AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ -ಅಸಾದುದ್ದೀನ್ ಒವೈಸಿ

ಇಂದು ಗಾಂಧೀಜಿ ಹತ್ಯೆಯಾದ ದಿನ. ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ ಎಂದು ನಗರದಲ್ಲಿ AIMIM ಸಂಸದ ಅಸಾದುದ್ದೀನ್​ ಒವೈಸಿ ಹೇಳಿದ್ದಾರೆ.

ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ -ಅಸಾದುದ್ದೀನ್ ಒವೈಸಿ
‘ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ’
KUSHAL V
|

Updated on: Jan 30, 2021 | 11:37 PM

Share

ಕಲಬುರಗಿ: ಇಂದು ಗಾಂಧೀಜಿ ಹತ್ಯೆಯಾದ ದಿನ. ನಾಥೂರಾಮ್ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರಗಾಮಿ ಎಂದು ನಗರದಲ್ಲಿ AIMIM ಸಂಸದ ಅಸಾದುದ್ದೀನ್​ ಒವೈಸಿ ಹೇಳಿದ್ದಾರೆ.

ಮುಸ್ಲಿಮರ ಪರ ಇದ್ದಾರೆಂದು ಗಾಂಧೀಜಿಯನ್ನು ಹತ್ಯೆಗೈದರು. ಅನೇಕರು ಸೇರಿ ಮಹಾತ್ಮ ಗಾಂಧೀಜಿಯನ್ನು ಹತ್ಯೆ ಮಾಡಿದರು ಎಂದು ಸಂಸದ ಅಸಾದುದ್ದೀನ್​ ಒವೈಸಿ ಹೇಳಿದರು.

ನಾಥೂರಾಮ್​ ಗೋಡ್ಸೆಗೂ ನಮಗೂ ಸಂಬಂಧವಿಲ್ಲ ಅಂತಾರೆ. ಬೆಕ್ಕು ಕದ್ದು ಹಾಲು ಕುಡಿದರೆ ಯಾರಿಗೂ ಗೊತ್ತಾಗಲ್ಲವೆಂದು ತಿಳಿದಿದ್ದಾರೆ. ನಾಥೂರಾಮ್​ ಗೋಡ್ಸೆ ಸಂಘ ಪರಿವಾರಕ್ಕೆ ಸೇರಿದ ಮನುಷ್ಯ ಎಂದು ಒವೈಸಿ ಹೇಳಿದರು.

ಗಾಂಧಿ ಸಮಾಧಿಗೆ ತೆರಳಿ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದಾರೆ. ಆದರೆ ಗಾಂಧಿ ಕೊಂದ ಸಾವರ್ಕರ್​ರನ್ನು ಮೋದಿ ಆರಾಧಿಸ್ತಾರೆ. ಗಣರಾಜ್ಯೋತ್ಸವದಂದು ನವದೆಹಲಿಯಲ್ಲಿ ಗಲಾಟೆ ಆಗಬಾರದಿತ್ತು ಎಂದು ಸಂಸದ ಅಸಾದುದ್ದೀನ್​ ಒವೈಸಿ ಹೇಳಿದರು.

‘ಕಾಂಗ್ರೆಸ್​ ಜೊತೆ ಹೋಗದಂತೆ H.D.ಕುಮಾರಸ್ವಾಮಿಗೆ ಹೇಳಿದ್ದೆ’ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್​ ಪಕ್ಷ ಕಾಂಗ್ರೆಸ್​ ಜೊತೆ ಹೋಗದಂತೆ H.D.ಕುಮಾರಸ್ವಾಮಿಗೆ ಹೇಳಿದ್ದೆ. ಆದ್ರೂ ಕುಮಾರಸ್ವಾಮಿ ಕಾಂಗ್ರೆಸ್​ ಜೊತೆ ಮೈತ್ರಿಮಾಡಿಕೊಂಡರು ಎಂದು ಸಂಸದ ಅಸಾದುದ್ದೀನ್​ ಒವೈಸಿ ಹೇಳಿದರು.

ನಂತರ ಕುಮಾರಸ್ವಾಮಿ ಅದರ ದುಷ್ಪರಿಣಾಮ ಅನುಭವಿಸಿದರು. ಮುಂದಿನ ಚುನಾವಣೆಗಳಲ್ಲಿ ರಾಜ್ಯದಲ್ಲಿ AIMIM ಸ್ಪರ್ಧಿಸಲಿದೆ. ಕಾಂಗ್ರೆಸ್​ ಪಕ್ಷದಲ್ಲಿ ಇವಾಗ ಯಾವುದೇ ಧಮ್​ ಇಲ್ಲ. ಸೋಲಿಗೆ ಹೆದರಬೇಕಿಲ್ಲ, ಪ್ರತಿ ಸೋಲು ಗೆಲುವಿನ ಮೆಟ್ಟಿಲಾಗುತ್ತೆ ಎಂದು ಒವೈಸಿ ಹೇಳಿದರು.

‘ಕ್ರಿಕೆಟ್​ ಚೆಂಡನ್ನು ದನದ ಚರ್ಮದಿಂದ ತಯಾರಿಸ್ತಾರೆ.. ಆದ್ರೆ ದನದ ಮಾಂಸ ಮಾತ್ರ ತಿನ್ನಬೇಡಿ ಎಂದು ಹೇಳ್ತಾರೆ’ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲಾಗಿದೆ. ಇದರಿಂದ ಅನೇಕರ ಉದ್ಯೋಗ ಹಾಳಾಗಿ ಹೋಗುತ್ತದೆ ಎಂದು ಸಂಸದ ಅಸಾದುದ್ದೀನ್​ ಒವೈಸಿ ಹೇಳಿದರು. ಉದ್ಯೋಗ ಕಳೆದುಕೊಂಡವರು ಮುಂದೇನು ಮಾಡ್ಬೇಕೆಂದು ರಾಜ್ಯ ಸರ್ಕಾರಕ್ಕೆ ಒವೈಸಿ ಪ್ರಶ್ನೆ ಮಾಡಿದರು.

ಕ್ರಿಕೆಟ್​ ಚೆಂಡನ್ನು ದನದ ಚರ್ಮದಿಂದ ತಯಾರಿಸುತ್ತಾರೆ. ಆದರೆ ದನದ ಮಾಂಸ ಮಾತ್ರ ತಿನ್ನಬೇಡಿ ಎಂದು ಹೇಳುತ್ತಾರೆ. ಅಮಿತ್ ಶಾ ಸಬ್​ಕಾ ಸಾಥ್ ಸಬ್​ಕಾ ವಿಕಾಸ್ ಅಂತಾರೆ. ಅವರು ಸಬ್​ಕಾ ಸಾಥ್​ ಇಲ್ಲ, ಬದಲಾಗಿ ದನಗಳ ಜೊತೆಗಿದ್ದಾರೆ ಎಂದು ಹೇಳಿದರು.

ದನದ ಮಾಂಸ ಸೇವನೆಯಿಂದ ಆನೇಕರು ಆರೋಗ್ಯವಂತರಾಗ್ತಾರೆ. ಪ್ರಧಾನಿ ಮೋದಿ, ಸಿಎಂ ಬಿಎಸ್​ವೈಗೆ ಬಡವರ ಹಿತ ಬೇಡವಾಗಿದೆ. ಬಡವರು ಮನೆಯಲ್ಲೇನು ತಿನ್ನುತ್ತಾರೆಂದು ಇಣುಕುವುದನ್ನು ಬಿಡಿ. ನಾನು ಮನೆಯಲ್ಲಿ ಏನು ತಿನ್ನಬೇಕೆನ್ನುವುದು ಅವರಿಗ್ಯಾಕೆ ಬೇಕು ಎಂದು ಸಂಸದ ಅಸಾದುದ್ದೀನ್​ ಒವೈಸಿ ಹೇಳಿದರು.

ಗಾಂಧಿ ಪುಣ್ಯಸ್ಮರಣೆಯಂದು ಟ್ವಿಟರ್​ನಲ್ಲಿ ಟ್ರೆಂಡ್​ ಆದ ನಾಥೂರಾಮ್​ ಗೋಡ್ಸೆ; ದೇಶವನ್ನು ಉಳಿಸಿದ್ದಕ್ಕೆ ಧನ್ಯವಾದವೆಂದ ಟ್ವಿಟಿಗರು

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!