AK-47: ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಅತ್ಯಾಧುನಿಕ ಘಾತಕ ರೈಫಲ್ ಕಳವು; ಶೋಧಕ್ಕಾಗಿ ವಿಶೇಷ ತಂಡ ರಚನೆ, ಅಧಿಕಾರಿಗಳಲ್ಲಿ ಆತಂಕ

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಧಾವಿಸಿದ್ದು, ಕಟ್ಟೆಚ್ಚರದ ಸಂದೇಶ ರವಾನಿಸಲಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯ ನೆರವಿನಿಂದ ವ್ಯಾಪಕವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

AK-47: ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಅತ್ಯಾಧುನಿಕ ಘಾತಕ ರೈಫಲ್ ಕಳವು; ಶೋಧಕ್ಕಾಗಿ ವಿಶೇಷ ತಂಡ ರಚನೆ, ಅಧಿಕಾರಿಗಳಲ್ಲಿ ಆತಂಕ
ಐಟಿಬಿಪಿ ಯೋಧರು ಮತ್ತು ಎಕೆ-47 ರೈಫಲ್ (ಸಂಗ್ರಹ ಚಿತ್ರ)
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 19, 2022 | 9:28 AM

ಬೆಳಗಾವಿ: ಚೀನಾ ಗಡಿ ಕಾವಲು ಜವಾಬ್ದಾರಿ ಹೊತ್ತಿರುವ ಐಟಿಬಿಪಿ (Indo Tibetan Border Police – ITBP) ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್​ಗಳು (AK-47 Rifle) ಕಳುವಾಗಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅತ್ಯಂತ ಘಾತಕ ಸ್ವರೂಪದ ರೈಫಲ್​ಗಳು (Assualt Rifles) ದುಷ್ಕರ್ಮಿಗಳ ಕೈಗೆ ಸಿಕ್ಕರೆ ಅನಾಹುತವೇ ಸಂಭವಿಸುತ್ತದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಉನ್ನತ ಅಧಿಕಾರಿಗಳು ಧಾವಿಸಿದ್ದು, ಕಟ್ಟೆಚ್ಚರದ ಸಂದೇಶ ರವಾನಿಸಲಾಗಿದೆ. ಕರ್ನಾಟಕ ಪೊಲೀಸ್ ಇಲಾಖೆಯ (Karnataka Police) ನೆರವಿನಿಂದ ವ್ಯಾಪಕವಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬೆಟಾಲಿಯನ್​ನ ಯೋಧರಾದ ರಾಜೇಶ್​ಕುಮಾರ್, ಸಂದೀಪ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್​ಗಳು ಕಳುವಾಗಿವೆ. ಆಗಸ್ಟ್​ 17ರಂದು ರಾತ್ರಿ ಮಲಗುವಾಗ ಎಕೆ-47 ರೈಫಲ್​ಗಳನ್ನು ವಾಡಿಕೆಯಂತೆ ಭದ್ರತೆಯಲ್ಲಿಯೇ ಇರಿಸಲಾಗಿತ್ತು. ಬಿಗಿ ಭದ್ರತೆಯ ನಡುವೆಯೂ ಘಾತಕ ರೈಫಲ್​ಗಳು ಯೋಧರ ಸುಪರ್ದಿಯಿಂದ ತಪ್ಪಿಹೋಗಿರುವುದು ಆತಂಕಕ್ಕೆ ಕಾರಣವಾಗಿದೆ. ರೈಫಲ್ ಪತ್ತೆಗಾಗಿ ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ‌ತಂಡ ರಚಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಐಟಿಬಿಪಿ ಅಧಿಕಾರಿಗಳು ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಜುಲೈ 29ರಿಂದ ಹಾಲಬಾವಿಯಲ್ಲಿ ಐಟಿಬಿಪಿ ವಿಶೇಷ ತರಬೇತಿ ಶಿಬಿರ ನಡೆಸುತ್ತಿದೆ. ಆಗಸ್ಟ್ 17ರಂದು ರಾತ್ರಿ ಈ ಇಬ್ಬರೂ ಸಿಬ್ಬಂದಿ ಬ್ಯಾರಕ್​ನ 3ನೇ ಮಹಡಿಯಲ್ಲಿ ರೈಫಲ್​ಗಳನ್ನು ಇರಿಸಿಕೊಂಡು ಮಲಗಿದ್ದರು. ಆಗ ಅವರಿಂದ ರೈಫಲ್ ಅಪಹರಿಸಲಾಗಿದೆ ಎಂದು ಅಧಿಕಾರಿಗಳು ದೂರು ನೀಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಐಟಿಬಿಪಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಹುಡುಕಾಟಕ್ಕೆ ನೆರವಾಗುತ್ತಿದ್ದಾರೆ. ಡಿವೈಎಸ್​ಪಿ ಪಿ.ವಿ.ಸ್ನೇಹಾ ಅವರೊಂದಿಗೆ ಎಸಿಪಿ ಎಸ್.ವಿ.ಗಿರೀಶ್, ಇನ್​ಸ್ಪೆಕ್ಟರ್ ಐ.ಎಸ್.ಗುರುನಾಥ ಅವರನ್ನು ಶೋಧ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ