಮೌಲ್ಯದ ಮೂರು ಕೆಜಿ ಚಿನ್ನ ಹಾಗೂ 20 ಕೆ.ಜಿ ಬೆಳ್ಳಿ ದರೋಡೆಯಾಗಿತ್ತು.  ಈಗ ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಜ್ಯುವೆಲ್ಲರಿ ದರೋಡೆಗೆ ಅಫ್ಘಾನಿಸ್ತಾನದ ಲಿಂಕ್: ಒಂದು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದಿಯಲು ದರೋಡೆ ಕೋರರು ದೊಡ್ಡ ಪ್ಲಾನೇ ಮಾಡಿದ್ದರು. ನಟೋರಿಯಸ್ ಕ್ರಿಮಿನಲ್ ಟೀಂನಿಂದ ಈ ದರೋಡೆಯ ಸಂಚು ರೂಪಿಸಲಾಗಿತ್ತು. ಭೂಗತ ಜಗತ್ತಿನ ನೇರ ಸಂಪರ್ಕ ಹೊಂದಿದ್ದ ಕೇರಳ ಮೂಲದ ನಟೋರಿಯಸ್ ರೌಡಿ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್,  ಅಫ್ಘಾನಿಸ್ತಾನ ಮೂಲದ ವಾಲಿ ಮಹಮ್ಮದ್ ಶಮಿ, ಮತ್ತು ಮಹಮ್ಮದ್ ಅಜೀಂ ಜೊತೆ ಸೇರಿದ ಮೂವರ ದರೋಡೆ ಕೋರರ ಗ್ಯಾಂಗ್  ಜುವೆಲ್ಲರಿ ಮಳಿಗೆಯ ಗೋಡೆ ಕೊರೆದು ಕಳ್ಳತನ ಮಾಡಿದ್ದಾರೆ. ಕಳ್ಳರು ಆಭರಣ ಅಂಗಡಿಯ ಲಾಕರ್ ಮುರಿಯಲು ವೆಲ್ಡಿಂಗ್ ಯಂತ್ರ, ಆಮ್ಲಜನಕ ಸಿಲಿಂಡರ್ ಮತ್ತು ಎಲ್ಪಿಜಿ ಸಿಲಿಂಡರ್ ಬಳಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ಸೆಪ್ಟೆಂಬರ್ 24 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ನಂತರ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಿಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಫಘಾನ್ ಪ್ರಜೆಗಳಿರುವುದರಿಂದ ಪ್ರೋಟೋಕಾಲ್ ಪ್ರಕಾರ ಅಫ್ಘಾನಿಸ್ತಾನ ರಾಯಭಾರ ಕಚೇರಿಗೆ ಬಂಧನದ ಬಗ್ಗೆ ವರದಿಯನ್ನು ರವಾನಿಸಬೇಕಿದೆ ಹಾಗಾಗಿ ಈಗ  ನವದೆಹಲಿಯ ಉಪ ಕಾರ್ಯದರ್ಶಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ವರದಿಯನ್ನ ಕಳುಹಿಸಲಾಗಿದೆ.

Published On - 4:30 pm, Thu, 26 September 19

Follow Us
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್