AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಂಗ್ರೆಸ್ ಸೇರಲು ಅಹ್ಮದ್ ಪಟೇಲ್ ಕಾರಣ: ಸಿದ್ದರಾಮಯ್ಯ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಸಾಯಂಕಾಲ ಬುಧವಾರ ಬೆಳಗ್ಗೆ ನಿಧನರಾದ ಪಕ್ಷದ ಹಿರಿಯ ನಾಯಕ ಮತ್ತು ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿದ್ದ ಅಹ್ಮದ್ ಪಟೇಲ್ ಅವರ ಶೋಕಸಭೆಯಲ್ಲಿ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಶ್ರದ್ಧಾಂಜಲಿ ಅರ್ಪಿಸಿದರು.

ನಾನು ಕಾಂಗ್ರೆಸ್ ಸೇರಲು ಅಹ್ಮದ್ ಪಟೇಲ್ ಕಾರಣ: ಸಿದ್ದರಾಮಯ್ಯ
ಅರುಣ್​ ಕುಮಾರ್​ ಬೆಳ್ಳಿ
|

Updated on:Nov 25, 2020 | 8:57 PM

Share

ಕಾಂಗ್ರೆಸ್ ಹಿರಿಯ ಧರೀಣ ಅಹ್ಮದ್ ಪಟೇಲ್​ ಅವರ ಸಾವಿನ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ಸಾಯಂಕಾಲ ಆಯೋಜಿಸಿದ ಸಂತಾಪ ಸೂಚಕ ಸಭೆಯಲ್ಲಿ ಪಕ್ಷದ ರಾಜ್ಯ ನಾಯಕರು ಭಾವಪೂರ್ಣ ಶದ್ಧಾಂಜಲಿಯನ್ನು ಅರ್ಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ‘ಪಟೇಲ್ ಅವರ ಸಾವಿನಿಂದ ಪಕ್ಷಕ್ಕೆ ಅಪಾರ ನಷ್ಟವಾಗಿದೆ, ಅವರು ಪಕ್ಷದ ಆಧಾರ ಸ್ತಂಭವಾಗಿದ್ದರು ಮತ್ತು ಒಗ್ಗಟ್ಟು, ಐಕ್ಯತೆಗಾಗಿ ತಮ್ಮ ಬದುಕಿನಡೀ ಶ್ರಮಿಸಿದರು. ಯಾವುದೇ ರಾಜಕೀಯ ಸಮಸ್ಯೆಯಿದ್ದರೂ ಅದಕ್ಕೆ ಪರಿಹಾರ ಕಂಡುಹಿಡಿಯುತ್ತಿದ್ದರು, ಸಮಸ್ಯೆಯನ್ನು ಮುನ್ನೆಲೆಗೆ ತಾರದೆ ಪಕ್ಷದ ಚೌಕಟ್ಟಿನೊಳಗೆ ಅದನ್ನು ಬಗೆಹರಿಸುತ್ತಿದ್ದರು. 2006ರಲ್ಲಿ ನಾನು ಕಾಂಗ್ರೆಸ್ ಸೇರಲು ಪಟೇಲ್ ಅವರೇ ಕಾರಣ, ನಿಜವಾದ ರಾಜಕೀಯ ಚಾಣಕ್ಯ ಅಂದರೆ ಅಹ್ಮದ್ ಪಟೇಲ್. ಅವರ ಸ್ಥಾನ ತುಂಬುವಂಥವರು ಬೇಱರೂ ಕಾಣಿಸುತ್ತಿಲ್ಲ,’ ಎಂದು ಹೇಳಿದರು.

ನಂತರ ಮಾತಾಡಿದ, ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ‘ಅಹ್ಮದ್​ ಪಟೇಲ್​ರಲ್ಲಿ ಮೆಚ್ಚಿಕೊಳ್ಳುವಂಥ ಹಲವಾರು ಗುಣಗಳಿದ್ದವು. ಬೇರೆ ಬೇರೆ ಪಕ್ಷಗಳ ನಾಯಕರಲ್ಲೂ ಹೊಂದಾಣಿಕೆ ಹುಟ್ಟಿಸುವ ಕೆಲಸವನ್ನೂ ಪಟೇಲ್ ಸುರಳೀತವಾಗಿ ಮಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ ತೊಂದರೆ ಎದುರಾದರೂ ಎಲ್ಲವನ್ನೂ ಸಹಿಸಿಕೊಂಡು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸವನ್ನು ಅವರು ಕೊನೆವರೆಗೂ ಮಾಡಿದರು,’ ಎಂದರು.

Published On - 8:41 pm, Wed, 25 November 20

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು