AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜ್ಯುವೆಲ್ಲರಿಗೆ ಕನ್ನ ಹಾಕಿದ್ದು ಕೇರಳ, ಅಫ್ಘಾನ್ ದರೋಡೆಕೋರರು!

ಮಂಗಳೂರು: ಮಂಗಳೂರಿನ ಭವಂತಿ ಬೀದಿಯಲ್ಲಿರುವ ಅರುಣ್ ಜುವೆಲ್ಲರಿಯಲ್ಲಾದ ದರೋಡೆ ಪ್ರಕರಣಕ್ಕೆ ಈಗ ಮಹತ್ವದ ಸುಳಿವು ಸಿಕ್ಕಿದೆ. ಕಳೆದ 22 ದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಂದು ಕೋಟಿ ಮೌಲ್ಯದ ಮೂರು ಕೆಜಿ ಚಿನ್ನ ಹಾಗೂ 20 ಕೆ.ಜಿ ಬೆಳ್ಳಿ ದರೋಡೆಯಾಗಿತ್ತು.  ಈಗ ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಜ್ಯುವೆಲ್ಲರಿ ದರೋಡೆಗೆ ಅಫ್ಘಾನಿಸ್ತಾನದ ಲಿಂಕ್: ಒಂದು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದಿಯಲು ದರೋಡೆ ಕೋರರು ದೊಡ್ಡ ಪ್ಲಾನೇ ಮಾಡಿದ್ದರು. ನಟೋರಿಯಸ್ ಕ್ರಿಮಿನಲ್ ಟೀಂನಿಂದ […]

ಮಂಗಳೂರು ಜ್ಯುವೆಲ್ಲರಿಗೆ ಕನ್ನ ಹಾಕಿದ್ದು ಕೇರಳ, ಅಫ್ಘಾನ್ ದರೋಡೆಕೋರರು!
ಸಾಧು ಶ್ರೀನಾಥ್​
|

Updated on:Sep 26, 2019 | 4:31 PM

Share

ಮಂಗಳೂರು: ಮಂಗಳೂರಿನ ಭವಂತಿ ಬೀದಿಯಲ್ಲಿರುವ ಅರುಣ್ ಜುವೆಲ್ಲರಿಯಲ್ಲಾದ ದರೋಡೆ ಪ್ರಕರಣಕ್ಕೆ ಈಗ ಮಹತ್ವದ ಸುಳಿವು ಸಿಕ್ಕಿದೆ. ಕಳೆದ 22 ದಿನಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣದಲ್ಲಿ ಒಂದು ಕೋಟಿ ಮೌಲ್ಯದ ಮೂರು ಕೆಜಿ ಚಿನ್ನ ಹಾಗೂ 20 ಕೆ.ಜಿ ಬೆಳ್ಳಿ ದರೋಡೆಯಾಗಿತ್ತು.  ಈಗ ಈ ಸಂಬಂಧ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಜ್ಯುವೆಲ್ಲರಿ ದರೋಡೆಗೆ ಅಫ್ಘಾನಿಸ್ತಾನದ ಲಿಂಕ್: ಒಂದು ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದಿಯಲು ದರೋಡೆ ಕೋರರು ದೊಡ್ಡ ಪ್ಲಾನೇ ಮಾಡಿದ್ದರು. ನಟೋರಿಯಸ್ ಕ್ರಿಮಿನಲ್ ಟೀಂನಿಂದ ಈ ದರೋಡೆಯ ಸಂಚು ರೂಪಿಸಲಾಗಿತ್ತು. ಭೂಗತ ಜಗತ್ತಿನ ನೇರ ಸಂಪರ್ಕ ಹೊಂದಿದ್ದ ಕೇರಳ ಮೂಲದ ನಟೋರಿಯಸ್ ರೌಡಿ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್,  ಅಫ್ಘಾನಿಸ್ತಾನ ಮೂಲದ ವಾಲಿ ಮಹಮ್ಮದ್ ಶಮಿ, ಮತ್ತು ಮಹಮ್ಮದ್ ಅಜೀಂ ಜೊತೆ ಸೇರಿದ ಮೂವರ ದರೋಡೆ ಕೋರರ ಗ್ಯಾಂಗ್  ಜುವೆಲ್ಲರಿ ಮಳಿಗೆಯ ಗೋಡೆ ಕೊರೆದು ಕಳ್ಳತನ ಮಾಡಿದ್ದಾರೆ. ಕಳ್ಳರು ಆಭರಣ ಅಂಗಡಿಯ ಲಾಕರ್ ಮುರಿಯಲು ವೆಲ್ಡಿಂಗ್ ಯಂತ್ರ, ಆಮ್ಲಜನಕ ಸಿಲಿಂಡರ್ ಮತ್ತು ಎಲ್ಪಿಜಿ ಸಿಲಿಂಡರ್ ಬಳಸಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ಸೆಪ್ಟೆಂಬರ್ 24 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ನಂತರ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಿಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ಅಫಘಾನ್ ಪ್ರಜೆಗಳಿರುವುದರಿಂದ ಪ್ರೋಟೋಕಾಲ್ ಪ್ರಕಾರ ಅಫ್ಘಾನಿಸ್ತಾನ ರಾಯಭಾರ ಕಚೇರಿಗೆ ಬಂಧನದ ಬಗ್ಗೆ ವರದಿಯನ್ನು ರವಾನಿಸಬೇಕಿದೆ ಹಾಗಾಗಿ ಈಗ  ನವದೆಹಲಿಯ ಉಪ ಕಾರ್ಯದರ್ಶಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ವರದಿಯನ್ನ ಕಳುಹಿಸಲಾಗಿದೆ.

Published On - 4:30 pm, Thu, 26 September 19

Follow Us
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?