AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ

15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. ಗೃಹ ಬಳಕೆಯಲ್ಲಿ 100 ಯುನಿಟ್​ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಜಾರಿಯಾಗಲಿದೆ.

15 ವರ್ಷದ ಬಳಿಕ ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: 100 ಯುನಿಟ್​​ಗಿಂತ ಹೆಚ್ಚು ಬಳಸುವವರಿಗೆ ಲಾಭ
ಸಾಂದರ್ಭಿಕ ಚಿತ್ರ
Vinayak Hanamant Gurav
| Edited By: |

Updated on:Apr 01, 2024 | 11:09 AM

Share

ಬೆಂಗಳೂರು, ಏಪ್ರಿಲ್​ 01: ಲೋಕಸಭೆ ಚುನಾವಣೆ (Lok Sabha Election) ಸಮಯದಲ್ಲಿ ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗವು (KERC) ಗುಡ್​ ನ್ಯೂಸ್​ ನೀಡಿದೆ. ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ (Electricity bill reduce) ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ. 2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೆ ಜಾರಿಯಾಗಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಇದನ್ನೂ ಓದಿ: 50 ಮೀಟರ್ ಅಂತರದಲ್ಲೇ ಲೈನ್ ಹೋದ್ರೂ ಈ ಗ್ರಾಮಕ್ಕಿಲ್ಲ ವಿದ್ಯುತ್ ಸಂಪರ್ಕ, ಮತದಾನ ಬಹಿಷ್ಕಾರ ಎಚ್ಚರಿಕೆ

ಆದರೆ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ. ಗ್ರಾಹಕರಿಗೆ ದರ ಕಡಿತದ ಲಾಭ ಏಪ್ರಿಲ್​ನಲ್ಲಿ ಬರುವ ಬಿಲ್​​ನಲ್ಲಿ ಬರುವುದಿಲ್ಲ. ಮೇ ತಿಂಗಳಿನಲ್ಲಿ ಬರುವ ಬಿಲ್​ನಲ್ಲಿ ಈ ದರ ಅನ್ವಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:07 am, Mon, 1 April 24

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ