AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್, ಜಿಮ್ ಬಳಿಕ ಈಗ ಸ್ವಿಮ್ಮಿಂಗ್ ಪೂಲ್ ಸರದಿ; ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ ಎಂದ ಡಾ.ಕೆ. ಗೋವಿಂದರಾಜು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್​ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಥಿಯೇಟರ್, ಜಿಮ್ ಬಳಿಕ ಈಗ ಸ್ವಿಮ್ಮಿಂಗ್ ಪೂಲ್ ಸರದಿ; ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ ಎಂದ ಡಾ.ಕೆ. ಗೋವಿಂದರಾಜು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 05, 2022 | 12:49 PM

Share

ಬೆಂಗಳೂರು: ಥಿಯೇಟರ್ ಆಯ್ತು, ಜಿಮ್ ಆಯ್ತು ಈಗ ಸ್ವಿಮ್ಮಿಂಗ್ ಪೂಲ್ ಸರದಿ. ಕೊರನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ಸಿನಿಮಾ ಹಾಲ್​ಗಳಲ್ಲಿ ಶೇ. 50ರಷ್ಟು ಸೀಟು ಭರ್ತಿ ಮಾಡುವ ಅವಕಾಶ ಮಾತ್ರ ನೀಡಲಾಗಿತ್ತು. ಜೊತೆಗೆ, ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್​ಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಸಿನಿರಂಗದ ಒತ್ತಡದಿಂದ ರಾಜ್ಯ ಸರ್ಕಾರ ಏಪ್ರಿಲ್ 7ರ ವರೆಗೆ ಥಿಯೇಟರ್ ಭರ್ತಿಗೆ ಅವಕಾಶ ನೀಡಿತು. ಇಂದು ಜಿಮ್​ಗಳಲ್ಲೂ ಶೇ. 50ರಷ್ಟು ಅವಕಾಶ ನೀಡಲಾಯಿತು. ಈ ಬೆನ್ನಲ್ಲೇ ಸ್ವಿಮ್ಮಿಂಗ್ ಪೂಲ್​ಗಳಿಗೂ ನಿಯಮ ಸಡಿಲಿಕೆ ಮಾಡುವಂತೆ ಕೂಗು ಕೇಳಿಬಂದಿದೆ.

ಕ್ರೀಡಾಪಟುಗಳ ದೃಷ್ಟಿಯಿಂದ ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ. ಹಲವು ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳಿಂದ ತಯಾರಿ ನಡೆಯುತ್ತಿದೆ. ಕ್ರೀಡಾಪಟುಗಳ ಕುರಿತು ಸರ್ಕಾರ ಮರುಚಿಂತಿಸಬೇಕು ಎಂದು ಕಾಂಗ್ರೆಸ್ ಪರಿಷತ್​ ಸದಸ್ಯ ಹಾಗೂ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಕೆ. ಗೋವಿಂದರಾಜು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್​ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸುವಂತೆ ಆದೇಶ ಈ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಜಿಲ್ಲೆಗಳಲ್ಲಿ 1 ಲಕ್ಷ ಟೆಸ್ಟ್​ ಮಾಡುವಂತೆ ಸರ್ಕಾರ ಗುರಿ ನೀಡಿತ್ತು. ಆದರೂ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್​ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸಲು ಇಲಾಖೆ ಆದೇಶ ನೀಡಿದೆ.

ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Published On - 10:50 pm, Sun, 4 April 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ