AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಚಿವರು ನಾಪತ್ತೆ; ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ: ಲಾಕ್‌ಡೌನ್ ಸಂಕಷ್ಟದಲ್ಲಿರುವ ರೈತರ ಕೂಗು

Agriculture minister missing: ಕೃಷಿ ಸಚಿವರು ನಾಪತ್ತೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘೋಷಣೆ ಮಾಡಿದೆ. ಲಾಕ್‌ಡೌನ್ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ಆದರೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ತೆನೇ ಇಲ್ಲಾ. ದಯಮಾಡಿ ಹುಡುಕಿಕೊಟ್ಟು, ರೈತರಿಂದ ಸೂಕ್ತ ಬಹುಮಾನ ಪಡೆಯಿರಿ ಎಂದಿದ್ದಾರೆ.

ಕೃಷಿ ಸಚಿವರು ನಾಪತ್ತೆ;  ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ: ಲಾಕ್‌ಡೌನ್ ಸಂಕಷ್ಟದಲ್ಲಿರುವ ರೈತರ ಕೂಗು
ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ತೆನೇ ಇಲ್ಲಾ: ಮೈಸೂರಿನಲ್ಲಿ ರೈತ ಸಂಘದ ಕೂಗು
TV9 Web
| Edited By: |

Updated on:Jun 07, 2021 | 3:25 PM

Share

ಮೈಸೂರು: ಕೃಷಿ ಸಚಿವರು ನಾಪತ್ತೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘೋಷಣೆ ಮಾಡಿದೆ. ಲಾಕ್‌ಡೌನ್ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ಕೃಷಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಎಲ್ಲಾ ಕಡೆ ಬಂದು ಹೋದರು. ಆದರೆ ಈಗ ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ತೆನೇ ಇಲ್ಲಾ. ದಯಮಾಡಿ ಹುಡುಕಿಕೊಟ್ಟು, ರೈತರಿಂದ ಸೂಕ್ತ ಬಹುಮಾನ ಪಡೆಯಿರಿ ಎಂದು ಮೈಸೂರಿನಲ್ಲಿ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಸರ್ಕಾರದಿಂದ ಎಲ್ಲಾ ರೀತಿಯಾದ ಪ್ಯಾಕೇಜ್ ಸಿಕ್ತಿದೆ. ಆದರೆ ರೈತರಿಗೆ ಯಾವುದೇ ಅನುಕೂಲವಿಲ್ಲ. ರಾಜ್ಯದ ಉತ್ತರ ಭಾಗದಲ್ಲಿ ಈಗ ಮುಂಗಾರು ಶುರುವಾಗಿದೆ. ನಮಗೆ ಏಪ್ರಿಲ್ ಕೊನೆಯಲ್ಲಿ ಮುಂಗಾರು ಆಗುತ್ತೆ. ಮೈಸೂರು ಜಿಲ್ಲೆಯಲ್ಲಿ 2.27 ಲಕ್ಷ ಎಕರೆಯಷ್ಟು ಹತ್ತಿ ಬೆಳೆಯುತ್ತಿದ್ದೆವು. ಮುಸುಕಿನ ಜೋಳ ಬೆಳೆಯುತಿದ್ದೆವು. ಇದೆಲ್ಲವೂ ಕಡಿಮೆಯಾಗಿದೆ. ನಮಗೆ ಬಿತ್ತನೆ ಬೀಜ, ಗೊಬ್ಬರದ, ಕೀಟನಾಶಕಗಳ ಕೊರತೆ ಹೆಚ್ಚಾಗಿದೆ ಎಂದು ಕೃಷಿ ಸಚಿವರ ಗಮನ ಸೆಳೆಯಲು ಯತ್ನಿಸಿದರು.

ರಾಜ್ಯದ 12 ಜಿಲ್ಲೆಯಲ್ಲಿ ಲಕ್ಷಾಂತರ ಎಕೆರೆಯಲ್ಲಿ ಮುಸುಕಿನ ಜೋಳ ಬೆಳೆಯುತ್ತವೆ. ಆದರೆ ಈಗ ಬಿತ್ತನೆ ಬೀಜದ ಕೊರತೆಯಾಗಿದೆ. ಕಳಪೆ ಬಿತ್ತನೆ ಬೀಜದಿಂದ ಬೆಳೆ ಸರಿಯಾಗಿ ಬಂದಿಲ್ಲ. ಲಾಕ್‌ಡೌನ್ ಕಾರಣದಿಂದ ಬಿತ್ತನೆ ಬೀಜ, ಗೊಬ್ಬರ, ಕೀಟನಾಶಕಗಳು ಬಂದಿಲ್ಲ ಅಂತಾರೆ. ಸರ್ಕಾರ ರೈತರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಈಗಾಗಲೇ ರಸಗೊಬ್ಬರದ ಬೆಲೆ ಹೆಚ್ಚಾಗಿದೆ. ಕೆಲವು ಭಾಗದಲ್ಲಿ ಹಳೆ ದಾಸ್ತಾನು ಇದ್ದರೂ ಹೊಸ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಸಮಸ್ತ ರೈತರ ಪರ ಅವರು ಅಳಲು ತೋಡಿಕೊಂಡರು.

(Agriculture minister bc patil is missing says mysuru farmers union chief b nagendra)

8 ಕೋಟಿ ಆಸ್ತಿ ಹೊಂದಿದ್ದು, 2 ಕೋಟಿ ಸಾಲ ಮಾಡಿದ್ದಾರಂತೆ ಬಿಸಿ ಪಾಟೀಲ್

Published On - 3:12 pm, Mon, 7 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?