AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. […]

ಬೆಂಗಳೂರು ಬಿಟ್ಟು ಹೋಗಬೇಡಿ, ಕಾರ್ಮಿಕರಿಗೆ ಎಲ್ಲಾ ಸೌಲಭ್ಯ ಕಲ್ಪಿಸುತ್ತೇವೆ -BSY
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:May 05, 2020 | 2:08 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ತೆರಳುತ್ತಿದ್ದಾರೆ. ಹಾಗಾಗಿ ಬಿಲ್ಡರ್​ಗಳ ಜೊತೆ ಸಭೆ ನಡೆಸಿ ವಲಸೆ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾರ್ಮಿಕರು ಗಾಳಿ ಸುದ್ದಿಗೆ ಕಿವಿಗೊಡಬಾರದು. ತಪ್ಪುಗ್ರಹಿಕೆಯಿಂದ ಬೆಂಗಳೂರು ತೊರೆಯಬೇಡಿ. ಕಾರ್ಮಿಕರಿಗೆ ಎಲ್ಲ ಸೌಲಭ್ಯವನ್ನು ಕಲ್ಪಿಸುತ್ತೇವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ರಾಜ್ಯದಲ್ಲಿ ಕೆಂಪು ವಲಯವನ್ನು ಹೊರತುಪಡಿಸಿ ಉಳಿದೆಡೆ ವ್ಯಾಪಾರ, ಕೈಗಾರಿಕೆಗಳು ಆರಂಭಿಸಬೇಕು. ಕಾರ್ಮಿಕರ ವಲಸೆ ತಪ್ಪಿಸಲು ಊಟ, ವಸತಿ ಸೌಲಭ್ಯ ನೀಡಲಾಗುತ್ತದೆ. ಇನ್ನು ಮುಂದೆಯೇ ಇದೇ ರೀತಿ ಸೌಲಭ್ಯ ನೀಡುತ್ತೇವೆ. ವಾಪಸ್ ಹೋಗುವ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಭರವಸೆ ಬಿಲ್ಡರ್​ಗಳು ನೀಡಿದ್ದಾರೆ. ಇಲ್ಲೇ ಇದ್ದು ಅಗತ್ಯ ಸೌಲಭ್ಯವನ್ನು ಪಡೆದುಕೊಳ್ಳಿ ಎಂದು ಬಿಎಸ್​ವೈ ಮನವಿ ಮಾಡಿದರು.

ರಿಯಾಯಿತಿ ದರದಲ್ಲಿ ಖಾಸಗಿ ಸಂಸ್ಥೆಗಳಿಗೆ ಬಸ್ ಸೇವೆಯನ್ನು ಒದಗಿಸಲು ಬಿಎಂಟಿಸಿ ಸಂಸ್ಥೆ ಮುಂದಾಗಿದೆ. ರೈತರಿಗೆ ಅಗತ್ಯ ಸವಲತ್ತು ಒದಗಿಸುವ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚಿಸುತ್ತಿದ್ದೇನೆ ಎಂದು ಇದೇ ವೇಳೆ ಸಿಎಂ ಯಡಿಯೂರಪ್ಪ ತಿಳಿಸಿದರು.

Published On - 1:56 pm, Tue, 5 May 20

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!