AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿ ಜೊತೆ ದುಷ್ಕರ್ಮಿಗಳು ಎಸ್ಕೇಪ್, ಖದೀಮರಿಗಾಗಿ ಹುಡುಕಾಟ

ಆರೋಪಿಯನ್ನು ಕರೆದೊಯ್ಯುವ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ಮಾಡಿದ್ದು ಆರೋಪಿಯ ಜೊತೆ ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ.

ಗದಗ: ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿ ಜೊತೆ ದುಷ್ಕರ್ಮಿಗಳು ಎಸ್ಕೇಪ್, ಖದೀಮರಿಗಾಗಿ ಹುಡುಕಾಟ
ಗದಗ: ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಆರೋಪಿ ಜೊತೆ ದುಷ್ಕರ್ಮಿಗಳು ಎಸ್ಕೇಪ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಆಯೇಷಾ ಬಾನು|

Updated on:Jun 29, 2024 | 11:05 AM

Share

ಗದಗ, ಜೂನ್.29: ಕಳ್ಳತನ, ದರೋಡೆ ಆರೋಪಿಯನ್ನು ಕರೆದೊಯ್ಯುವ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಅಟ್ಯಾಕ್ ನಡೆದಿದೆ (Miscreants Attack On Police). ಗದಗ ನಗರದ ಬೆಟಗೇರಿ ರೈಲ್ವೆ ಅಂಡರ್ ಬ್ರಿಜ್ಜ್ ಬಳಿ ದುಷ್ಕರ್ಮಿಗಳು ಪೊಲೀಸರ ವಾಹನ ಅಡ್ಡಗಟ್ಟಿ ಹಲ್ಲೆ ನಡೆಸಿ ಆರೋಪಿಯ ಜೊತೆ ಎಸ್ಕೇಪ್ ಆಗಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಗಾಯಾಳು ಪೊಲೀಸರನ್ನು ಬೆಟಗೇರಿ ಖಾಸಗಿ ಆಸ್ಪತ್ರೆಗೆ (Betageri Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಬರಿ ಆರೋಪಿಯನ್ನು ಕರೆದೊಯ್ಯಲು ಗಂಗಾವತಿ ಪೊಲೀಸರು ಖಾಸಗಿ ವಾಹನದಲ್ಲಿ ಬಂದಿದ್ದರು. ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಇನೋವಾ ಕಾರ್ ನಂಬರ್ KA 22 Z 1636ನಲ್ಲಿ ಗಂಗಾವತಿ ಪೊಲೀಸರು ಬಂದಿದ್ದರು. ಗದಗ ಎಸ್.ಎಂ. ಕೃಷ್ಣ ನಗರದಿಂದ ಆರೋಪಿ ಮೊಹಮ್ಮದ್ ಅಲಿ ಎಂಬುವವನನ್ನು ವಶಕ್ಕೆ ಪಡೆದು ತೆರಳುತ್ತಿದ್ದಾಗ ಹಲ್ಲೆ ನಡೆದಿದೆ. ಕಾರ್ ಅಡ್ಡಗಟ್ಟಿ ನಾಲ್ವರು ಅನಾಮಿಕರು ಗಂಗಾವತಿ ಟೌನ್ ಪೊಲೀಸ್ ಸ್ಟೇಷನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಹೆಡ್ ಕಾನ್ಸ್ಟೇಬಲ್ ಮರಿಶಾಂತ ಗೌಡ ಎಂಬುವವರ ಮುಖ, ಕಿವಿಗೆ ಗಾಯಗಳಾಗಿವೆ. ಪಿಸಿ ಚಿರಂಜೀವಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಎಎಸ್​ಐ ಶಿವಶರಣ, ಪಿಸಿ ವಿಶ್ವನಾಥ್, ಪಿಸಿ ಮೈಲಾರಪ್ಪ ಸೇರಿದಂತೆ ಐವರ ಪೊಲೀಸ್ ಸಿಬ್ಬಂದಿ ಟೀಂ ಮೇಲೆ ಹಲ್ಲೆ ನಡೆದಿದೆ. ಗಂಗಾವತಿಯ ಜಯನಗರ ಮನೆಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿ: ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಗಾಯಾಳು ಪೊಲೀಸರ ಆರೋಗ್ಯ ವಿಚಾರಿಸಿದ ಗದಗ SP

ಇನ್ನು ಗದಗ-ಬೆಟಗೇರಿಯ ಸಿಎಸ್​ಐ ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಗದಗ ಎಸ್​ಪಿ ನೇಮಗೌಡ ಆರೋಗ್ಯ ವಿಚಾರಿಸಿದರು. ಸಿಬ್ಬಂದಿ ಭೇಟಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸ್​ಪಿ, ಆರೋಪಿಯನ್ನ ವಶಕ್ಕೆ ಪಡೆಯಲು ಬಂದಾಗ ಹಲ್ಲೆ ನಡೆದಿದೆ. ಕಾರಿನ ಗ್ಲಾಸ್ ಒಡೆದು ಆರೋಪಿ ಎಸ್ಕೇಪ್ ಆಗಲು ಸಹಾಯ ಮಾಡಿದ್ದಾರೆ. ಪೊಲೀಸರಿಗೆ ಸಣ್ಣಪುಟ್ಟ ಗಾಯವಾಗಿದೆ. ದೂರಿನನ್ವಯ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಆರೋಪಿಗಳಿಗಾಗಿ ಶೋಧ

ಮತ್ತೊಂದೆಡೆ ಗದಗ ಬೆಟಗೇರಿ ಬಡಾವಣೆ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಬೆಟಗೇರಿ ಬಡಾವಣೆ ಪೊಲೀಸರು ಗಂಗಾವತಿ ಪೊಲೀಸರ ಇನ್ನೋವಾ ವಾಹನ ವಶಕ್ಕೆ ಪಡೆದಿದ್ದು ವಾಹನ ಠಾಣೆ ಮುಂದೆ ನಿಂತಿದೆ. ಸದ್ಯ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ಶುರುವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:04 am, Sat, 29 June 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ