AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಳಿಕ ಗ್ರಾಮೀಣ ಬಡ ವಿದ್ಯಾರ್ಥಿನಿಯರ ಶುಚಿ ನ್ಯಾಪ್​ಕಿನ್ ಯೋಜನೆಯನ್ನೇ ಮರೆತ ಆರೋಗ್ಯ ಇಲಾಖೆ

ಗ್ರಾಮೀಣ ಬಡ ವಿದ್ಯಾರ್ಥಿನಿಯರ ಶ್ರೇಯೋಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಬಚಾವೋ ಭೇಟಿ ಪಢಾವೋ ಎನ್ನುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರಾಜ್ಯ ಸರ್ಕಾರವು ಶುಚಿ ನ್ಯಾಪ್​ಕಿನ್ ಯೋಚನೆಯನ್ನು ಅನುಷ್ಠಾನಕ್ಕೆ ತಂದಿದೆ. ವಿಪರ್ಯಾಸವೆಂದರೆ ಕೊರೊನಾದ ನಂತರದ ದಿನಗಳಿಂದ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿನಿಯರಿಗೆ ಶುಚಿಯಾದ ನ್ಯಾಪ್​ಕಿನ್ ಕೊಡುವ ಯೋಜನೆಯನ್ನೇ ಮರೆತಿದೆ.

ಕೊರೊನಾ ಬಳಿಕ ಗ್ರಾಮೀಣ ಬಡ ವಿದ್ಯಾರ್ಥಿನಿಯರ ಶುಚಿ ನ್ಯಾಪ್​ಕಿನ್ ಯೋಜನೆಯನ್ನೇ ಮರೆತ ಆರೋಗ್ಯ ಇಲಾಖೆ
Sanitary Pads
TV9 Web
| Edited By: |

Updated on: Oct 09, 2022 | 3:42 PM

Share

ಗ್ರಾಮೀಣ ಬಡ ವಿದ್ಯಾರ್ಥಿನಿಯರ ಶ್ರೇಯೋಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಬಚಾವೋ ಭೇಟಿ ಪಢಾವೋ ಎನ್ನುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರಾಜ್ಯ ಸರ್ಕಾರವು ಶುಚಿ ನ್ಯಾಪ್​ಕಿನ್ ಯೋಚನೆಯನ್ನು ಅನುಷ್ಠಾನಕ್ಕೆ ತಂದಿದೆ. ವಿಪರ್ಯಾಸವೆಂದರೆ ಕೊರೊನಾದ ನಂತರದ ದಿನಗಳಿಂದ ರಾಜ್ಯ ಸರ್ಕಾರ ಬಡ ವಿದ್ಯಾರ್ಥಿನಿಯರಿಗೆ ಶುಚಿಯಾದ ನ್ಯಾಪ್​ಕಿನ್ ಕೊಡುವ ಯೋಜನೆಯನ್ನೇ ಮರೆತಿದೆ.

ಯೋಜನೆ ಘೋಷಣೆಗೆ ತೋರಿದ ಆಸಕ್ತಿಯನ್ನು ಅನುಷ್ಠಾನದ ಸಂದರ್ಭದಲ್ಲಿ ಸರ್ಕಾರ ತೋರಿಸದಿರುವುದು ವಿಪರ್ಯಾಸ. ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡುವಂತೆ 2020 ರ ಅಂತ್ಯದಲ್ಲಿ ಹೈಕೋರ್ಟ್​ ಕೂಡ ಸರ್ಕಾರಕ್ಕೆ ಸೂಚಿಸಿತ್ತು.

ಅನುದಾನಿತ ಹಾಗೂ ಸರ್ಕಾರಿ ಹೈಸ್ಕೂಲ್​ಗಳಲ್ಲಿ ಹಾಗೂ ಪಿಯು ಕಾಲೇಜುಗಳಲ್ಲಿ ಓದುತ್ತಿರುವ 10 ರಿಂದ 19 ವರ್ಷದ ವಿದ್ಯಾರ್ಥಿನಿಯರಿಗೆ ತಲಾ 10 ಸ್ಯಾನಿಟರಿ ನ್ಯಾಪ್​ಕಿನ್​ಗಳನ್ನು ತಲಾ 21.50ರೂ.ಗಳಂತೆ ಖರೀದಿಸಿ ವಿತರಿಸುವ ಆಲೋಚನೆ ಮಾಡಿತ್ತು. ಇದಕ್ಕೆ 47 ಕೋಟಿ ರೂ ಖರ್ಚು ಮಾಡಲು ಸಚಿವ ಸಂಪುಟ 2021ರಲ್ಲಿ ಅನುಮೋದನೆ ನೀಡಿತ್ತು.

ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ, ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿನ 6ನೇ ತರಗತಿಯಿಂದ ಎಸ್‍ಎಸ್‍ ಎಲ್ ಸಿ ವಿದ್ಯಾರ್ಥಿನಿಯರಿಗೆ, ಅಂಗನವಾಡಿ ಹಾಗೂ ಆಶಾ ಕಾರ್ಯ ಕರ್ತೆಯರ ಮೂಲಕ 19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಹೆಣ್ಣು ಮಕ್ಕಳಿಗೆ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಅಡಿ ಬರುವ ಶಾಲೆಗಳ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನ್ಯಾಪ್ ಕಿನ್ ನೀಡಲಾಗುತ್ತಿದೆ.

ವಿದ್ಯಾರ್ಥಿನಿಯರು ತಮ್ಮ ಮುಟ್ಟಿನ ಸಮಯದಲ್ಲಿ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದು ತುಂಬಾ ಮುಖ್ಯವಾಗುತ್ತದೆ, ಆದರೆ ಅಷ್ಟು ಹಣವನ್ನು ಕೊಟ್ಟು ಖರೀದಿಸಲು ಗ್ರಾಮೀಣ ಹೆಣ್ಣುಮಕ್ಕಳಿಗೆ ಕಷ್ಟ, ಆದರೆ ಸರ್ಕಾರದ ಈ ಯೋಜನೆಯಿಂದ ತುಂಬಾ ಸಹಾಯವಾಗಿತ್ತು.

ಈ ಮೊದಲು ವರ್ಷ 10 ಅಥವಾ 13 ಸ್ಯಾನಿಟರಿ ಪ್ಯಾಡ್​ಗಳನ್ನು ಹೆಣ್ಣು ಮಕ್ಕಳಿಗೆ ನೀಡಲಾಗುತ್ತಿತ್ತು. ಆದರೆ ಸರ್ಕಾರವು ಈ ನ್ಯಾಪ್​ಕಿನ್ ನೀಡುತ್ತಿಲ್ಲ. ಈ ಕುರಿತು ಯಾವ ಅಧಿಕಾರಿಗಳಿಗೂ ಮಾಹಿತಿ ಇಲ್ಲ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಿಗೆ ಸರ್ಕಾರ ಮೈತ್ರಿ ಮುಟ್ಟಿನ ಕಪ್​ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಿದೆ.

ಹಾಗೆಯೇ ಶಾಲೆಯಲ್ಲಿಯೇ ಒಂದಷ್ಟು ನ್ಯಾಪ್​ಕಿನ್​ಗಳನ್ನು ಸಂಗ್ರಹಿಸಿದ್ದೇವೆ ಅಗತ್ಯ ಬಿದ್ದರೆ ಅವರಿಗೆ ನೀಡುವುದಾಗಿ ಕಾರವಾರದ ಹೈಸ್ಕೂಲ್​ನ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.

ಶುಚಿ ನ್ಯಾಪ್​ಕಿನ್ ಯೋಜನೆಯಿಂದ ಹೆಣ್ಣುಮಕ್ಕಳಿಗೆ ಅನುಕೂಲವಾಗುತ್ತಿತ್ತು. ಅವುಗಳ ವಿತರಣೆ ಏಕೆ ನಿಂತಿದೆ ಎನ್ನುವುದರ ಕುರಿತು ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆಯಲಾಗುವುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ವಿಜಯವಾಣಿಗೆ ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್