AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AgriGold scam: ಅಗ್ರಿಗೋಲ್ಡ್​ ಹೂಡಿಕೆದಾರರ ಹಿತರಕ್ಷಣೆಗಾಗಿ ತಕ್ಷಣ ಸುಪ್ರೀಂ ಕೋರ್ಟ್ ಮೊರೆ ಹೋಗಲು ಹೈಕೋರ್ಟ್ ಸೂಚನೆ

ಇದರಲ್ಲಿ ಕರ್ನಾಟಕದಲ್ಲಿರುವ ಅಗ್ರಿಗೋಲ್ಡ್ ಆಸ್ತಿಯೂ ಸೇರಿದೆ. ಹೀಗಾಗಿ ಒಂದೇ ಕೋರ್ಟ್​ನಲ್ಲಿ ಪ್ರಕ್ರಿಯೆ ನಡೆಸುವಂತೆ ಕೋರಲು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಹೈಕೋರ್ಟ್​ಗೆ ಸಕ್ಷಮ ಪ್ರಾಧಿಕಾರಿ ಹರ್ಷ ಗುಪ್ತಾ ಇಂದು ಮಾಹಿತಿ ನೀಡಿದ್ದರು.  

AgriGold scam: ಅಗ್ರಿಗೋಲ್ಡ್​ ಹೂಡಿಕೆದಾರರ ಹಿತರಕ್ಷಣೆಗಾಗಿ ತಕ್ಷಣ ಸುಪ್ರೀಂ ಕೋರ್ಟ್ ಮೊರೆ ಹೋಗಲು ಹೈಕೋರ್ಟ್ ಸೂಚನೆ
AgriGold scam: ಅಗ್ರಿಗೋಲ್ಡ್​ ವಂಚನೆ; ಹೂಡಿಕೆದಾರರ ಹಿತರಕ್ಷಣೆಗಾಗಿ ತಕ್ಷಣ ಸುಪ್ರೀಂ ಕೋರ್ಟ್ ಮೊರೆ ಹೋಗಲು ಹೈಕೋರ್ಟ್ ಸೂಚನೆ
TV9 Web
| Edited By: |

Updated on:Jul 06, 2021 | 4:09 PM

Share

ಬೆಂಗಳೂರು:  ಅಗ್ರಿಗೋಲ್ಡ್​ ಎಂಬ ಆಂಧ್ರ ಮೂಲದ ಮೋಸದ ಕಂಪನಿ ಎಸಗಿರುವ ಭಾರೀ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಡಿಕೆದಾರರ ಹಿತಕಾಯಲು ತಕ್ಷಣ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇಡೀ ದೇಶದಲ್ಲಿ 32 ಲಕ್ಷ ಹೂಡಿಕೆದಾರರಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 8.50 ಲಕ್ಷ ಹೂಡಿಕೆದಾರರಿದ್ದಾರೆ. 

ಅಗ್ರಿಗೋಲ್ಡ್​ನಿಂದ ವಂಚನೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೆಲಂಗಾಣ ಸರ್ಕಾರ ಆ ಕಂಪನಿಗೆ ಸೇರಿದ 290 ಆಸ್ತಿಗಳನ್ನು ಜಪ್ತಿ ಮಾಡಿದೆ. ಇದರಲ್ಲಿ ಕರ್ನಾಟಕದಲ್ಲಿರುವ ಅಗ್ರಿಗೋಲ್ಡ್ ಆಸ್ತಿಯೂ ಸೇರಿದೆ. ಹೀಗಾಗಿ ಒಂದೇ ಕೋರ್ಟ್​ನಲ್ಲಿ ಪ್ರಕ್ರಿಯೆ ನಡೆಸುವಂತೆ ಕೋರಲು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ನಿರ್ಧಾರ ಮಾಡಲಾಗಿದೆ ಎಂದು ಹೈಕೋರ್ಟ್​ಗೆ ಸಕ್ಷಮ ಪ್ರಾಧಿಕಾರಿ ಹರ್ಷ ಗುಪ್ತಾ ಇಂದು ಮಾಹಿತಿ ನೀಡಿದರು.

ಇದು ಸಮಂಜಸವೆಂದು ಅರಿತ ಹೈಕೋರ್ಟ್, ಹೂಡಿಕೆದಾರರ ಹಿತಾಸಕ್ತಿ ರಕ್ಷಣೆಗೆ ತಕ್ಷಣ  ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿತು.  ಇದೇ ವೇಳೆ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 2ನೇ ವಾರಕ್ಕೆ ಮುಂದೂಡಿತು.

AgriGold scam ಎಂಬುದು ಅಂತರ ರಾಜ್ಯ ಅಗ್ರಿಗೋಲ್ಡ್ ವಂಚನೆ ಪ್ರಕರಣವಾಗಿದೆ. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸುಮಾರು 32 ಲಕ್ಷ ಹೂಡಿಕೆದಾರರನ್ನು ಈ ಕಂಪನಿ ವಂಚಿಸಿದೆ. Collective Investment Scheme (CIS) ಯೋಜನೆಯಡಿ 1995ರಿಂದ ಈ ಕಂಪನಿ ವಂಚನೆಗೆ ಮೊದಲಿಟ್ಟಿತ್ತು. ಅಧಿಕ ಲಾಭದ ಆಸೆ ತೋರಿಸಿ, ಅಲ್ಲಿಂದ ಮುಂದಕ್ಕೆ 20 ವರ್ಷದಲ್ಲಿ ಹೂಡಿಕೆದಾರರನ್ನು ನಯವಾಗಿ ವಂಚಿಸಿತ್ತು.

(AgriGold cheating case karnataka high court directs to approach supreme court to protect investors )

Published On - 4:05 pm, Tue, 6 July 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?