AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ವೇಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಉಪಕ್ರಮವು ಅಪಘಾತಗಳ ಮತ್ತು ಸಾವುನೋವುಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಭಾವಿಸುತ್ತೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳು; ಅಶಿಸ್ತಿನ ಚಾಲನೆ ಮಾಡಿದರೆ ಸಿಕ್ಕಿಬೀಳುವುದು ಖಂಡಿತ!
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಎಐ ಕ್ಯಾಮೆರಾಗಳುImage Credit source: Twitter
Ganapathi Sharma
|

Updated on: Jul 29, 2023 | 4:16 PM

Share

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru Mysuru Expressway) ಸಂಚಾರ ಉಲ್ಲಂಘನೆ ಪತ್ತೆ ಹಚ್ಚಲು ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕ್ಯಾಮೆರಾಗಳ ಪ್ರಾಯೋಗಿಕ ಚಾಲನೆ ಶುಕ್ರವಾರ ಆರಂಭವಾಗಿದೆ. ಈ ಕ್ಯಾಮೆರಾಗಳು ವೇಗದ ಮಿತಿಯನ್ನು ಅಳೆಯುತ್ತವೆ ಮತ್ತು ಅತಿವೇಗ, ಸೀಟ್ ಬೆಲ್ಟ್ ಧರಿಸದಿರುವುದು, ಚಾಲನೆ ವೇಳೆ ಮೊಬೈಲ್ ಫೋನ್‌ಗಳನ್ನು ಬಳಸುವುದು ಮುಂತಾದ ಉಲ್ಲಂಘನೆಗಳನ್ನು ಸೆರೆಹಿಡಿದು ದಾಖಲಿಸಿಕೊಳ್ಳಲಿವೆ.

ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಅಲೋಕ್ ಕುಮಾರ್ ಅವರು ಎಐ ಕ್ಯಾಮೆರಾಗಳ ವೀಡಿಯೊವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ವೇಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಉಪಕ್ರಮವು ಅಪಘಾತಗಳ ಮತ್ತು ಸಾವುನೋವುಗಳ ಸಂಖ್ಯೆ ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಭಾವಿಸುತ್ತೇವೆ. ಭಾರತೀಯ ರಸ್ತೆಗಳಲ್ಲಿ ಅತಿವೇಗವೇ ಆಪಘಾತ, ಸಾವುಗಳಿಗೆ ಪ್ರಮುಖ ಕಾರಣ ಎಂದು ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ಲೇನ್‌ಗಳಲ್ಲಿ ವೇಗದ ಮಿತಿಯ ಬಗ್ಗೆ ಮಾಹಿತಿ ನೀಡಿದ ಅವರು, ಬಲ ಲೇನ್‌ಗೆ 100 ಕಿಮೀ, ಮಧ್ಯಕ್ಕೆ 80 ಕಿಮೀ ಮತ್ತು ಎಡ ಲೇನ್‌ಗೆ 60 ಕಿಮೀ ಮಿತಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇನಲ್ಲಿ150 ಕೋಟಿ ರೂ. ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ ಕೈಗೊಳ್ಳಲು ಕೇಂದ್ರಕ್ಕೆ ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

ಎಐ ಕ್ಯಾಮೆರಾಗಳು ನಂಬರ್ ಪ್ಲೇಟ್ ಅನ್ನು ಸಹ ರೀಡ್ ಮಾಡಲಿದೆಯೇ ಮತ್ತು ಅತಿವೇಗದ ವಾಹನಗಳನ್ನು ಗುರುತಿಸಿ ದತ್ತಾಂಶ ದಾಖಲಿಸಿಡಲಿದೆಯೇ ಎಂದು ಟ್ವಿಟರ್ ಬಳಕೆದಾರರು ಪ್ರಶ್ನಿಸಿದ್ದಾರೆ. ಹಾಗೆ ಮಾಡುತ್ತದೆ ಎಂದಾದಲ್ಲಿ ಅದು ತುಂಬಾ ಒಳ್ಳೆಯ ಉಪಕ್ರಮ ಎಂದು ಉಲ್ಲೇಖಿಸಿದ್ದಾರೆ. ಈ ಟ್ವೀಟ್​​ಗೆ ಕುಮಾರ್ ಸಕಾರಾತ್ಮಕವಾಗಿ ಉತ್ತರಿಸಿದ್ದಾರೆ.

ಕಟ್ಟುನಿಟ್ಟಾದ ಲೇನ್​ ಶಿಸ್ತನ್ನು ಅನುಷ್ಠಾನಗೊಳಿಸಲು ಮತ್ತು ಅತಿ ನಿಧಾನವಾಗಿ ಚಲಿಸುವ ವಾಹನಗಳನ್ನು ನಿಷೇಧಿಸುವಂತೆ ಮತ್ತೊಬ್ಬರು ಬಳಕೆದಾರರು ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

ಏತನ್ಮಧ್ಯೆ, ಅಪಘಾತಗಳು ಹೆಚ್ಚಾದ ವರದಿಗಳ ನಂತರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಬಳಿ ಎಕ್ಸ್‌ಪ್ರೆಸ್‌ವೇಯನ್ನು ಪರಿಶೀಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ