AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ SIT ದಾಳಿ

ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಿಡಿಸಿರುವ ಮತಗಳ್ಳತನ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದ್ದು,ರಾಷ್ಟ್ರ ರಾಜ್ಯಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಈ ಸಂಬಂಧ ದೇಶಾದ್ಯಂತ ಬಿಜೆಪಿ ವಿರುದ್ಧ ಆರಂಭಿಸಿರುವ ಮತಗಳ್ಳತನ ಆಭಿಯಾನಕ್ಕೆ ಪ್ರಮುಖ ಸಾಕ್ಷಿಯಾಗಿ ಬಳಕೆಯಾಗಿದ್ದ ಕರ್ನಾಟಕದ ಆಳಂದ ಕ್ಷೇತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ತನಿಖೆ ಚುರುಕು ಪಡೆದುಕೊಂಡಿದೆ. ಇದೀಗ ಆಳಂದ ಕ್ಷೇತ್ರದ ಬಿಜೆಪಿ ಶಾಸಕನ ಮನೆ ಮೇಲೆ ಎಸ್​​ಐಟಿ ದಾಳಿ ಮಾಡಿದೆ.

ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ SIT ದಾಳಿ
Subhash Guttedar
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 17, 2025 | 3:15 PM

Share

ಕಲಬುರಗಿ, (ಅಕ್ಟೋಬರ್ 17):  ಕಲಬುರಗಿ, (ಅಕ್ಟೋಬರ್ 17): ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ (Aland Vote Theft Case) ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ಇಂದು (ಅಕ್ಟೋಬರ್ 17) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ (subhash guttedar) ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ನಿನ್ನೆ ಅಷ್ಟೇ ಎಸ್​ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎನ್ನುವಾತನ ಮನೆಯಲ್ಲಿ ದಾಳಿ ಮಾಡಿತ್ತು. ಆ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಒಟ್ಟು 15 ಮೊಬೈಲ್ ಫೋನ್, 7 ಲ್ಯಾಪ್​ ಟಾಪ್​​ಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆಸಿದೆ.

ಇದನ್ನೂ ಓದಿ: ವೋಟ್ ಚೋರಿ ಕೇಸ್​​: ಕಲಬುರಗಿಯ 5 ಮನೆಗಳ ಮೇಲೆ ಎಸ್​ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ

ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್ ಐಟಿ ಕೈಹಾಕಿದ್ದು ತನಿಖೆ ತೀವ್ರಗೊಳಿಸಿದೆ. ಬಿಜೆಪಿಯ ಇಬ್ಬರು ನಾಯಕರ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮಲ್ಲಿಕಾರ್ಜುನ ಮಹಾಂತಗೋಳ ಮನೆ ಹಾಗೂ ಕಚೇರಿ ಮೇಲೂ ಎಸ್​ಐಟಿ ದಾಳಿ ಮಾಡಿದೆ. 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ, ಅಕ್ರಂ ಎಂಬ ವ್ಯಕ್ತಿ‌ಗೆ ಡೀಲ್ ಕೊಟ್ಟಿದ್ದ ಎನ್ನುವ ಅಂಶ ತಿಳಿದುಬಂದಿದೆ. ಹೀಗಾಗಿ ಎಸ್​ಐಟಿ ಮಲ್ಲಿಕಾರ್ಜುನ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

2023ರಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿತ್ತು. ಮತ್ತೊಂದೆಡೆ ಈ ಮತಗಳ್ಳತನ ಸಂಬಂಧ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಬಹಿರಂಗ ಆರೋಪ ಮಾಡಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ರಾಹುಲ್ ಗಾಂಧಿ ಮೊದಲು ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳನವಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆಳಂದ ಕ್ಷೇತ್ರದ ಮತಗಳ್ಳತನ ಪ್ರಕರಣವನ್ನು ಎಸ್​ಐಟಿಗೆ ವಹಿಸಿತ್ತು.

Published On - 3:01 pm, Fri, 17 October 25

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More