AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧ ಆವರಣಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಿ: ಡಿಕೆಶಿ ಸೈಕ್ಲಿಂಗ್ ಬೆನ್ನಲ್ಲೇ ಮೋಹನ್​ದಾಸ್ ಪೈ ಆಗ್ರಹ

ಮೋಹನ್​ದಾಸ್ ಪೈ ಅವರು ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಬೇಕೆಂದು ಆಗ್ರಹಿಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಸೈಕಲ್ ಸವಾರಿ ಫೋಟೋ ವೈರಲ್ ಆದ ನಂತರ ಪೈ ಅವರು ಸಾಮಾಜಿಕ ಮಾಧ್ಯಮದ ಮೂಲಕ ಆಗ್ರಹ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ಪ್ರಸ್ತುತ ವಾರಾಂತ್ಯಗಳಲ್ಲಿ ಶುಲ್ಕದೊಂದಿಗೆ ಪ್ರವೇಶ ಇದೆ.

ವಿಧಾನಸೌಧ ಆವರಣಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ನೀಡಿ: ಡಿಕೆಶಿ ಸೈಕ್ಲಿಂಗ್ ಬೆನ್ನಲ್ಲೇ ಮೋಹನ್​ದಾಸ್ ಪೈ ಆಗ್ರಹ
ಡಿಕೆಶಿ ಸೈಕ್ಲಿಂಗ್ & ಮೋಹನ್​ದಾಸ್ ಪೈ
Follow us
Ganapathi Sharma
|

Updated on: Jun 18, 2025 | 11:24 AM

ಬೆಂಗಳೂರು, ಜೂನ್ 18: ವಿಧಾನಸೌಧದ ಆವರಣದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೈಕಲ್ ಸವಾರಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಉದ್ಯಮಿ ಮೋಹನ್​ದಾಸ್ ಪೈ (Mohandas Pai), ಸಾರ್ವಜನಿಕರಿಗೂ ಆಡಳಿತಸೌಧದ ಆವರಣ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾದ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ನಾಗರಿಕರಿಗೆ ವಿಧಾನಸೌಧದ ಆವರಣಕ್ಕೆ ವಾರಾಂತ್ಯಗಳಲ್ಲಿ ಉಚಿತ ಪ್ರವೇಶ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಜಾದಿನಗಳಲ್ಲಿ ನಾಗರಿಕರು ವಿಧಾನಸೌಧ ಆವರಣದೊಳಗೆ ಬರಲು ಅವಕಾಶ ನೀಡಿ. ಇದರಿಂದ ಅವರು ‘ಜನರ ಅರಮನೆ’ಯ ಭವ್ಯತೆಯನ್ನು ಕಣ್ತುಂಬಿಕೊಳ್ಳಬಹುದು ಮತ್ತು ಆನಂದಿಸಬಹುದು. ಇದು ನಮ್ಮ ಅರಮನೆ ಮತ್ತು ನಮ್ಮನ್ನು ಹೊರಗೆ ಇಡಲಾಗುತ್ತಿದೆ. ಮೊದಲು ನಮಗೆ ಒಳಗೆ ಹೋಗಲು, ಮೆಟ್ಟಿಲುಗಳ ಮೇಲೆ ಕುಳಿತುಕೊಳ್ಳಲು ಅವಕಾಶವಿತ್ತು. ಈಗ ನಮಗೆ ಅನುಮತಿ ಇಲ್ಲ. ದಯಮಾಡಿ ಸಾರ್ವಜನಿಕರಿಗೆ ಒಳ ಪ್ರವೇಶಿಸಲು, ಮಕ್ಕಳು ಒಳಗೆ ಆಟವಾಡಲು, ಆವರಣದಲ್ಲಿ ನಡೆಯಲು ಅವಕಾಶ ಕಲ್ಪಿಸಿ ಎಂದು ಮೋಹನ್​​ದಾಸ್ ಪೈ ಎಕ್ಸ್​ ಸಂದೇಶದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Image
ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
Image
ಆಂಧ್ರದ ವೈಎಸ್​ಆರ್​ಪಿ ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಬೆಂಗಳೂರಿನ
Image
ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ

ಮೋಹನ್​​ದಾಸ್ ಪೈ ಎಕ್ಸ್​ ಸಂದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಕಚೇರಿ ಮತ್ತು ಇತರರನ್ನು ಪೈ ಟ್ಯಾಗ್ ಮಾಡಿದ್ದಾರೆ.

ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಸಂದೀಪ್ ಹೆಗ್ಡೆ ಎಂಬವರು, ವಾರಾಂತ್ಗಳಲ್ಲಿ ಶುಲ್ಕ ಪಾವತಿ ಮಾಡಿ ಗೈಡ್​​​ಗಳ ಜತೆ ವಿಧಾನಸೌಧಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಮರುಪ್ರಶ್ನೆ ಹಾಕಿದ ಪೈ, ‘ಅದಕ್ಕೆ ಶುಲ್ಕ ಯಾಕೆ? ನಾಗರಿಕರ ತೆರಿಗೆ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಲಾಗಿದೆ’ ಎಂದಿದ್ದಾರೆ.

ಪ್ರವಾಸ ಯೋಜನೆಯಾಗಿ ವಾರಾಂತ್ಯಗಳಲ್ಲಿ ಸೀಮಿತ ಸಂಖ್ಯೆಯ ನಾಗರಿಕರ ವಿಧಾನಸೌಧ ಪ್ರವೇಶಕ್ಕೆ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಸ್ಪೀಕರ್ ಕಚೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಮತ್ತು ವಿಧಾನಸೌಧ ಭದ್ರತಾ ವಿಭಾಗದ ಸಮನ್ವಯದೊಂದಿಗೆ ಈ ಉಪಕ್ರಮ ಹಮ್ಮಿಕೊಳ್ಳಲಾಗಿದೆ. ಭಾನುವಾರ ಮತ್ತು ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ವಿಧಾನಸೌಧ ಪ್ರವಾಸಕ್ಕೆ ಅವಕಾಶ ಇದೆ.

ಇದನ್ನೂ ಓದಿ: ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ವಿಧಾನಸೌಧ ಪ್ರವಾಸಕ್ಕೆ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಅವಕಾಶ ಇದ್ದು, ಪ್ರವಾಸಿಗರನ್ನು ಗೇಟ್ 3 ರ ಮೂಲಕ ಒಳಗೆ ಕರೆದೊಯ್ಯಲಾಗುತ್ತದೆ. ಪ್ರವೇಶ ದರವು ಪ್ರತಿ ವ್ಯಕ್ತಿಗೆ 50 ರೂ. ಆಗಿದ್ದು, 16 ವರ್ಷದೊಳಗಿನ ಮಕ್ಕಳು ಕಡ್ಡಾಯ ನೋಂದಣಿಯೊಂದಿಗೆ ಉಚಿತವಾಗಿ ಭಾಗವಹಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಹಿರಿತೆರೆ-ಕಿರುತೆರೆನ ಹೇಗೆ ಬ್ಯಾಲೆನ್ಸ್ ಮಾಡ್ತಾರೆ ನಿಶಾ ರವಿಕೃಷ್ಣನ್?
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
ಮೋದಿ ನೇತೃತ್ವದ ಭಾರತದಲ್ಲಿ ಎಲ್ಲರೂ ಸಮಾನರು, ಸುರಕ್ಷಿತರು: ಕೇಂದ್ರ ಸಚಿವೆ
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
VIDEO: 5 ವರ್ಷದ ಪೋರನ ಸ್ಫೋಟಕ ಬ್ಯಾಟಿಂಗ್ ನೀವು ನೋಡಲೇಬೇಕು
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ನಟಿ ಪ್ರೇಮಾ ಈಗಲೂ ಹೇಗೆ ಡ್ಯಾನ್ಸ್ ಮಾಡ್ತಾರೆ ನೋಡಿ; ಇಲ್ಲಿದೆ ವಿಡಿಯೋ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ