AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?

ಮಂಗಳೂರು ಏರ್​ಪೋರ್ಟ್​ನಿಂದ ದುಬೈಗೆ ಬೆಳಗ್ಗೆ 8.50ಕ್ಕೆ ಹೊರಡಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿಮಾನಕ್ಕಾಗಿ ಕಾದು ಕಾದು ಪ್ರಯಾಣಿಕರು ಹೈರಾಣಾದ ಪ್ರಸಂಗ ನಡೆದಿದೆ. ಪ್ರಯಾಣಿಕರಿಗೆ ಸರಿಯಾದ ಸೌಲಭ್ಯ ನೀಡದೆ ಏರ್ ಇಂಡಿಯಾ ಸಿಬ್ಬಂದಿ ಸತಾಯಿಸ್ತಿರುವ ಆರೋಪವೂ ಕೇಳಿಬಂದಿದೆ.

Mangaluru: ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು; ಅಷ್ಟಕ್ಕೂ ಆಗಿದ್ದೇನು?
ಏರ್​​ ಇಂಡಿಯಾ ವಿಮಾನದ ಹಾರಾಟ ರದ್ದು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 26, 2025 | 5:33 PM

Share

ಮಂಗಳೂರು, ಸೆಪ್ಟೆಂಬರ್​ 26: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್​​ ಇಂಡಿಯಾ (Air India) ವಿಮಾನದ ಹಾರಾಟ ತಾಂತ್ರಿಕ ದೋಷದ ಹಿನ್ನೆಲೆ ರದ್ದಾದ ಪರಿಣಾಮ ಪ್ರಯಾಣಿಕರು ಪರದಾಡಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ ಬೆಳಗ್ಗೆ 8.50ಕ್ಕೆ ವಿಮಾನ ಹಾರಾಟ ಆರಂಭಿಸಬೇಕಿತ್ತು. ಆದರೆ ತಾಂತ್ರಿಕ ದೋಷದ ಕಾರಣ ನೀಡಿ ಪ್ರಯಾಣಿಕರನ್ನು ಸಿಬ್ಬಂದಿ ಕೂರಿಸಿದ್ದರು. ಅಂತಿಮವಾಗಿ ವಿಮಾನ ಹಾರಾಟವನ್ನ ರದ್ದು ಮಾಡಲಾಗಿದೆ.

ಆರಂಭದಲ್ಲಿ ಒಂದು ಗಂಟೆ ತಡವಾಗಿ ವಿಮಾನ ಹೊರಡಲಿದೆ ಎಂದು ಪ್ರಯಾಣಿಕರಿಗೆ ಸಿಬ್ಬಂದಿ ತಿಳಿಸಿದ್ದರು. ಆ ಬಳಿಕ ಇನ್ನೂ ಸ್ವಲ್ಪ ತಡವಾಗಬಹುದೆಂದು ಹೇಳಿದ್ದಲ್ಲದೆ, ಮಧ್ಯಾಹ್ನ 3.30ಕ್ಕೆ ಫ್ಲೈಟ್​ ಟೇಕಾಫ್​ ಆಗಲಿದೆ ಎಂದು ಮಾಹಿತಿ ಕೊಟ್ಟಿದ್ದರು. ಆ ಸಮಯ ಕಳೆದರೂ ವಿಮಾನ ಹಾರಾಟದ ಬಗ್ಗೆ ಯಾವುದೇ ಮಾಹಿತಿ ಸಿಗದ ಕಾರಣ ಪ್ರಯಾಣಿಕರು ಮತ್ತೆ ಈ ಬಗ್ಗೆ ವಿಚಾರಿದ್ದಾರೆ. ಆಗ ಮತ್ತೆ ಬೇರೆಯದ್ದೇ ಸಮಯ ಹೇಳಿರುವ ಏರ್​ಪೋರ್ಟ್​ ಸಿಬ್ಬಂದಿ ಸಂಜೆ 4.30ಕ್ಕೆ ಹೊರಡೋದಾಗಿ ತಿಳಿಸಿದ್ದಾರೆ. ಅಂತಿಮವಾಗಿ ಸಂಜೆ 6 ಗಂಟೆಗೆ ಸಮಯ ನೀಡಿ ವಿಮಾನ ಹಾರಾಟ ರದ್ದು ಮಾಡಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳ ಕೇಸ್​: ಚಿನ್ನಯ್ಯ ಹಿಂದಿದ್ದ ಟೀಂನ ಮತ್ತೊಂದು ಕಳ್ಳಾಟ ಬಯಲು

ಪ್ರಯಾಣಿಕರ ಬೇಸರ

ವಿಮಾನ ಹಾರಾಟ ರದ್ದಾದ ಪರಿಣಾಮ ಹೆಚ್ಚುವರಿ ಹಣ ನೀಡಿ ಹಗಲಿನ ಪ್ರಯಾಣಕ್ಕೆ ಬುಕ್ ಮಾಡಿದ್ದ ಪ್ರಯಾಣಿಕರು ನಿರಾಸೆಗೊಂಡಿದ್ದಾರೆ. ರಾತ್ರಿ ವೇಳೆ ಪ್ರಯಾಣ ಬೇಡ ಎಂದು ಹೆಚ್ಚುವರಿ ಮೊತ್ತ ಭರಿಸಿದ್ದೇವೆ. ಈಗ ಬಹರೈನ್‌ನಿಂದ ಬರುವ ಫ್ಲೈಟ್​ನಲ್ಲಿ ಕಳಿಸ್ತೇವೆ ಎಂದು ಇವರು ಸಬೂಬು ಹೇಳುತ್ತಿದ್ದು, ಹೆಚ್ಚು ಮೊತ್ತ ಭರಿಸಿಯೂ ಮತ್ತೆ ರಾತ್ರಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಅವಲತ್ತುಕೊಂಡಿದ್ದಾರೆ. ಅಲ್ಲದೆ ಪ್ರಯಾಣಿಕರಿಗೆ ಸರಿಯಾದ ಸೌಲಭ್ಯ ನೀಡದೆ ಏರ್ ಇಂಡಿಯಾ ಸಿಬ್ಬಂದಿ ಸತಾಯಿಸ್ತಿರುವ ಆರೋಪವೂ ಕೇಳಿಬಂದಿದೆ.

ಜೂನ್ 12 ರ ಮಧ್ಯಾಹ್ನ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾಗಿತ್ತು. ಆ ಬಳಿಕ ತನ್ನ ಸೇವೆಯಲ್ಲಿ ಸಾಕಷ್ಟು ಸುರಕ್ಷಿತ ಕ್ರಮವನ್ನ ಏರ್​ ಇಂಡಿಯಾ ಕೈಗೊಂಡಿದೆ. ಹೀಗಿದ್ದರೂ ಇತ್ತೀಚೆಗೆ ಮೇಲಿಂದ ಮೇಲೆ ಇಂತಹ ತಾಂತ್ರಿಕ ಸಮಸ್ಯೆಗಳು ವಿಮಾನದಲ್ಲಿ ಕಾಣಿಸಿಕೊಳ್ಳುತ್ತಿವೆ. ಹವಾಮಾನ ವೈಪರೀತ್ಯದಿಂದ ಉಂಟಾಗುವ ಸಮಸ್ಯೆಗಳು ಒಂದೆಡೆಯಾದ್ರೆ, ವಿಮಾನಗಳಲ್ಲಿ ಮೇಲಿಂದ ಮೇಲೆ ಕಾಣಿಸಿಕೊಳ್ತಿರೋ ತಾಂತ್ರಿಕ ಸಮಸ್ಯೆಗಳೂ ಪ್ರಯಾಣಿಕರ ಬೇಸರಕ್ಕೆ ಕಾರಣವಾಗ್ತಿವೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?