AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪ ಏನು ಹೇಳಿದ್ದರು ನೆನಪು ಮಾಡ್ಕೊಳಿ: ಸಂಸದ ಪ್ರತಾಪ್​ಗೆ ಸಾರಿಗೆ ನೌಕರರಿಂದ ಟಕ್ಕರ್

ಸಾರಿಗೆ ನೌಕರರು ಯಾರೂ ಅವಿದ್ಯಾವಂಥರಲ್ಲ, ಎಲ್ಲರೂ ವಿದ್ಯಾವಂಥರೇ‌. ಆರನೇ ವೇತನ ಆಯೋಗ ಮೊದಲು ಜಾರಿ ಮಾಡಿ. ಅದು ಬಿಟ್ಟು ಹೋರಾಟಗಾರರ ಬಗ್ಗೆ ಮಾತನಾಡುವುದಲ್ಲ: ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್

ವಿರೋಧ ಪಕ್ಷದಲ್ಲಿದ್ದಾಗ ಯಡಿಯೂರಪ್ಪ ಏನು ಹೇಳಿದ್ದರು ನೆನಪು ಮಾಡ್ಕೊಳಿ: ಸಂಸದ ಪ್ರತಾಪ್​ಗೆ ಸಾರಿಗೆ ನೌಕರರಿಂದ ಟಕ್ಕರ್
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Apr 08, 2021 | 4:23 PM

Share

ಬೆಂಗಳೂರು: ಸಾರಿಗೆ ನೌಕರರು ಯಾರೂ ಅವಿದ್ಯಾವಂತರು ಅಲ್ಲ. ಸುಮ್ಮನೆ ಹೋರಾಟಗಾರರ ವಿರುದ್ಧ ಮಾತಾಡಬೇಡಿ. ಮೊದಲು 6ನೇ ವೇತನ ಆಯೋಗ ಜಾರಿ ಮಾಡಿ. ಇಲ್ಲಿ ಯಾರೂ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ನಮ್ಮ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಈಡೇರಿಸಲಿ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹಗೆ ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ತಿರುಗೇಟು ಕೊಟ್ಟಿದ್ದಾರೆ.

ರೈತರ ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ KSRTC ನೌಕರರ ದಾರಿ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ನಾಯಕನನ್ನಾಗಿ ಮಾಡಿಕೊಂಡು ಹೋರಾಟ ಮಾಡುತ್ತಿರುವುದೇ ತಪ್ಪು ನಿರ್ಧಾರ. KSRTC ಈಗ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಹೋರಾಟ ನಡೆಸುವುದು ಸರಿಯಲ್ಲ. ಈಗ ಹೋರಾಟ ಮುಂದುವರಿದರೆ ಖಾಸಗೀಕರಣದ ಕೂಗು ಏಳುತ್ತದೆ. ಜನರೇ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಟೀಕಿಸಿದ್ದ ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿಕೆಯನ್ನು ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ಖಂಡಿಸಿದ್ದಾರೆ.

ಸಾರಿಗೆ ನೌಕರರು ಯಾರೂ ಅವಿದ್ಯಾವಂಥರಲ್ಲ, ಎಲ್ಲರೂ ವಿದ್ಯಾವಂಥರೇ‌. ಆರನೇ ವೇತನ ಆಯೋಗ ಮೊದಲು ಜಾರಿ ಮಾಡಿ. ಅದು ಬಿಟ್ಟು ಹೋರಾಟಗಾರರ ಬಗ್ಗೆ ಮಾತನಾಡುವುದಲ್ಲ. ಯಾರು ಯಾರನ್ನೂ ದಾರಿ ತಪ್ಪಿಸ್ತಿಲ್ಲ. ನಮ್ಮ ಬೇಡಿಕೆಯನ್ನು ಸಿಎಂ ಯಡಿಯೂರಪ್ಪ ಈಡೇರಿಸಲಿ. ಮೊದಲು ವಿರೋಧ ಪಕ್ಷದಲ್ಲಿದ್ದಾಗ ಸಿಎಂ ಯಡಿಯೂರಪ್ಪ ಏನು ಹೇಳಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ ಎಂದು ಅವರು ಸಂಸದ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದರು.

ಸಂಸದ ಪ್ರತಾಪ್ ಸಿಂಹ ಏನಂದಿದ್ದರು? ರೈತರ ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ KSRTC ನೌಕರರ ದಾರಿ ತಪ್ಪಿಸುತ್ತಿದ್ದಾರೆ. ಆ ಮುಖಂಡನನ್ನು ನಾಯಕನನ್ನಾಗಿ ಮಾಡಿಕೊಂಡು ಹೋರಾಟ ಮಾಡುತ್ತಿರುವುದೇ ತಪ್ಪು ನಿರ್ಧಾರ. KSRTC ಈಗ ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಹೋರಾಟ ನಡೆಸುವುದು ಸರಿಯಲ್ಲ. ಈಗ ಹೋರಾಟ ಮುಂದುವರಿದರೆ ಖಾಸಗೀಕರಣದ ಕೂಗು ಏಳುತ್ತದೆ. ಜನರೇ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನರು ಸಾರಿಗೆ ಸಿಬ್ಬಂದಿ ವಿರುದ್ದ ಧ್ವನಿ ಎತ್ತುವಂತೆ ಮಾಡಬೇಡಿ. ಕೆಎಸ್​ಆರ್​ಟಿಸಿ ಸಿಬ್ಬಂದಿ ಮೇಲೆ ಮೇಲೆ ಜನರಿಟ್ಟಿರುವ ಪ್ರೀತಿ ಕಳೆದುಕೊಳ್ಳಬೇಡಿ. ಎಸ್ಮಾ ಜಾರಿ ಮಾಡುವ ಪರಿಸ್ಥಿತಿ ತಂದುಕೊಳ್ಳಬೇಡಿ. ಸಿದ್ದರಾಮಯ್ಯ ಬೇಡಿಕೆ ಈಡೇರಿಸಿ ಎಂದು ಹೇಳುತ್ತಾರೆ. ಆದರೆ, ಅವರ ಅವಧಿಯಲ್ಲಿ ಈ ಕೆಲಸ ಮಾಡಬಹುದಿತ್ತಲ್ಲಾ? ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.

ಯಾರ ಹೆಸರನ್ನೂ ನೇರವಾಗಿ ಹೇಳದೇ ಟೀಕೆ ಮುಂದುವರೆಸಿದ ಸಂಸದ ಪ್ರತಾಪ್ ಸಿಂಹ, ‘ಆ ಮುಖಂಡನನ್ನು ಕೆಎಸ್​ಆರ್​ಟಿಸಿ ನೌಕರರು ತಮ್ಮ ನಾಯಕ ಎಂದು ಮಾಡಿಕೊಡದ್ದೇ ತಪ್ಪು ನಿರ್ಧಾರ. ರೈತರನ್ನು ದಾರಿ ತಪ್ಪಿಸಿದವರನ್ನು ಕೆಎಸ್​ಆರ್​ಟಿಸಿ ನೌಕರರು ತಮ್ಮ ನಾಯಕನಾಗಿ ಮಾಡಿಕೊಂಡಾಗ ಇವರು ದಾರಿ ತಪ್ಪದೆ ಇರುತ್ತಾರಾ? ಪ್ರೊ.‌ ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರು ಇದ್ದಾಗ ರೈತ ಮುಖಂಡರು, ಹೋರಾಟದ ಬಗ್ಗೆ ಗೌರವವಿತ್ತು.

ಅವರಿಬ್ಬರು ಅಸ್ತಂಗತ ಆದ ನಂತರ ಈಗ ಅಂತಹ ಮುಖ ಹೋರಾಟದಲ್ಲಿ ಇಲ್ಲ. ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಆಗುತ್ತಿದೆ. ಕೆಎಸ್​ಆರ್​ಟಿಸಿ ನೌಕರರು ರಾಜ್ಯ ಸರಕಾರ ಸಂಕಷ್ಟದಲ್ಲಿ ಇರುವಾಗ ಈ ರೀತಿ ಹೋರಾಟಕ್ಕೆ ಇಳಿಯುವುದು ತಪ್ಪು. ಇದು ಮುಂದುವರಿದರೆ ಜನರೇ ಈ ವಿಭಾಗದಲ್ಲೂ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನ ಈ ರೀತಿ ಧ್ವನಿ ಎತ್ತುವಂತೆ ಮಾಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆಪೂರ್ವಕ ಮನವಿ ಮಾಡಿಕೊಂಡರು.

ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್​ ಸಂಚಾರ

ಸಾರಿಗೆ ನೌಕರರನ್ನು ಮನವೊಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್​ ಯಡಿಯೂರಪ್ಪ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ