AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್​ ಆಯ್ತು ಈಗ ರೈಲು ಬಂದ್​ಗೆ ಕರೆ ನೀಡಿದ ವಾಟಾಳ್​ ನಾಗರಾಜ್​

ಮುಂದಿನ ತಿಂಗಳು ಜನವರಿ 9ರಂದು ರೈಲ್​ ಬಂದ್​ ನಡೆಯಲಿದೆ. ಮುಂಜಾನೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ರೈಲ್ವೆ ಸಂಚಾರ ಬಂದ್​ ಮಾಡುತ್ತೇವೆ ಎಂದು ವಾಟಾಳ್​ ನಾಗರಾಜ್​ ಹೇಳಿದ್ದಾರೆ.

ಕರ್ನಾಟಕ ಬಂದ್​ ಆಯ್ತು ಈಗ ರೈಲು ಬಂದ್​ಗೆ ಕರೆ ನೀಡಿದ ವಾಟಾಳ್​ ನಾಗರಾಜ್​
ವಾಟಾಳ್​ ನಾಗರಾಜ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 09, 2020 | 8:26 PM

Share

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಜನವರಿ 9ರಂದು ರೈಲ್​ ಬಂದ್​ ನಡೆಯಲಿದೆ. ಮುಂಜಾನೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ರೈಲ್ವೆ ಸಂಚಾರವನ್ನು ತಡೆಯುತ್ತೇವೆ. ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಹಾಗೂ ರೈತರ ಸಮಗ್ರ ಬೇಡಿಕೆ ಈಡೇರಬೇಕೆಂದು ಕೋರಿ ಬಂದ್​ ನಡೆಯಲಿದೆ ಎಂದು ವಾಟಾಳ್​ ನಾಗರಾಜ್ ಮಾಧ್ಯಮದವರಿಗೆ ತಿಳಿಸಿದರು.

ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್​ 5ರಂದು ಕರ್ನಾಟಕ ಬಂದ್​ಗೆ ಕರೆ ನೀಡಿದ್ದವು. ಇದರ ಮುಂದಾಳತ್ವ ವಹಿಸಿದ್ದ ವಾಟಾಳ್​ ನಾಗರಾಜ್​ ಈಗ ಕರ್ನಾಟಕ ರೈಲ್​​ ಬಂದ್​ಗೆ ಕರೆ ನೀಡಿದ್ದಾರೆ.

ಮರಾಠ ಪ್ರಾಧಿಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಮಸೂದೆಯನ್ನು ಸರ್ಕಾರಗಳು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ನಾವು ರೈಲು ತಡೆ ನಡೆಸುತ್ತಿದ್ದೇವೆ. ಎಲ್ಲಾ ಕನ್ನಡ ಪರ ಸಂಘಟನೆಗಳು ನಮ್ಮ ಜೊತೆಗಿವೆ. ಇದಕ್ಕೆ ಕರ್ನಾಟಕದ ಜನರು ಬೆಂಬಲ ನೀಡಬೇಕು ಎಂದು ವಾಟಾಳ್​ ನಾಗರಾಜ್​ ಕೋರಿದರು.

ಡಿಸೆಂಬರ್ 5ರ ಕರ್ನಾಟಕ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದಕ್ಕೆ ಸರ್ಕಾರ ನೇರ ಕಾರಣ ಎಂದು ವಾಟಾಳ್​ ನಾಗರಾಜ್​ ಆರೋಪಿಸಿದ್ದಾರೆ. ಬಂದ್​ ವಿಫಲಗೊಳಿಸಬೇಕೆಂದು ಸರ್ಕಾರ ಪಣ ತೊಟ್ಟಿತ್ತು. ಪೊಲೀಸರು ದಬ್ಬಾಳಿಕೆ ನಡೆಸಿದ್ದರು. ಹೀಗಾಗಿ ಬಂದ್​ ವಿಫಲವಾಗಿದೆ. ಇಲ್ಲಿರುವ ತಮಿಳರು, ಮಲಯಾಳಿಗಳು, ಗುಜರಾತಿಗಳು ಬಿಜೆಪಿ ಏಜೆಂಟ್​ಗಳು ಎಂದು ಅವರು ಹೇಳಿದರು.

ಬೆಂಗಳೂರಿನ ಹಲವೆಡೆ ಕನ್ನಡ ಪರ ಹೋರಾಟಗಾರರು ಡಿಸೆಂಬರ್​ 5ರಂದು ಬಂದ್ ನಡೆಸಿದರೂ ಜನಜೀವನದಲ್ಲಿ ಅಷ್ಟೇನೂ ವ್ಯತ್ಯಾಸ ಆಗಿರಲಿಲ್ಲ. ಹಲವೆಡೆ ಅಂಗಡಿಮುಂಗಟ್ಟುಗಳು ತೆರಿದಿತ್ತು. ಬಸ್, ವಾಹನ ಸಂಚಾರವೂ ಸಹಜ ಸ್ಥಿತಿಯಲ್ಲಿತ್ತು.

ಈಚೆಗಷ್ಟೇ ಭಾರತ್​ ಬಂದ್ ನಡೆದಿದೆ. ಈಗ ನೀವು ಮತ್ತೊಮ್ಮೆ ರೈಲು ತಡೆಗೆ ಕರೆ ನೀಡಿದ್ದು ಏಕೆ ಎಂದು ಟಿವಿ9 ಪ್ರಶ್ನಿಸಿದಾಗ, ‘ಬಂದ್ ಮಾಡುವ ನಮ್ಮ ಪ್ರಯತ್ನವನ್ನು ವಿಫಲಗೊಳಿಸಲು ಸರ್ಕಾರ ಪ್ರಯತ್ನಿಸಿತು. ಮರಾಠ ಅಭಿವೃದ್ಧಿ ಪ್ರಾಧಿಕಾರ ನಿರ್ಣಯವನ್ನು ಹಿಂದೆ ತೆಗೆದುಕೊಳ್ಳುವವರೆಗೂ ನಾವು ಸುಮ್ಮನಿರುವುದಿಲ್ಲ. ಒಂದಲ್ಲ ಒಂದು ರೀತಿ ಪ್ರತಿಭಟನೆ ಮಾಡುತ್ತಲೇ ಇರುತ್ತೇವೆ. ಜ.9ರಂದು ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳ ಸದಸ್ಯರೂ ರೈಲು ಹಳಿಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಾರೆ. ಕರ್ನಾಟಕದಿಂದ ಹೊರಗೆ ಹೋಗಲು ಮತ್ತು ಒಳಗೆ ಬರಲು ಯಾವುದೇ ರೈಲಿಗೆ ಅವಕಾಶ ಕೊಡುವುದಿಲ್ಲ’ ಎಂದು ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದರು.

Karnataka Bandh | ವಾಟಾಳ್ ನಾಗರಾಜ್ ಬಂಧನದ ಬಳಿಕವೂ ಮುಂದುವರಿದ ಪ್ರತಿಭಟನೆ

Published On - 6:10 pm, Wed, 9 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ