AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ವರ್ಗಾವಣೆ

ರಾಘವೇಂದ್ರ ಸುಹಾಸ್ ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಹೊಂದಿದ್ದಾರೆ. 4.9 ಕೆಜಿ ಚಿನ್ನ ಸಾಗಾಟ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ವರ್ಗಾವಣೆ
ಐಜಿಪಿ ರಾಘವೇಂದ್ರ ಸುಹಾಸ್
TV9 Web
| Edited By: |

Updated on:Aug 21, 2021 | 10:06 AM

Share

ಬೆಂಗಳೂರು: ಟಿವಿ9 ಬಯಲಿಗೆಳೆದಿದ್ದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಎತ್ತಂಗಡಿ ಮಾಡಲಾಗಿದೆ. ಟಿವಿ9 ನಿನ್ನೆ ಸಂಜೆ ಖಾಕಿ ಕಳ್ಳಾಟ ವರದಿ ಪ್ರಸಾರ ಮಾಡಿತ್ತು. ಬಳಿಕ, ನಿನ್ನೆ ರಾತ್ರಿ ಮೂವರು ಅಧಿಕಾರಿಗಳ ವರ್ಗಾವಣೆಯಾಗಿತ್ತು. ಗೋಕಾಕ್ ಉಪ ವಿಭಾಗ ಡಿವೈಎಸ್​ಪಿ ಜಾವೀದ್ ಇನಾಂದಾರ್, ಪಿಐ ಗುರುರಾಜ್ ಮತ್ತು ಪಿಎಸ್​ಐ ರಮೇಶ್ ಪಾಟೀಲ್​ರನ್ನು ನಿನ್ನೆ ಎತ್ತಗಂಡಿ ಮಾಡಲಾಗಿತ್ತು. ಈಗ ಐಜಿಪಿ ರಾಘವೇಂದ್ರ ಸುಹಾಸ್ ಎತ್ತಂಗಡಿಗೆ ಆದೇಶ ಮಾಡಲಾಗಿದೆ.

ರಾಘವೇಂದ್ರ ಸುಹಾಸ್ ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಹೊಂದಿದ್ದಾರೆ. 4.9 ಕೆಜಿ ಚಿನ್ನ ಸಾಗಾಟ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.

ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಬೆಂಗಳೂರು ಕೇಂದ್ರ ಕಚೇರಿಯಿಂದ ಫಾರೆಸ್ಟ್ ಸೆಲ್ ಐಜಿಪಿಯಾಗಿ ಕೆ.ವಿ.ಶರತ್ ಚಂದ್ರ, ಬಳ್ಳಾರಿ ವಲಯದಿಂದ ಕಾರಾಗೃಹ ಐಜಿಪಿಯಾಗಿ ಎಂ.ನಂಜುಂಡಸ್ವಾಮಿ, ಈಶಾನ್ಯ ವಲಯದಿಂದ ಬಳ್ಳಾರಿ ವಲಯ ಐಜಿಪಿಯಾಗಿ ಮನೀಶ್ ಕರ್ಬಿಕರ್, ಕಲಬುರಗಿ ಕಮಿಷನರ್​ನಿಂದ ಉತ್ತರ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್, ಉತ್ತರ ವಲಯದಿಂದ ಆಂತರಿಕ ಭದ್ರತಾ ದಳ ಐಜಿಪಿಯಾಗಿ ರಾಘವೇಂದ್ರ ಸುಹಾಸ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಚಿನ್ನ ಕಳ್ಳ ಸಾಗಣಿಕೆಗೆ ಸಹಾಯ ಮಾಡಿದ ಮೂವರು ಪೊಲೀಸ್ ಅಧಿಕಾರಿಗಳನ್ನು ಬೇರೆಕಡೆಗೆ ವರ್ಗಾಯಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಕಳ್ಳರನ್ನ ಹಿಡಿಯಬೇಕಾದವರೇ ಕಳ್ಳಾಟಕ್ಕೆ ಇಳಿದಿದ್ದು, ರಕ್ಷಣೆ ಕೊಡಬೇಕಾದವರೇ ಇಲ್ಲಿ ಭಕ್ಷಕರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಚಿನ್ನವನ್ನು ಹೊತ್ತೋಯ್ಯುತ್ತಿದ್ದ ಕಳ್ಳರನ್ನು ಜೈಲಿಗೆ ಅಟ್ಟಬೇಕಾದ ಅಧಿಕಾರಿಗಳು ಕಳ್ಳರ ಜತೆಗೆ ಸೇರಿ ಕಾನೂನುಬಾಹಿರ ಚುವಟಿಕೆಯಲ್ಲಿ ತೊಡಗಿದ್ದರು. ಸದ್ಯ ಈ ವಿಷಯ ಬೆಳಕಿಗೆ ಬಂದಿದ್ದು, ಅಧಿಕಾರಿಗಳ ಕಳ್ಳಾಟ ಬಯಲಾಗಿತ್ತು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿರುವ ಪೊಲೀಸ್ ಠಾಣೆಯಲ್ಲಿ ನಡೆದ ಅದೊಂದು ಘಟನೆಗೆ ಇದೀಗ ಮೂವರ ತಲೆ ದಂಡವಾಗಿತ್ತು. ಗೋಕಾಕ್ ಡಿವೈಎಸ್‌ಪಿ ಜಾವೇದ್ ಇನಾಮದಾರ್, ಸಿಪಿಐ ಕಲ್ಯಾಣ್ ಶೆಟ್ಟಿ, ಪಿಎಸ್ಐ ರಮೇಶ್ ಪಾಟೀಲ್‌ಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಮೂವರನ್ನೂ ಮೂರು ದಿಕ್ಕಿಗೆ ಕಳುಹಿಸಿಲಾಗಿತ್ತು.

ಇದನ್ನೂ ಓದಿ: ಕಳ್ಳರಿಗೆ ಸಹಾಯ ಮಾಡಲು ಹೋಗಿ ಕಳ್ಳತನಕ್ಕೆ ಇಳಿದ ಪೊಲೀಸ್ ಅಧಿಕಾರಿಗಳು; ಎಸ್‌ಪಿ ತನಿಖೆಯಲ್ಲಿ ಬಯಲಾಯ್ತು ಸತ್ಯ

Published On - 9:08 pm, Fri, 21 May 21

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್