ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.             ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ […]

ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​
ಸಾಧು ಶ್ರೀನಾಥ್​

Updated on: Sep 26, 2019 | 12:00 PM

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.

 

 

 

 

 

 

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ 3 ರಂದು ಬಂಧನಕ್ಕೆ ಒಳಪಡಿಸಿತ್ತು.  ಪ್ರಸ್ತುತ  ಡಿಕೆಶಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಮೊನ್ನೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಆ ವೇಳೆ, ಪಿ ಚಿದಂಬರಂ ಅವರನ್ನ ಭೇಟಿಯಾಗಿದ್ದು, ಡಿಕೆಶಿ ಯನ್ನ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.  ಆದರೆ ಇಂದು ಅಹ್ಮದ್​ ಪಟೇಲ್, ಡಿಕೆಶಿಯನ್ನ ಭೇಟಿಯಾಗಲಿದ್ದಾರೆ.

Published On - 11:53 am, Thu, 26 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us