AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ

ವಿಧಾನಪರಿಷತ್​ನ ತೆರವಾಗುವ ಸ್ಥಾನಗಳ ಪೈಕಿ ಆರು ಸ್ಥಾನಗಳಿಗೆ ಚುನಾವಣಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇಷ್ಟೇ ಅಲ್ಲದೆ, ಒಟ್ಟು 18 ಪರಿಷತ್ ಸ್ಥಾನಗಳಿಗೆ ಮುಂದಿನ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಬಹುಮತ ಗಳಿಸುವತ್ತ ಕಾಂಗ್ರೆಸ್ ದೃಷ್ಟಿ ನೆಟ್ಟಿದೆ.

ರಾಜ್ಯದಲ್ಲಿ ಚುನಾವಣೆ ಮುಗಿದರೂ ನಿಲ್ಲದು ಚುನಾವಣಾ ತಯಾರಿ! ವಿಧಾನಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ
ಪರಿಷತ್​ನಲ್ಲಿ ಬಹುಮತದತ್ತ ಕಾಂಗ್ರೆಸ್ ಚಿತ್ತ
ಗಣಪತಿ ಶರ್ಮಾ
|

Updated on: May 09, 2024 | 2:35 PM

Share

ಬೆಂಗಳೂರು, ಮೇ 9: ಲೋಕಸಭೆ ಚುನಾವಣೆಯ (Lok Sabha Elections) ಕಾವು ರಾಜ್ಯದಲ್ಲಿ ಕಡಿಮೆಯಾದರೂ ರಾಜಕೀಯದ ಜಿದ್ದಾಜಿದ್ದಿ ಸದ್ಯಕ್ಕೆ ಮುಗಿಯಲಾರದು. ಕಾರಣವೆಂದರೆ, ವಿಧಾನಪರಿಷತ್​ನ ತೆರವಾಗುವ ಸ್ಥಾನಗಳಿಗೆ (MLC Elections) ನಡೆಯಲಿರುವ ಚುನಾವಣೆ. ಎಲ್ಲವೂ ನಿರೀಕ್ಷೆಯಂತೆ ಸಾಗಿದರೆ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ (Congress) ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು, ಇದರೊಂದಿಗೆ ಸಭಾಪತಿ ಸ್ಥಾನವೂ ಪಕ್ಷದ ಪಾಲಾಗಲಿದೆ ಎಂದು ಅಂದಾಜಿಸಲಾಗಿದೆ.

ಮುಂದಿನ ಕೆಲವು ವಾರಗಳಲ್ಲಿ ಹಲವು ಮಂದಿ ಹಾಲಿ ಎಂಎಲ್‌ಸಿಗಳ ಅವಧಿ ಮುಕ್ತಾಯವಾಗಲಿದೆ. ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳು ಸೇರಿದಂತೆ 18 ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪ್ರಸ್ತುತ, ಪರಿಷತ್ತಿನ ಅಧ್ಯಕ್ಷರು ಸೇರಿದಂತೆ 75 ಸದಸ್ಯರ ಸದನದಲ್ಲಿ 70 ಎಂಎಲ್‌ಸಿಗಳಿದ್ದಾರೆ. ಈ ಪೈಕಿ, ಕೆಲವರು ಕೆಲವು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಜೂನ್‌ನಲ್ಲಿ 18 ಹುದ್ದೆಗಳು ಖಾಲಿಯಾಗಲಿವೆ. ಇವರಲ್ಲಿ 11 ಮಂದಿ ಶಾಸಕರಿಂದ ಆಯ್ಕೆಯಾಗಿದ್ದರೆ, ಆರು ಮಂದಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷವು ವಿಧಾನಸಭೆಯಲ್ಲಿ 136 ಶಾಸಕರನ್ನು ಹೊಂದಿದ್ದು, ಮೇಲುಗೈ ಹೊಂದಿದೆ. ಹೀಗಾಗಿ ಪಕ್ಷವು ಎಂಟು ಎಂಎಲ್‌ಸಿಗಳನ್ನು ಆಯ್ಕೆ ಮಾಡಬಹುದಾಗಿದೆ. ಮತ್ತೊಂದೆಡೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಾಲ್ವರನ್ನು ಆರಿಸಬಹುದಾಗಿದೆ.

ಏತನ್ಮಧ್ಯೆ, ಚುನಾವಣಾ ಆಯೋಗವು ಆರು ಸ್ಥಾನಗಳಿಗೆ ಚುನಾವಣಾ ಅಧಿಸೂಚನೆಯನ್ನು ಹೊರಡಿಸಿದೆ. ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪ್ರಸ್ತುತ, ಕಾಂಗ್ರೆಸ್ ಒಂದು ಸ್ಥಾನವನ್ನು ಹೊಂದಿದ್ದು, ಉಳಿದ ಐದು ಸ್ಥಾನಗಳನ್ನು ಬಿಜೆಪಿ ಮತ್ತು ಜೆಡಿಎಸ್ ಎಂಎಲ್​ಸಿಗಳು ಪ್ರತಿನಿಧಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ.

ಮೇಲ್ಮನೆಯಲ್ಲಿ ಕಾಂಗ್ರೆಸ್​​ಗೆ ಇಲ್ಲ ಬಹುಮತ

ಮೇಲ್ಮನೆಯಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲದ ಕಾರಣ ವಿಧಾನಸಭೆಯಲ್ಲಿ ಅಂಗೀಕರಿಸಿದ ಹಲವು ಮಸೂದೆಗಳು ಪರಿಷತ್​​ನಲ್ಲಿ ಬಾಕಿ ಆಗುತ್ತಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ನಾವು 75 ಸದಸ್ಯರಲ್ಲಿ 29 ಎಂಎಲ್‌ಸಿಗಳನ್ನು ಹೊಂದಿದ್ದೇವೆ. ಆದರೆ ನಾವು 8 ರಿಂದ 9 ಸ್ಥಾನಗಳನ್ನು ಹೆಚ್ಚು ಪಡೆದರೆ, ಬಹುಮತ ಪಡೆಯುತ್ತೇವೆ ಮತ್ತು ಮಸೂದೆಗಳನ್ನು ಅಂಗೀಕರಿಸಬಹುದು ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್​​ ಬಹುಮತ ಗಳಿಸಿದರೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೂಡ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: ಪೆನ್​ಡ್ರೈವ್ ಬಿಡುಗಡೆ ಕೇಸ್: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕಾರ್ತಿಕ್​​ ಸೇರಿ ಇತರರಿಗೆ ಬಂಧನ ಭೀತಿ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಪ್ರತಿ ಕ್ಷೇತ್ರಕ್ಕೆ ಪಕ್ಷವು ಈಗಾಗಲೇ ಎರಡು ಅಥವಾ ಮೂರು ಹೆಸರುಗಳನ್ನು ಶಿಫಾರಸು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಹೈಕಮಾಂಡ್ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿರೀಕ್ಷೆಯಲ್ಲಿ ರಾಜ್ಯ ಬಿಜೆಪಿ ನಾಯಕರಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!