AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ

ಕೊರೊನಾ ಸಮಯದಲ್ಲಿಯೂ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ವ್ಯಾಪಾರ ವಹಿವಾಟಿನಲ್ಲಿ ನಿರೀಕ್ಷೆಗೂ ಮೀರಿ ಹಣದ ಹೊಳೆ ಹರಿದು ಬಂದಿದೆ.

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ
ಸಾಂದರ್ಭಿಕ ಚಿತ್ರ​
shruti hegde
|

Updated on: Apr 02, 2021 | 12:28 PM

Share

ಬೆಂಗಳೂರು: ದಿನೇ ದಿನೇ ಕೊರೊನಾ ಹಾವಳಿ ಹೆಚ್ಚುತ್ತಿದೆ. ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆಯೂ ರಾಜ್ಯದಲ್ಲಿ ಮದ್ಯ ಭಾರೀ ಪ್ರಮಾಣದಲ್ಲಿ ವ್ಯಾಪಾರ ನಡೆಸುತ್ತಿದ್ದು, ಅಬಕಾರಿ ಇಲಾಖೆ ಕೋಟ್ಯಾನುಕೋಟಿ ಲಾಭ ಗಳಿಸಿಕೊಂಡಿದೆ.

ಮದ್ಯ ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಹಣದ ಹೊಳೆ ಹರಿದು ಬಂದಿದೆ. 2020-2021ನೇ ಸಾಲಿನಲ್ಲಿ  ₹ 22,700 ಕೋಟಿ ಆದಾಯ ನಿರೀಕ್ಷಿಸಿದ್ದ ಸರ್ಕಾರ, 2020 ಏಪ್ರಿಲ್​ನಿಂದ 2021 ಮಾರ್ಚ್ ಅಂತ್ಯದವರೆಗೆ ಬರೋಬ್ಬರಿ ₹ 23,131.28 ಕೋಟಿ ಆದಾಯ ಸಂಗ್ರಹಿಸಿದೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗೂ ಮೀರಿ ₹ 431 ಕೋಟಿ ಹಣ ಸಂಗ್ರಹವಾಗಿದೆ.

2019-2020ನೇ ಸಾಲಿನಲ್ಲಿ ಎಣ್ಣೆಯಿಂದ ₹ 21,583.95 ಕೋಟಿ ಸರ್ಕಾರದ ಬೊಕ್ಕಸಕ್ಕೆ ಬಂದಿತ್ತು. ಕಳೆದ ವರ್ಷಕ್ಕಿಂತ ₹ 1,547.33 ಕೋಟಿ ಹೆಚ್ಚುವರಿ ಆದಾಯ ಈ ಬಾರಿ ಸಂಗ್ರಹವಾಗಿದೆ. 2019-2020ನೇ ಸಾಲಿನಲ್ಲಿ 600.92 ಲಕ್ಷ ಕ್ಯೂಬಿಕ್ ಬಾಕ್ಸ್ ಹಾಟ್ ಡ್ರಿಂಕ್ಸ್ ಹಾಗೂ 289.60 ಕ್ಯೂಬಿಕ್ ಬಾಕ್ಸ್ ಬಿಯರ್ ಬಾಟಲಿಗಳು ವ್ಯಾಪಾರವಾಗಿವೆ. ಕೊವಿಡ್ ನಡುವೆಯೂ 2020-2021ನೇ ಸಾಲಿನಲ್ಲಿ 583.23 ಲಕ್ಷ ಕ್ಯೂಬಿಕ್ ಬಾಕ್ಸ್ & ಹಾಟ್ ಡ್ರಿಂಕ್ಸ್ ಹಾಗೂ 237.82 ಕ್ಯೂಬಿಕ್ ಬಿಯರ್ ಬಾಕ್ಸ್ ಮಾರಾಟವಾಗಿವೆ. ಕಳೆದ ವರ್ಷಕ್ಕಿಂತ ಕಡಿಮೆ ಎಣ್ಣೆ ಮಾರಾಟವಾದರೂ ಆದಾಯದಲ್ಲಿ ನಿರೀಕ್ಷೆಗೂ ಮೀರಿ ಅಬಕಾರಿಗೆ ಲಾಭ ಪಡೆದಿದೆ.

ಕೊರೊನಾ ಹಿನ್ನೆಲೆ ಪಬ್, ಬಾರ್‌ಗಳಿಗೆ ನಿರ್ಬಂಧ ಹೇರುವ ಸಾಧ್ಯತೆ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಪಬ್, ಬಾರ್‌ಗಳಿಗೆ ಹಾಗೂ ಪಾರ್ಕ್ ಮತ್ತು ಅಪಾರ್ಟ್ಮೆಂಟ್​ಗಳಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಥಿಯೇಟರ್‌ಗಳಿಗೆ ಶೇ. 50ರಷ್ಟು ಭರ್ತಿಗೆ ಚಿಂತನೆ ಮಾಡಲಾಗಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕೊರೊನಾ.. ಇದಕ್ಕೆ ಸರ್ಕಾರವೇ ಕಾರಣನಾ?

Alia Bhatt ನಟಿ ಆಲಿಯಾ ಭಟ್‌ಗೆ ಕೊರೊನಾ ಸೋಂಕು ದೃಢ

(Alcohol trade in Karnataka increased during the time of Corona)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!