Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ

ಕೊರೊನಾ ಸಮಯದಲ್ಲಿಯೂ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ವ್ಯಾಪಾರ ವಹಿವಾಟಿನಲ್ಲಿ ನಿರೀಕ್ಷೆಗೂ ಮೀರಿ ಹಣದ ಹೊಳೆ ಹರಿದು ಬಂದಿದೆ.

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ
ಸಾಂದರ್ಭಿಕ ಚಿತ್ರ​
Follow us
shruti hegde
|

Updated on: Apr 02, 2021 | 12:28 PM

ಬೆಂಗಳೂರು: ದಿನೇ ದಿನೇ ಕೊರೊನಾ ಹಾವಳಿ ಹೆಚ್ಚುತ್ತಿದೆ. ನಿರೀಕ್ಷೆಗೂ ಮೀರಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಡುವೆಯೂ ರಾಜ್ಯದಲ್ಲಿ ಮದ್ಯ ಭಾರೀ ಪ್ರಮಾಣದಲ್ಲಿ ವ್ಯಾಪಾರ ನಡೆಸುತ್ತಿದ್ದು, ಅಬಕಾರಿ ಇಲಾಖೆ ಕೋಟ್ಯಾನುಕೋಟಿ ಲಾಭ ಗಳಿಸಿಕೊಂಡಿದೆ.

ಮದ್ಯ ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಹಣದ ಹೊಳೆ ಹರಿದು ಬಂದಿದೆ. 2020-2021ನೇ ಸಾಲಿನಲ್ಲಿ  ₹ 22,700 ಕೋಟಿ ಆದಾಯ ನಿರೀಕ್ಷಿಸಿದ್ದ ಸರ್ಕಾರ, 2020 ಏಪ್ರಿಲ್​ನಿಂದ 2021 ಮಾರ್ಚ್ ಅಂತ್ಯದವರೆಗೆ ಬರೋಬ್ಬರಿ ₹ 23,131.28 ಕೋಟಿ ಆದಾಯ ಸಂಗ್ರಹಿಸಿದೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗೂ ಮೀರಿ ₹ 431 ಕೋಟಿ ಹಣ ಸಂಗ್ರಹವಾಗಿದೆ.

2019-2020ನೇ ಸಾಲಿನಲ್ಲಿ ಎಣ್ಣೆಯಿಂದ ₹ 21,583.95 ಕೋಟಿ ಸರ್ಕಾರದ ಬೊಕ್ಕಸಕ್ಕೆ ಬಂದಿತ್ತು. ಕಳೆದ ವರ್ಷಕ್ಕಿಂತ ₹ 1,547.33 ಕೋಟಿ ಹೆಚ್ಚುವರಿ ಆದಾಯ ಈ ಬಾರಿ ಸಂಗ್ರಹವಾಗಿದೆ. 2019-2020ನೇ ಸಾಲಿನಲ್ಲಿ 600.92 ಲಕ್ಷ ಕ್ಯೂಬಿಕ್ ಬಾಕ್ಸ್ ಹಾಟ್ ಡ್ರಿಂಕ್ಸ್ ಹಾಗೂ 289.60 ಕ್ಯೂಬಿಕ್ ಬಾಕ್ಸ್ ಬಿಯರ್ ಬಾಟಲಿಗಳು ವ್ಯಾಪಾರವಾಗಿವೆ. ಕೊವಿಡ್ ನಡುವೆಯೂ 2020-2021ನೇ ಸಾಲಿನಲ್ಲಿ 583.23 ಲಕ್ಷ ಕ್ಯೂಬಿಕ್ ಬಾಕ್ಸ್ & ಹಾಟ್ ಡ್ರಿಂಕ್ಸ್ ಹಾಗೂ 237.82 ಕ್ಯೂಬಿಕ್ ಬಿಯರ್ ಬಾಕ್ಸ್ ಮಾರಾಟವಾಗಿವೆ. ಕಳೆದ ವರ್ಷಕ್ಕಿಂತ ಕಡಿಮೆ ಎಣ್ಣೆ ಮಾರಾಟವಾದರೂ ಆದಾಯದಲ್ಲಿ ನಿರೀಕ್ಷೆಗೂ ಮೀರಿ ಅಬಕಾರಿಗೆ ಲಾಭ ಪಡೆದಿದೆ.

ಕೊರೊನಾ ಹಿನ್ನೆಲೆ ಪಬ್, ಬಾರ್‌ಗಳಿಗೆ ನಿರ್ಬಂಧ ಹೇರುವ ಸಾಧ್ಯತೆ ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಪಬ್, ಬಾರ್‌ಗಳಿಗೆ ಹಾಗೂ ಪಾರ್ಕ್ ಮತ್ತು ಅಪಾರ್ಟ್ಮೆಂಟ್​ಗಳಿಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಥಿಯೇಟರ್‌ಗಳಿಗೆ ಶೇ. 50ರಷ್ಟು ಭರ್ತಿಗೆ ಚಿಂತನೆ ಮಾಡಲಾಗಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕೊರೊನಾ.. ಇದಕ್ಕೆ ಸರ್ಕಾರವೇ ಕಾರಣನಾ?

Alia Bhatt ನಟಿ ಆಲಿಯಾ ಭಟ್‌ಗೆ ಕೊರೊನಾ ಸೋಂಕು ದೃಢ

(Alcohol trade in Karnataka increased during the time of Corona)

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ