AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಿಯೇಟರ್, ಜಿಮ್ ಬಳಿಕ ಈಗ ಸ್ವಿಮ್ಮಿಂಗ್ ಪೂಲ್ ಸರದಿ; ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ ಎಂದ ಡಾ.ಕೆ. ಗೋವಿಂದರಾಜು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್​ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಥಿಯೇಟರ್, ಜಿಮ್ ಬಳಿಕ ಈಗ ಸ್ವಿಮ್ಮಿಂಗ್ ಪೂಲ್ ಸರದಿ; ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ ಎಂದ ಡಾ.ಕೆ. ಗೋವಿಂದರಾಜು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 05, 2022 | 12:49 PM

Share

ಬೆಂಗಳೂರು: ಥಿಯೇಟರ್ ಆಯ್ತು, ಜಿಮ್ ಆಯ್ತು ಈಗ ಸ್ವಿಮ್ಮಿಂಗ್ ಪೂಲ್ ಸರದಿ. ಕೊರನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ಸಿನಿಮಾ ಹಾಲ್​ಗಳಲ್ಲಿ ಶೇ. 50ರಷ್ಟು ಸೀಟು ಭರ್ತಿ ಮಾಡುವ ಅವಕಾಶ ಮಾತ್ರ ನೀಡಲಾಗಿತ್ತು. ಜೊತೆಗೆ, ಸ್ವಿಮ್ಮಿಂಗ್ ಪೂಲ್ ಹಾಗೂ ಜಿಮ್​ಗಳನ್ನು ಸಂಪೂರ್ಣ ಬಂದ್ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಸಿನಿರಂಗದ ಒತ್ತಡದಿಂದ ರಾಜ್ಯ ಸರ್ಕಾರ ಏಪ್ರಿಲ್ 7ರ ವರೆಗೆ ಥಿಯೇಟರ್ ಭರ್ತಿಗೆ ಅವಕಾಶ ನೀಡಿತು. ಇಂದು ಜಿಮ್​ಗಳಲ್ಲೂ ಶೇ. 50ರಷ್ಟು ಅವಕಾಶ ನೀಡಲಾಯಿತು. ಈ ಬೆನ್ನಲ್ಲೇ ಸ್ವಿಮ್ಮಿಂಗ್ ಪೂಲ್​ಗಳಿಗೂ ನಿಯಮ ಸಡಿಲಿಕೆ ಮಾಡುವಂತೆ ಕೂಗು ಕೇಳಿಬಂದಿದೆ.

ಕ್ರೀಡಾಪಟುಗಳ ದೃಷ್ಟಿಯಿಂದ ಸ್ವಿಮ್ಮಿಂಗ್ ಪೂಲ್ ಬಂದ್ ಬೇಡ. ಹಲವು ಕ್ರೀಡಾಕೂಟಗಳಿಗೆ ಕ್ರೀಡಾಪಟುಗಳಿಂದ ತಯಾರಿ ನಡೆಯುತ್ತಿದೆ. ಕ್ರೀಡಾಪಟುಗಳ ಕುರಿತು ಸರ್ಕಾರ ಮರುಚಿಂತಿಸಬೇಕು ಎಂದು ಕಾಂಗ್ರೆಸ್ ಪರಿಷತ್​ ಸದಸ್ಯ ಹಾಗೂ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಡಾ.ಕೆ. ಗೋವಿಂದರಾಜು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡರಿಗೆ ಸ್ವಿಮ್ಮಿಂಗ್ ಪೂಲ್ ಬಂದ್ ಆದೇಶ ಬದಲಿಸಲು ಮನವಿ ಮಾಡಿದ್ದಾರೆ. ಕ್ರೀಡಾಪಟುಗಳಿಗೆ ಸ್ವಿಮ್ಮಿಂಗ್ ಪೂಲ್​ಗೆ ಅನುಮತಿ ನೀಡಿ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.

ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸುವಂತೆ ಆದೇಶ ಈ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಜಿಲ್ಲೆಗಳಲ್ಲಿ 1 ಲಕ್ಷ ಟೆಸ್ಟ್​ ಮಾಡುವಂತೆ ಸರ್ಕಾರ ಗುರಿ ನೀಡಿತ್ತು. ಆದರೂ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್​ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ, ಜಿಲ್ಲೆಗಳಲ್ಲಿ ಆರ್​ಟಿಪಿಸಿಆರ್​ ಟೆಸ್ಟ್​ ಹೆಚ್ಚಿಸಲು ಇಲಾಖೆ ಆದೇಶ ನೀಡಿದೆ.

ಇದನ್ನೂ ಓದಿ: ಜಿಮ್ ಬಂದ್ ನಿರ್ಧಾರ ವಾಪಸ್; ಆದರೆ ಷರತ್ತುಗಳು ಅನ್ವಯ

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

Published On - 10:50 pm, Sun, 4 April 21

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು