AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ : 186.16 ಕ್ವಿಂಟಲ್ ಅನಧಿಕೃತ ಬಿತ್ತನೆ ಬೀಜ ವಶ

ಶ್ರೀರಾಮ ಹೈಬ್ರಿಡ್ ಸೀಡ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅನಧಿಕೃತವಾಗಿ ದಾಸ್ತಾನು ಮಾಡಿದ ಸುಮಾರು 41.60 ಕ್ರೀಂಟಲ್ ನಷ್ಟು ಉಗಿ ಸೀಡ್ಸ್ ಸಂಸ್ಥೆಯ ಹೈಬ್ರಿಡ್ ಮೆಕ್ಕೆಜೋಳ ತಳಿಯ ಬೀಜಗಳ ದಾಸ್ತಾನನ್ನು ವಶಪಡಿಸಿಕೊಳ್ಳಲಾಯಿತು.

ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ : 186.16 ಕ್ವಿಂಟಲ್ ಅನಧಿಕೃತ ಬಿತ್ತನೆ ಬೀಜ ವಶ
ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ
Follow us
preethi shettigar
|

Updated on: May 31, 2021 | 7:47 AM

ಹಾವೇರಿ : ಕೃಷಿ ಇಲಾಖೆ ವಿಚಕ್ಷಣ ದಳ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ವಿವಿಧ ಬಿತ್ತನೆ ಬೀಜ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು‌ 186.16 ಕ್ವಿಂಟಲ್ ಮೆಕ್ಕೆಜೋಳದ ಬಿತ್ತನೆ ಬೀಜವನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಕೃಷಿ ಇಲಾಖೆಯ ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕ ಡಾ.ಅನು ಅವರ ಮುಂದಾಳತ್ವದಲ್ಲಿ ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳು, ರಾಣೇಬೆನ್ನೂರಿನ ವಿವಿಧ ಬೀಜ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ದಾಖಲಾತಿ ಮತ್ತು ಬೀಜ ದಾಸ್ತಾನನ್ನು ಪರಿಶೀಲಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಚಕ್ಷಣ ದಳದ ಬೆಂಗಳೂರು ಮತ್ತು ಕೃಷಿ ಇಲಾಖೆಯ ತಂಡವು ತಾಲೂಕಿನ ವಿವಿಧ ಬೀಜ ಮಾರಾಟ ಮಳಿಗೆಗಳಿಗೆ ಬೇಟಿ ನೀಡಿ ಮಾರಾಟದ ವಹಿವಾಟಿನ ಕುರಿತಾದ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿತು. ಅಲ್ಲದೇ ಅನಧಿಕೃತ ಮಾರಾಟ ಹಾಗೂ ದಾಸ್ತಾನು ಕಂಡು ಬಂದ ಮಾರಾಟ ಮಳಿಗೆಗಳಿಗೆ ಮಾರಾಟ ತಡೆ ನೋಟಿಸ್ ಅನ್ನು ಜಾರಿ ಮಾಡಲಾಯಿತು. ಶ್ರೀರಾಮ ಹೈಬ್ರಿಡ್ ಸೀಡ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅನಧಿಕೃತವಾಗಿ ದಾಸ್ತಾನು ಮಾಡಿದ ಸುಮಾರು 41.60 ಕ್ರೀಂಟಲ್ ನಷ್ಟು ಉಗಿ ಸೀಡ್ಸ್ ಸಂಸ್ಥೆಯ ಹೈಬ್ರಿಡ್ ಮೆಕ್ಕೆಜೋಳ ತಳಿಯ ಬೀಜಗಳ ದಾಸ್ತಾನನ್ನು ವಶಪಡಿಸಿಕೊಳ್ಳಲಾಯಿತು.

ರಾಣೇಬೆನ್ನೂರಿನ ನಿಸರ್ಗ ಸೀಡ್ಸ್‌ಗೆ ಸೇರಿದ ಮತ್ತೊಂದು ಅನಧಿಕೃತ ಗೋದಾಮಿನಲ್ಲಿ 113 ಕ್ವಿಂಟಲ್​ನಷ್ಟು ಶಿವಂ ಸೀಡ್ಸ್ ಸಂಸ್ಥೆಯ ಮೆಕ್ಕೆಜೋಳ ತಳಿಯ ಬೀಜ ದಾಸ್ತಾನಿನ ಮಹಜರು ವಶಪಡಿಸಿಕೊಳ್ಳಲಾಯಿತು. ತಾಲೂಕಿನ ವ್ಯಾಪ್ತಿಯ ಬೀಜ ಸಂಸ್ಕರಣಾ ಘಟಕಗಳು ಹಾಗೂ ದಾಸ್ತಾನು ಮಳಿಗೆಗಳಿಗೆ ಭೇಟಿ ನೀಡಿ ದಾಸ್ತಾನು ಹಾಗೂ ದಾಖಲಾತಿಗಳನ್ನು ಪರಿಶೀಲಿಸಲಾಯಿತು. ಕ್ವಾಲೀಟಿ ಬೀಜ ಸಂಸ್ಕರಣಾ ಘಟಕದಲ್ಲಿ ಅನಧೀಕೃತವಾಗಿ ದಾಸ್ತಾನು ಮಾಡಿದ 32 ಕ್ವಿಂಟಾಲ್ ಸಿ.ಪಿ. ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದ್ದು, ಮಾರಾಟಕ್ಕೆ ತಡೆಯಾಜ್ಞೆ ನೀಡಲಾಯಿತು ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.

ಇದನ್ನೂ ಓದಿ:

ನೂರಾರು ತಳಿಯ ಬಿತ್ತನೆ ಬೀಜಗಳ ಸಂಗ್ರಹಣೆ; ಕೋಲಾರದ ಮಹಿಳೆ ಮನೆಯಲ್ಲಿ ಇದೆ ಪುರಾತನ ಕಾಲದ ಬಿತ್ತನೆ ಬೀಜಗಳು

ಅಚ್ಚರಿಗೆ ಕಾರಣವಾದ ಕಲಬುರಗಿ ಜೋಳ ಬೆಳೆ: ಜೋಳದ ಬೀಜಕ್ಕೆ ಬಂತು ಬಲು ಡಿಮ್ಯಾಂಡ್

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ