ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ

ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸಾಧ್ಯತೆ ಇದೆ.

ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
ಬೆಂಗಳೂರಿಗೆ ಮತ್ತೆ ಮಳೆ: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 19, 2024 | 7:26 PM

ಬೆಂಗಳೂರು, ಅಕ್ಟೋಬರ್​ 19: ಸಿಲಿಕಾನ್ ಸಿಟಿಯಲ್ಲಿ ಒಂದೆರಡು ದಿನ ಅಬ್ಬರಿಸಿದ್ದ ಮಳೆರಾಯ (rain) ಕೊಂಚ ಗ್ಯಾಪ್ ಬಳಿಕ ಮತ್ತೆ ಎಂಟ್ರಿಕೊಡುವುದಕ್ಕೆ ಸಜ್ಜಾಗಿದ್ದಾನೆ. ನಿನ್ನೆ ಒಂದು ದಿನ ಬಿಡುವು ಕೊಟ್ಟಿದ್ದ ವರುಣ ಇವತ್ತು ಮತ್ತೆ ಪ್ರತ್ಯಕ್ಷವಾಗಿದ್ದು, ಸಿಟಿಮಂದಿ ಪರದಾಡುವಂತೆ ಮಾಡಿದರೆ, ಇತ್ತ ಇನ್ನೂ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ

ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಮಧ್ಯಾಹ್ನ 12 ಗಂಟೆಗೆ ಮೋಡ ಕವಿದ ವಾತಾವರಣದೊಂದಿಗೆ ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಸುರಿದಿದ್ದು ದಿಢೀರ್ ಬಂದ ಮಳೆಗೆ ಸಿಟಿ ಜನರು ಪರದಾಡಿದರು. ವಿಧಾನಸೌಧ, ಟೌನ್ ಹಾಲ್, ಮೆಜೆಸ್ಟಿಕ್, ಶಾಂತಿನಗರ ಸೇರಿ ಹಲವೆಡೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ರೆ, ಮಳೆರಾಯನ ಎಂಟ್ರಿಯಿಂದ ಟ್ರಾಫಿಕ್ ಜಾಮ್ ಮತ್ತಷ್ಟು ಹೆಚ್ಚಾಗಿತ್ತು.

ಇದನ್ನೂ ಓದಿ: Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು

ಇನ್ನು ಎರಡೇ ದಿನಕ್ಕೆ ಹತ್ತು ಹಲವು ಅವಾಂತರ ಸೃಷ್ಟಿಸಿದ್ದ ಮಳೆರಾಯ, ಮತ್ತೆ ಎಂಟ್ರಿಕೊಟ್ಟಿದ್ದರಿಂದ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಜನರು ಪರದಾಡಿದ ದೃಶ್ಯಗಳು ಕಂಡುಬಂತು. ಟೌನ್ ಹಾಲ್, ಮೆಜೆಸ್ಟಿಕ್ ಸುತ್ತಮುತ್ತ ಛತ್ರಿ, ರೇನ್ ಕೋಟ್ ಧರಿಸಿ ಜನರು ಓಡಾಡಿದರೆ, ಅತ್ತ ವಿಧಾನಸೌಧ ಸುತ್ತಮುತ್ತ ಮಳೆರಾಯನ ಆಗಮನ ವಿಧಾನಸೌಧದ ಸೌಂದರ್ಯವನ್ನ ಹಿಮ್ಮಡಿಗೊಳಿಸಿತ್ತು. ಇನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೀತಿದ್ದ ಇಂಡಿಯಾ-ನ್ಯೂಜಿಲ್ಯಾಂಡ್ ಟೆಸ್ಟ್ ಮ್ಯಾಚ್​​ಗೂ ಕೆಲಕಾಲ ವರುಣನಿಂದ ಅಡ್ಡಿಯಾಗಿದ್ದು ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ ತಂದಿತ್ತು.

ಇನ್ನು ಸಂಜೆಯಾಗ್ತಿದ್ದಂತೆ ರಾಜಧಾನಿಯಲ್ಲಿ ಮತ್ತೊಂದು ಸುತ್ತಿನ ದರ್ಶನ ನೀಡಿದ ವರುಣ, ಸಿಟಿ ಜನರಿಗೆ ನಾನಿನ್ನು ಸೈಲೆಂಟ್ ಆಗಿಲ್ಲ ಅನ್ನೋ ಸಂದೇಶ ಕೊಟ್ಟಿದ್ದ. ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜಧಾನಿಯಲ್ಲೂ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆ ಎಫೆಕ್ಟ್: ಬೆಂಗಳೂರಿನ ಜನತೆಗೆ ರೋಗ ಭೀತಿ, ಎಚ್ಚರಿಕೆ ನೀಡಿದ ವೈದ್ಯರು!

ರಾಜಧಾನಿಯ ಜನರ ನಿದ್ದೆಗೆಡಿಸಿದ್ದ ಹಿಂಗಾರು ಮಳೆಯ ಕಾಟ ಇನ್ನೂ ಎರಡು ದಿನ ಇರಲಿದ್ದು, ರಾಜಧಾನಿ ಸೇರಿ ಹಲವೆಡೆ ವರುಣನ ಆಟ ಮುಂದುವರಿಯಲಿದೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ರೌದ್ರಾವತಾರ ತೋರಿಸಿದ್ದ ಮಳೆರಾಯ, ಇದೀಗ ಮತ್ತ್ಯಾವ ಅವಾಂತರ ಸೃಷ್ಟಿಸುತ್ತಾನೆ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಯಾರೇ ಗಣತಿ ಮಾಡಿಸಿದರೂ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗಬೇಕು: ಶಾಸಕ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಪಂತ್ ಪವರ್​ಗೆ ಚಿನ್ನಸ್ವಾಮಿ ಮೇಲ್ಛಾವಣಿಗೆ ಬಿದ್ದ ಚೆಂಡು; ವಿಡಿಯೋ
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಶಿವಕುಮಾರ್ ಪ್ರಕಾರ ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ!
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮಳೆಯಾಗುವಾಗ ಹೆಬ್ಬಾಳ ರಸ್ತೆ ಅತಿಹೆಚ್ಚು ಪ್ರಭಾವಕ್ಕೊಳಾಗಾಗಲು ಹಲವು ಕಾರಣಗಳು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ತಪ್ಪು ನಡೆಯಿತೇ? ಕಟಕಟೆಯಲ್ಲಿ ಬಿಗ್​ಬಾಸ್: ವಿಚಾರಣೆ ನಡೆಸಲಿರುವ ಸುದೀಪ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್