AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಜಾರಿಯಾಗಲಿದೆ.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ
ಸಾಂದರ್ಭಿಕ ಚಿತ್ರ
Vinayak Hanamant Gurav
| Edited By: |

Updated on:Apr 01, 2024 | 11:09 AM

Share

ಬೆಂಗಳೂರು, ಏಪ್ರಿಲ್​ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ (Electricity bill reduce) ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೆ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಇದನ್ನೂ ಓದಿ: 50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಆದರೆ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್​ನಲ್ಲಿ ಬರುವ ಬಿಲ್​​ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್​ನಲ್ಲಿ ಈ ದರ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Mon, 1 April 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ