Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ವರ್ಗಾವಣೆ

ರಾಘವೇಂದ್ರ ಸುಹಾಸ್ ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಹೊಂದಿದ್ದಾರೆ. 4.9 ಕೆಜಿ ಚಿನ್ನ ಸಾಗಾಟ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ವರ್ಗಾವಣೆ
ಐಜಿಪಿ ರಾಘವೇಂದ್ರ ಸುಹಾಸ್
Follow us
TV9 Web
| Updated By: ganapathi bhat

Updated on:Aug 21, 2021 | 10:06 AM

ಬೆಂಗಳೂರು: ಟಿವಿ9 ಬಯಲಿಗೆಳೆದಿದ್ದ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಬೆನ್ನಲ್ಲೇ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಎತ್ತಂಗಡಿ ಮಾಡಲಾಗಿದೆ. ಟಿವಿ9 ನಿನ್ನೆ ಸಂಜೆ ಖಾಕಿ ಕಳ್ಳಾಟ ವರದಿ ಪ್ರಸಾರ ಮಾಡಿತ್ತು. ಬಳಿಕ, ನಿನ್ನೆ ರಾತ್ರಿ ಮೂವರು ಅಧಿಕಾರಿಗಳ ವರ್ಗಾವಣೆಯಾಗಿತ್ತು. ಗೋಕಾಕ್ ಉಪ ವಿಭಾಗ ಡಿವೈಎಸ್​ಪಿ ಜಾವೀದ್ ಇನಾಂದಾರ್, ಪಿಐ ಗುರುರಾಜ್ ಮತ್ತು ಪಿಎಸ್​ಐ ರಮೇಶ್ ಪಾಟೀಲ್​ರನ್ನು ನಿನ್ನೆ ಎತ್ತಗಂಡಿ ಮಾಡಲಾಗಿತ್ತು. ಈಗ ಐಜಿಪಿ ರಾಘವೇಂದ್ರ ಸುಹಾಸ್ ಎತ್ತಂಗಡಿಗೆ ಆದೇಶ ಮಾಡಲಾಗಿದೆ.

ರಾಘವೇಂದ್ರ ಸುಹಾಸ್ ಇದೀಗ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವರ್ಗಾವಣೆ ಹೊಂದಿದ್ದಾರೆ. 4.9 ಕೆಜಿ ಚಿನ್ನ ಸಾಗಾಟ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.

ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೊಳಿಸಿ ಆದೇಶ ಬೆಂಗಳೂರು ಕೇಂದ್ರ ಕಚೇರಿಯಿಂದ ಫಾರೆಸ್ಟ್ ಸೆಲ್ ಐಜಿಪಿಯಾಗಿ ಕೆ.ವಿ.ಶರತ್ ಚಂದ್ರ, ಬಳ್ಳಾರಿ ವಲಯದಿಂದ ಕಾರಾಗೃಹ ಐಜಿಪಿಯಾಗಿ ಎಂ.ನಂಜುಂಡಸ್ವಾಮಿ, ಈಶಾನ್ಯ ವಲಯದಿಂದ ಬಳ್ಳಾರಿ ವಲಯ ಐಜಿಪಿಯಾಗಿ ಮನೀಶ್ ಕರ್ಬಿಕರ್, ಕಲಬುರಗಿ ಕಮಿಷನರ್​ನಿಂದ ಉತ್ತರ ವಲಯ ಐಜಿಪಿಯಾಗಿ ಎನ್. ಸತೀಶ್ ಕುಮಾರ್, ಉತ್ತರ ವಲಯದಿಂದ ಆಂತರಿಕ ಭದ್ರತಾ ದಳ ಐಜಿಪಿಯಾಗಿ ರಾಘವೇಂದ್ರ ಸುಹಾಸ್ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಚಿನ್ನ ಕಳ್ಳ ಸಾಗಣಿಕೆಗೆ ಸಹಾಯ ಮಾಡಿದ ಮೂವರು ಪೊಲೀಸ್ ಅಧಿಕಾರಿಗಳನ್ನು ಬೇರೆಕಡೆಗೆ ವರ್ಗಾಯಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿತ್ತು. ಕಳ್ಳರನ್ನ ಹಿಡಿಯಬೇಕಾದವರೇ ಕಳ್ಳಾಟಕ್ಕೆ ಇಳಿದಿದ್ದು, ರಕ್ಷಣೆ ಕೊಡಬೇಕಾದವರೇ ಇಲ್ಲಿ ಭಕ್ಷಕರಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಚಿನ್ನವನ್ನು ಹೊತ್ತೋಯ್ಯುತ್ತಿದ್ದ ಕಳ್ಳರನ್ನು ಜೈಲಿಗೆ ಅಟ್ಟಬೇಕಾದ ಅಧಿಕಾರಿಗಳು ಕಳ್ಳರ ಜತೆಗೆ ಸೇರಿ ಕಾನೂನುಬಾಹಿರ ಚುವಟಿಕೆಯಲ್ಲಿ ತೊಡಗಿದ್ದರು. ಸದ್ಯ ಈ ವಿಷಯ ಬೆಳಕಿಗೆ ಬಂದಿದ್ದು, ಅಧಿಕಾರಿಗಳ ಕಳ್ಳಾಟ ಬಯಲಾಗಿತ್ತು.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿರುವ ಪೊಲೀಸ್ ಠಾಣೆಯಲ್ಲಿ ನಡೆದ ಅದೊಂದು ಘಟನೆಗೆ ಇದೀಗ ಮೂವರ ತಲೆ ದಂಡವಾಗಿತ್ತು. ಗೋಕಾಕ್ ಡಿವೈಎಸ್‌ಪಿ ಜಾವೇದ್ ಇನಾಮದಾರ್, ಸಿಪಿಐ ಕಲ್ಯಾಣ್ ಶೆಟ್ಟಿ, ಪಿಎಸ್ಐ ರಮೇಶ್ ಪಾಟೀಲ್‌ಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಮೂವರನ್ನೂ ಮೂರು ದಿಕ್ಕಿಗೆ ಕಳುಹಿಸಿಲಾಗಿತ್ತು.

ಇದನ್ನೂ ಓದಿ: ಕಳ್ಳರಿಗೆ ಸಹಾಯ ಮಾಡಲು ಹೋಗಿ ಕಳ್ಳತನಕ್ಕೆ ಇಳಿದ ಪೊಲೀಸ್ ಅಧಿಕಾರಿಗಳು; ಎಸ್‌ಪಿ ತನಿಖೆಯಲ್ಲಿ ಬಯಲಾಯ್ತು ಸತ್ಯ

Published On - 9:08 pm, Fri, 21 May 21

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು