ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ. ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು […]

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್
ಸಾಧು ಶ್ರೀನಾಥ್​

Updated on: Dec 10, 2019 | 1:17 PM

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ.

ಯಾದಗಿರಿ ಚಲೋ- ಏನಿವು ಬೇಡಿಕೆಗಳು..
 ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ..
1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು
2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು ರದ್ದು ಪಡಿಸಬೇಕು..
3. 371 ಜೆ ಅಡಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆಗಳಿಗೆ ಕೆಕೆಆರ್ ಡಿಬಿಯಿಂದ ಅನುದಾನವನ್ನು ನೀಡಬೇಕು ಹಾಗೂ ಖಾಸಗಿ ಶಾಲೆಗಳಿಗೆ ಕನಿಷ್ಟ ವೇತನ ಕೊಡಬೇಕು.
4. 7ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಬೇಕು.. ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಮುಂದಿಡಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us