AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ.

ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
ಶಾಂತಮೂರ್ತಿ
| Edited By: |

Updated on: Oct 19, 2024 | 7:26 PM

Share

ಬೆಂಗಳೂರು, ಅಕ್ಟೋಬರ್​ 19: ಸಿಲಿಕಾನ್ ಸಿಟಿಯಲ್ಲಿ ಒಂದೆರಡು ದಿನ ಅಬ್ಬರಿಸಿದ್ದ ಮಳೆರಾಯ (rain) ಕೊಂಚ ಗ್ಯಾಪ್ ಬಳಿಕ ಮತ್ತೆ ಎಂಟ್ರಿಕೊಡುವುದಕ್ಕೆ ಸಜ್ಜಾಗಿದ್ದಾನೆ. ನಿನ್ನೆ ಒಂದು ದಿನ ಬಿಡುವು ಕೊಟ್ಟಿದ್ದ ವರುಣ ಇವತ್ತು ಮತ್ತೆ ಪ್ರತ್ಯಕ್ಷವಾಗಿದ್ದು, ಸಿಟಿಮಂದಿ ಪರದಾಡುವಂತೆ ಮಾಡಿದರೆ, ಇತ್ತ ಇನ್ನೂ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ

ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಮಧ್ಯಾಹ್ನ 12 ಗಂಟೆಗೆ ಮೋಡ ಕವಿದ ವಾತಾವರಣದೊಂದಿಗೆ ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಸುರಿದಿದ್ದು ದಿಢೀರ್ ಬಂದ ಮಳೆಗೆ ಸಿಟಿ ಜನರು ಪರದಾಡಿದರು. ವಿಧಾನಸೌಧ, ಟೌನ್ ಹಾಲ್, ಮೆಜೆಸ್ಟಿಕ್, ಶಾಂತಿನಗರ ಸೇರಿ ಹಲವೆಡೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ರೆ, ಮಳೆರಾಯನ ಎಂಟ್ರಿಯಿಂದ ಟ್ರಾಫಿಕ್ ಜಾಮ್ ಮತ್ತಷ್ಟು ಹೆಚ್ಚಾಗಿತ್ತು.

ಇದನ್ನೂ ಓದಿ: Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು

ಇನ್ನು ಎರಡೇ ದಿನಕ್ಕೆ ಹತ್ತು ಹಲವು ಅವಾಂತರ ಸೃಷ್ಟಿಸಿದ್ದ ಮಳೆರಾಯ, ಮತ್ತೆ ಎಂಟ್ರಿಕೊಟ್ಟಿದ್ದರಿಂದ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಜನರು ಪರದಾಡಿದ ದೃಶ್ಯಗಳು ಕಂಡುಬಂತು. ಟೌನ್ ಹಾಲ್, ಮೆಜೆಸ್ಟಿಕ್ ಸುತ್ತಮುತ್ತ ಛತ್ರಿ, ರೇನ್ ಕೋಟ್ ಧರಿಸಿ ಜನರು ಓಡಾಡಿದರೆ, ಅತ್ತ ವಿಧಾನಸೌಧ ಸುತ್ತಮುತ್ತ ಮಳೆರಾಯನ ಆಗಮನ ವಿಧಾನಸೌಧದ ಸೌಂದರ್ಯವನ್ನ ಹಿಮ್ಮಡಿಗೊಳಿಸಿತ್ತು. ಇನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೀತಿದ್ದ ಇಂಡಿಯಾ-ನ್ಯೂಜಿಲ್ಯಾಂಡ್ ಟೆಸ್ಟ್ ಮ್ಯಾಚ್​​ಗೂ ಕೆಲಕಾಲ ವರುಣನಿಂದ ಅಡ್ಡಿಯಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ತಂದಿತ್ತು.

ಇನ್ನು ಸಂಜೆಯಾಗ್ತಿದ್ದಂತೆ ರಾಜಧಾನಿಯಲ್ಲಿ ಮತ್ತೊಂದು ಸುತ್ತಿನ ದರ್ಶನ ನೀಡಿದ ವರುಣ, ಸಿಟಿ ಜನರಿಗೆ ನಾನಿನ್ನು ಸೈಲೆಂಟ್ ಆಗಿಲ್ಲ ಅನ್ನೋ ಸಂದೇಶ ಕೊಟ್ಟಿದ್ದ. ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜಧಾನಿಯಲ್ಲೂ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆ ಎಫೆಕ್ಟ್: ಬೆಂಗಳೂರಿನ ಜನತೆಗೆ ರೋಗ ಭೀತಿ, ಎಚ್ಚರಿಕೆ ನೀಡಿದ ವೈದ್ಯರು!

ರಾಜಧಾನಿಯ ಜನರ ನಿದ್ದೆಗೆಡಿಸಿದ್ದ ಹಿಂಗಾರು ಮಳೆಯ ಕಾಟ ಇನ್ನೂ ಎರಡು ದಿನ ಇರಲಿದ್ದು, ರಾಜಧಾನಿ ಸೇರಿ ಹಲವೆಡೆ ವರುಣನ ಆಟ ಮುಂದುವರಿಯಲಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ರೌದ್ರಾವತಾರ ತೋರಿಸಿದ್ದ ಮಳೆರಾಯ, ಇದೀಗ ಮತ್ತ್ಯಾವ ಅವಾಂತರ ಸೃಷ್ಟಿಸುತ್ತಾನೆ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ