AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 13ಕ್ಕೆ ಔತಣಕೂಟ ಹಿನ್ನೆಲೆ ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ: ಸಿಎಂ ರಾಜಕೀಯ ಲೆಕ್ಕಾಚಾರದ ಬಗ್ಗೆ ಭಾರಿ ಕುತೂಹಲ

ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 13 ರಂದು ಸಚಿವರಿಗಾಗಿ ಏರ್ಪಡಿಸಿರುವ ಔತಣಕೂಟದ ಬಗ್ಗೆ ಹಲವು ಅಂತೆ ಕಂತೆಗಳು ಓಡಾಡುತ್ತಿವೆ. ಇದರ ಮಧ್ಯೆ, ಇಲ್ಲೇನೋ ಸಮಸ್ಯೆ ಇದೆ ಎಂಬ ಅನುಮಾನ ಕೂಡ ದಟ್ಟವಾಗಿ ಕಾಡುತ್ತಿದೆ. ಡಿನ್ನರ್‌ ಮೀಟಿಂಗ್‌ಗೆ ಪೂರ್ವಭಾವಿಯಾಗಿ ಸಿಎಂ ಸಭೆ ನಡೆಸಿದ್ದು, ಇದು ಕೂಡ ಕರ್ನಾಟಕ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಅಂದಹಾಗೆ, ಸಿಎಂ ಸಭೆಯಲ್ಲಿ ಏನೇನು ಚರ್ಚೆಯಾಯಿತು? ಇಲ್ಲಿದೆ ಮಾಹಿತಿ.

ಅ. 13ಕ್ಕೆ ಔತಣಕೂಟ ಹಿನ್ನೆಲೆ ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ: ಸಿಎಂ ರಾಜಕೀಯ ಲೆಕ್ಕಾಚಾರದ ಬಗ್ಗೆ ಭಾರಿ ಕುತೂಹಲ
ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 11, 2025 | 7:43 AM

Share

ಬೆಂಗಳೂರು, ಅಕ್ಟೋಬರ್ 11: ಸಿಎಂ ಸಿದ್ದರಾಮಯ್ಯ  (Siddaramaiah) ಅಕ್ಟೋಬರ್ 13ಕ್ಕೆ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಅಪರೂಪಕ್ಕೆ ಕರೆದಿರುವ ಈ ಔತಣಕೂಟ ಕೆಲ ಸಚಿವರ ಪಾಲಿಗೆ ಬೀಳ್ಗೊಡುಗೆ ಆಗಬಹುದು ಎಂಬ ಚರ್ಚೆ ಕಾಂಗ್ರೆಸ್‌ನಲ್ಲೇ (Congress) ಜೋರಾಗಿ ನಡೆಯುತ್ತಿದೆ. ಯಾರ ಕುರ್ಚಿ ಉಳಿಯುತ್ತದೆ, ಯಾರ ಕುರ್ಚಿ ಹೋಗುತ್ತದೆ ಎಂಬ ಪ್ರಶ್ನೆ ಮೂಡಿದೆ. ಹಿರಿತಲೆಯ ನಾಯಕರೇ ನವೆಂಬರ್​ನಲ್ಲಿ ನಡೆಯಲಿರುವ ಸಂಪುಟ ಪುನಾರಚನೆಯಿಂದ ಸೈಡಿಗೆ ಸರಿಯಬೇಕಾಗಬಹುದು ಎಂಬುದು ಕಾಂಗ್ರೆಸ್​ನಲ್ಲಿ ಹರಡಿರುವ ವದಂತಿ. ಆದರೆ ಸಂಪುಟ ವಿಸ್ತರಣೆ ಅಥವಾ ನಾಯಕತ್ವ ಬದಲಾವಣೆ ಎಂಬ ಜೇನುಗೂಡಿಗೆ ಹೈಕಮಾಂಡ್ ಕೈ ಹಾಕಿದ್ದೇ ಆದರೆ ಅಲ್ಲೋಲ ಕಲ್ಲೋಲ ಗ್ಯಾರಂಟಿ. ಇದರ ಮುನ್ಸೂಚನೆ ಮನಗಂಡಿರುವ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿಯೇ ಕೂತು ಭಾರೀ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಸುಮಾರು 2 ಗಂಟೆ ಕಾಲ ಅತ್ಯಾಪ್ತ ಸಚಿವರ ಜತೆ ಸಭೆ!

ಇನ್ನೊಂದು ದಿನ ಕಳೆದರೆ ಸಿದ್ದರಾಮಯ್ಯ ಕರೆದ ಡಿನ್ನರ್ ಸಭೆ ನಡೆಯಲಿದೆ. ಇದಕ್ಕೆ ಮೊದಲೇ ಸಿಎಂ ಸಿದ್ದರಾಮಯ್ಯ ತಮ್ಮ ಅತ್ಯಾಪ್ತ ಸಚಿವರ ಜೊತೆ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯದ ಕ್ಷಿಪ್ರ ಬೆಳವಣಿಗೆ ಸಾಧ್ಯಾಸಾಧ್ಯತೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ರಾಜಕೀಯದಲ್ಲಿ 2+2 ಯಾವತ್ತೂ ನಾಲ್ಕೂ ಎನ್ನಲಾಗುವುದಿಲ್ಲ. 2+2 ಸೇರಿಸಿದರೆ ಐದೂ ಆಗಬಹುದು. ಅಂಥ ಬದಲಾದ ಸನ್ನಿವೇಶಗಳಿಗೆ ಪ್ರತಿತಂತ್ರಗಾರಿಕೆ ಬಗ್ಗೆಯೂ ಗಂಭೀರ ಮಾತುಕತೆ ಕಾವೇರಿಯಲ್ಲಿ ನಡೆದಿದೆ. ಸುಮಾರು ಎರಡು ಗಂಟೆಗಳ ಕಾಲ ಈ ಸಭೆ ನಡೆದಿದೆ..

ಆಪ್ತ ಸಚಿವರ ಸಭೆಯಲ್ಲಿ ಏನೇನು ಸಮಾಲೋಚನೆ?

ನಾಯಕತ್ವ ಬದಲಾವಣೆ ವಿಷಯ ಬಂದರೆ ಅದಕ್ಕೆ ಹೇಗೆ ಕೌಂಟರ್ ಮಾಡಬೇಕು ಎಂಬ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಸಿದ್ದರಾಮ್ಯಯ್ಯರೇ ಸರ್ಕಾರವನ್ನ ಮುಂದುವರಿಸುವ ಬಗ್ಗೆ ಹಾಗೂ ಕ್ಷಿಪ್ರ ಬೆಳವಣಿಗೆಗಳಾದ್ರೆ ಸಿದ್ದರಾಮಯ್ಯ ರಹಿತ ಸರ್ಕಾರ ಆದರೆ ಹೇಗೆ ಎಂಬ ಬಗ್ಗೆ ವಿಶ್ಲೇಷಿಸಿದ್ದಾರೆ. ಹಾಗೇ ರಾಜಕೀಯ ಎದುರಾಳಿಗಳ ಗಡುವಿಗೆ ಪ್ರತಿತಂತ್ರ ಹೆಣೆಯುವ ವಿಷಯ ಕೂಡ ಗಂಭೀರವಾಗಿ ಚರ್ಚೆಯಾಗಿದೆ. ಈ ಸಂಬಂಧ ಮುಂದಿರುವ ಎಲ್ಲಾ ಆಯ್ಕೆಗಳನ್ನ ಮುಕ್ತವಾಗಿಟ್ಟುಕೊಳ್ಳುವ ಬಗ್ಗೆ ಚರ್ಚಿಸಲಾಗಿದೆ. ಮಂತ್ರಿ ಮತ್ತು ಶಾಸಕರ ನಿರ್ವಹಣೆ ವಿಚಾರ ಸಹ ಸಚಿವರು ಪ್ರಸ್ತಾಪಿಸಿದ್ದಾರೆ. ಜೊತೆಗೆ ಸಂಪುಟ ವಿಸ್ತರಣೆ ಲಾಭ ನಷ್ಟದ ಬಗ್ಗೆ ಸಹ ಮಾತುಕತೆ ನಡೆದಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆಗ್ತಾರೆ: ಮತ್ತೆ ಸಿಎಂ ಬದಲಾವಣೆಯ ಮಾತನಾಡಿದ ಇಕ್ಬಾಲ್ ಹುಸೇನ್

ಈಗಾಗ್ಲೇ ಪಕ್ಷದಲ್ಲಿ ಬೇಸರಗೊಂಡಿರುವ ಮಂತ್ರಿ ಹಾಗೂ ಶಾಸಕರನ್ನ ಸೆಳೆಯುವ ಬಗ್ಗೆ ಚರ್ಚೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ನೆಪದಲ್ಲಿ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ತಂತ್ರ ಹೆಣೆದಂತೆ ಕಾಣುತ್ತಿದೆ. ಇದೇ ಈಗ ಹೊಸದೊಂದು ಚರ್ಚೆಗೆ ಕಾರಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?