AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಜಾರಿಯಾಗಲಿದೆ.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ
ಸಾಂದರ್ಭಿಕ ಚಿತ್ರ
Vinayak Hanamant Gurav
Vinayak Hanamant Gurav| Edited By: ವಿವೇಕ ಬಿರಾದಾರ|

Updated on:Apr 01, 2024 | 11:09 AM

Share

ಬೆಂಗಳೂರು, ಏಪ್ರಿಲ್​ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ (Electricity bill reduce) ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೆ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಇದನ್ನೂ ಓದಿ: 50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಆದರೆ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್​ನಲ್ಲಿ ಬರುವ ಬಿಲ್​​ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್​ನಲ್ಲಿ ಈ ದರ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Mon, 1 April 24

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ