AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Aero India 2021: ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವೆ.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!
ಏರೋ ಇಂಡಿಯಾ 2021
Skanda
|

Updated on:Feb 03, 2021 | 12:02 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವ ಮೂಲಕ ಕೇಂದ್ರ ಸರ್ಕಾರದ ಬಹು ಆಕಾಂಕ್ಷಿ ಯೋಜನೆಯ ಮಹತ್ವ ಸಾರಿದವು.

ಇತ್ತೀಚೆಗಷ್ಟೇ ಆಕ್ಸ್​ಫರ್ಡ್ ಭಾಷೆಗಳಲ್ಲಿ​, ಆತ್ಮನಿರ್ಭರತಾ ಪದವನ್ನು ವರ್ಷದ ಹಿಂದಿ ಪದವೆಂದು ಘೋಷಿಸಿದೆ. ಇದೀಗ ಏರೋ ಇಂಡಿಯಾ 2021ರಲ್ಲಿ ಕೂಡಾ ಆತ್ಮನಿರ್ಭರ ಪರಿಕಲ್ಪನೆಗೆ ಆದ್ಯತೆ ನೀಡಲಾಗಿದೆ. ಏರ್​ ಶೋ ಉದ್ಘಾಟಿಸುವ ವೇಳೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಆತ್ಮನಿರ್ಭರ ಭಾರತದ ಆಲೋಚನೆಯ ಕುರಿತು ಮಾತನಾಡಿದ್ದರು.

ಭಾರತವು ಅತ್ಯುತ್ಕೃಷ್ಟ ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಇದು ಭಾರತ ಸ್ವಾವಲಂಬಿ ಆಗಿರುವುದರ ಸಂಕೇತ. ಇದು ನಮ್ಮ ದೇಶಕ್ಕೆ ಹೆಮ್ಮೆಯಷ್ಟೇ ಅಲ್ಲದೇ, ಬೇರೆ ದೇಶಗಳಿಗೆ ಕೊಡುವ ಸಂದೇಶವೂ ಆಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದರು.

ಈ ಬಾರಿ ಒಟ್ಟು 63 ವಿಮಾನಗಳಿಂದ ಪ್ರದರ್ಶನ ನಡೆಯಲಿದ್ದು ದಿನಕ್ಕೆ ಎರಡು ಬಾರಿ 42 ವಿಮಾನಗಳು ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ. ಡಕೋಟಾ, ಸುಖೋಯ್, ರಫೆಲ್, ಎಲ್​ಸಿಹೆಚ್, ಎಲ್​ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್, ಹೆಲಿಕಾಫ್ಟರ್​ಗಳಿಂದ ಪ್ರದರ್ಶನ ನಡೆಯಲಿದೆ.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!

Published On - 11:58 am, Wed, 3 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!