AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳಕ್ಕೆ ಅಚ್ಚರಿಯ ಕಾರಣ ಬಿಚ್ಚಿಟ್ಟ ಮಾಲಿನ್ಯ ನಿಯಂತ್ರಣ ಮಂಡಳಿ

ಮೊನ್ನೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರದ ಸ್ವಚ್ಚ ಸರ್ವೇಕ್ಷಣಾದಲ್ಲಿ ಬೆಂಗಳೂರಿನ ಪಟ್ಟ 28 ರಿಂದ 36ನೇ ಸ್ಥಾನಕ್ಕೆ ಕುಸಿದಿದೆ. ಬೆಂಗಳೂರಿನಲ್ಲಿ ಮಾಲಿನ್ಯ ಹೆಚ್ಚಳಕ್ಕೆ ರಸ್ತೆ ಗುಂಡಿಗಳು, ಲೇ ಔಟ್ ಗಳೇ ಕಾರಣ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತಿದ್ದರೆ, ಇತ್ತ ದೀಪಾವಳಿ ಕೂಡ ಹತ್ತಿರ ಇರುವುದರಿಂದ ವಾಯುಗುಣಮಟ್ಟ ಮತ್ತಷ್ಟು ಹದಗೆಡುವ ಆತಂಕ ಶುರುವಾಗಿದೆ.

ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳಕ್ಕೆ ಅಚ್ಚರಿಯ ಕಾರಣ ಬಿಚ್ಚಿಟ್ಟ ಮಾಲಿನ್ಯ ನಿಯಂತ್ರಣ ಮಂಡಳಿ
ಬೆಂಗಳುರಿನಲ್ಲಿ ಹೆಚ್ಚಿದ ವಾಯು ಮಾಲಿನ್ಯ
ಭಾವನಾ ಹೆಗಡೆ
|

Updated on: Oct 11, 2025 | 10:00 AM

Share

ಬೆಂಗಳೂರು, ಅಕ್ಟೋಬರ್ 11: ಬೆಂಗಳೂರಲ್ಲಿ ದಿನೇ ದಿನೇ ವಾಯುಮಾಲಿನ್ಯ (Air Pollution) ಹೆಚ್ಚಾಗುತ್ತಿದ್ದು, ಜನರ ಆರೋಗ್ಯಕ್ಕೆ ಕುತ್ತು ತರುವ ಸೂಚನೆ ನೀಡುತ್ತಿದೆ. ಈ ಮಧ್ಯೆ ಇಷ್ಟು ಹದಗೆಟ್ಟ ವಾತಾವರಣಕ್ಕೆ ಕಾರಣವೇನೆಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಕೇವಲ ವಾಹನದಿಂದ ಉತ್ಪತ್ತಿಯಾಗುವ ಕಲುಷಿತ ಹೊಗೆ, ಧೂಳಿನ ಕಣಗಳು ಮಾತ್ರವಲ್ಲದೇ ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚದ ಜಿಬಿಎ ನಡೆ ಕೂಡ ರಾಜಧಾನಿಯ ವಾಯುಮಾಲಿನ್ಯ ಹೆಚ್ಚಳ ಮಾಡುತ್ತಿರುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಬಿಚ್ಚಿಟ್ಟಿದೆ. ಗುಂಡಿಗಳಿಂದ ವಾತಾವರಣಕ್ಕೆ ಧೂಳಿನ ಕಣಗಳು ಸೇರಿ ವಾಯುಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಮಂಡಳಿ ಆರೋಪ ಮಾಡುತ್ತಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ರಸ್ತೆಗುಂಡಿಗಳೂ ಕಾರಣ

ಸದ್ಯ ಬೆಂಗಳೂರಿನಲ್ಲಿ ವಾಹನದಟ್ಟಣೆ ಜೊತೆಗೆ  ಲೇ ಔಟ್ ಗಳ ನಿರ್ಮಾಣಕ್ಕೆ ಮರಗಳನ್ನು ಕಡಿಯುತ್ತಿರುವುದು ಹಾಗೂ ರಸ್ತೆಗುಂಡಿಗಳಿಂದ ಬರುತ್ತಿರುವ ಧೂಳಿನ ಕಣಗಳು ವಾಯುಮಾಲಿನ್ಯ ಏರಿಕೆಗೆ ಕಾರಣವಾಗುತ್ತಿದೆ. ರಸ್ತೆ ಗುಂಡಿಗಳಿಂದ ಎದುರಾಗುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಗುಂಡಿಗಳನ್ನು ಮುಚ್ಚಲು ಎಷ್ಟೇ ಗಡುವು ಕೊಟ್ಟರೂ ಕೆಲಸ ಮುಗಿಯುವಲ್ಲಿ ವಿಳಂಬವಾಗುತ್ತಲೇ ಇದೆ. ಇದರಿಂದಾಗಿ ಧೂಳಿನ ಕಣಗಳು ವಾತಾವರಣ ಸೇರಿ ಗಾಳಿಯನ್ನು ಕಲುಷಿತಗೊಳಿಸುತ್ತಿರುವುದು ವಾಯುಮಾಲಿನ್ಯ ಇನ್ನಷ್ಟು ಹೆಚ್ಚುತ್ತಿದೆ. ಸದ್ಯ ರಾಜಧಾನಿಯ ರಸ್ತೆಗಳಲ್ಲಿ ಉತ್ಪತ್ತಿಯಾಗುತ್ತಿರುವ ಧೂಳಿನ ಕಣಗಳ ಪರ್ಟಿಕ್ಯುಲೇಟ್ ಮ್ಯಾಟರ್ ನಿಯಂತ್ರಣದಲ್ಲೂ ಎಡವಿರುವುದು ಮಾಲಿನ್ಯ ಹೆಚ್ಚಳಕ್ಕೆ ಮತ್ತೊಂದು ರೀತಿಯ ಸಂಕಷ್ಟ ತಂದಿಟ್ಟಿದೆ.

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಮಾಲಿನ್ಯ

ಬೆಂಗಳೂರಲ್ಲಿ ಮಿತಿಮೀರಿದ ವಾಹನಗಳ ದಟ್ಟಣೆ ಜೊತೆಗೆ ವಾಹನಗಳ ಸಂಚಾರ ವೇಳೆ ಬಿಡುಗಡೆಯಾಗುತ್ತಿರುವ ಕಾರ್ಬನ್ ಡೈ ಆಕ್ಸೈಡ್ ವಾತಾವರಣ ಸೇರಿ ವಾಯುಗುಣಮಟ್ಟ ಕುಸಿತವಾಗುತ್ತಿರುವುದು ಬೆಂಗಳೂರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸದ್ಯ ವಾಯುಗುಣಮಟ್ಟದಲ್ಲಿ 2024ರಲ್ಲಿ 28ನೇ ಸ್ಥಾನ ಪಡೆದಿದ್ದ ಬೆಂಗಳೂರು ಇದೀಗ ಈ ವರ್ಷದ ಸ್ವಚ್ಚ ಸರ್ವೇಕ್ಷಣ್​ನಲ್ಲಿ 36ನೇ ಸ್ಥಾನಕ್ಕೆ ಕುಸಿದಿರುವುದು ರಾಜಧಾನಿಯ ವಾತಾವರಣ ಎಷ್ಟರಮಟ್ಟಿಗೆ ಕಲುಷಿತ ಆಗುತ್ತಿದೆ ಎನ್ನುವುದನ್ನು ಅನಾವರಣ ಮಾಡಿದೆ. ಇತ್ತ ಹದಗೆಟ್ಟ ವಾತಾವರಣದಿಂದ ಬೆಂಗಳೂರು ನಿವಾಸಿಗಳ ಜೀವಿತಾವಧಿ ಮೇಲೂ ದುಷ್ಪರಿಣಾಮ ಉಂಟಾಗುತ್ತಿದ್ದು, ಆಯಸ್ಸಿನ 2 ವರ್ಷ ಕಡಿಮೆಯಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.

ಇದನ್ನೂ ಓದಿ ವಾಯುಮಾಲಿನ್ಯ ಗಣನೀಯ ಹೆಚ್ಚಳ: ಕೇಂದ್ರದ ಪಟ್ಟಿಯಲ್ಲಿ ಮತ್ತಷ್ಟು ಕುಸಿದ ಬೆಂಗಳೂರು

ಸದ್ಯ ಬೆಂಗಳೂರಲ್ಲಿ ಪ್ರತಿದಿನ ಸುಮಾರು 1 ಕೋಟಿಗೂ ಹೆಚ್ಚು ವಾಹನಗಳು ಸಂಚಾರ ನಡೆಸುತ್ತವೆ. ರಸ್ತೆ ಅಗಲೀಕರಣ, ರಸ್ತೆ ಗುಂಡಿಗಳ ಮುಚ್ಚುವಿಕೆಯ ಕಾಮಗಾರಿಯೂ ನಡೆಯುತ್ತಿವೆ. ದೀಪಾವಳಿ ಹಬ್ಬ ಕೂಡ ಹತ್ತಿರವಾಗುತ್ತಿದ್ದು , ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುವುದರಿಂದ ಮತ್ತಷ್ಟು ಮಾಲಿನ್ಯ ಹೆಚ್ಚಾಗುವ ಸಾಧ್ಯತೆ ಕೂಡ ದಟ್ಟವಾಗಿದೆ. ಇವೆಲ್ಲದರಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಇನ್ನಷ್ಟು ಹದಗೆಡುವ ಸಾಧ್ಯತೆಗಳಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು